ಚಿಕ್ಕಮಗಳೂರು:ಜಮೀನು ವಿವಾದ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಅರೋಪ ಕೇಳಿ ಬಂದಿದೆ.
ಗೋಪಾಲ ಗ್ರಾಮದ ಮಹಿಳೆ ಗಂಗಮ್ಮ ಹಲ್ಲೆಗೊಳಗಾದ ಮಹಿಳೆ. ಲೋಕೇಶ್ ‌ಹಲ್ಲೆ ಮಾಡಿದ ಆರೋಪಿ. ತರೀಕೆರೆ ತಾಲೂಕಿನ ಗೋಪಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಗಂಡನ ಕುಡಿತದ ಚಟಕ್ಕೆ ಬೇಸತ್ತ ಪತ್ನಿ; ತಾನೂ ವಿಷ ಕುಡಿದು ಮಕ್ಕಳಿಗೂ ವಿಷ ಉಣಿಸಿದಳು
ಗಂಗಮ್ಮ ಮತ್ತು ಗೋಪಾಲ ಗ್ರಾಮದ ಲೋಕೇಶ್ ನಡುವೆ ಜಮೀನು ವಿವಾದ ನಡೆಯುತ್ತಿತ್ತು. ಗಂಗಮ್ಮ ಜಮೀನಿಗಾಗಿ ಹೈ ಕೋರ್ಟ್​​​ನಲ್ಲಿ ಸ್ಟೇ ತಂದಿದ್ದರು. ಈ ವಿಚಾರವಾಗಿ ಕೋಪಗೊಂಡ ಲೋಕೇಶ್,​​ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಅಟ್ಟಾಡಿಸಿ ಹಲ್ಲೆ ಮಾಡಿದ್ದಾನೆ.
ಇದನ್ನೂ ಓದಿ:ಮಾನ್ಸೂನ್ ಸಮಯದಲ್ಲಿ ಫಿಟ್ ಆಗಿರಲು 5 ಸಲಹೆಗಳು ಇಂತಿವೆ…
ತೆಂಗಿನ ತೋಟದಲ್ಲಿ ಮಹಿಳೆಯ ಬಟ್ಟೆ ಹರಿದು ಥಳಿಸಿದ್ದಾನೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಅಟ್ಟಾಡಿಸಿ ಹೊಡೆದ ವಿಡಿಯೋ ವೈರಲ್ ಆಗಿದೆ. ಹಲ್ಲೆ ಸಂಬಂಧ ಪರ ವಿರೋಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಳೆಗಾಲದಲ್ಲಿ ಹೆಚ್ಚಾಗುತ್ತೆ ಜಿಗಣೆಗಳ ಭೀತಿ..!; ರಕ್ತ ಹೀರುವ ಇವುಗಳನ್ನು ಓಡಿಸಲು ಈ 5 ಸಲಹೆಗಳನ್ನು ಪಾಲಿಸಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
