ಯಾದಗಿರಿ:ಕಟ್ಟೆಯಲ್ಲಿ ಮೀನು ಹಿಡಿಯಲು ಹೋದ ವಿದ್ಯಾರ್ಥಿಗಳಿಬ್ಬರು ನೀರು ಪಾಲಾದ ಘಟನೆ ಯಾದಗಿರಿ ನಗರದ ಅಮರ್ ಲೇಔಟ್​ನಲ್ಲಿ ಮಂಗಳವಾರ ಸಂಭವಿಸಿದೆ.
ನಕುಲ್(11) ಮತ್ತು ನಿಹಾಲ್ ಸಿಂಗ್​(11) ಮೃತ ದುರ್ದೈವಿಗಳು. ಶಾಲೆಗೆ ರಜೆ ಹಾಕಿ ನಾಲ್ವರು ಬಾಲಕರು ಕಟ್ಟೆ ಬಳಿ ತೆರಳಿದ್ದರು. ಈ ವೇಳೆ ನಕುಲ್​ ಮತ್ತು ನಿಹಾಲ್​ ಇಬ್ಬರೂ ಮೀನು ಹಿಡಿಯಲು ಮುಂದಾಗಿದ್ದು, ಕಾಲುಜಾರಿ ನೀರಲ್ಲಿ ಬಿದ್ದಿದ್ದಾರೆ. ಭಯಗೊಂಡ ಮತ್ತಿಬ್ಬರು ಮಕ್ಕಳು ಮನೆಗೆ ಓಡಿಹೋಗಿ ವಿಷಯ ತಿಳಿಸಿ ಕುಟುಂಬಸ್ಥರನ್ನು ಕರೆತರುವಷ್ಟರಲ್ಲಿ ನಕುಲ್​ ಮತ್ತು ನಿಹಾಲ್​ ಇಬ್ಬರೂ ನೀರಲ್ಲಿ ಮುಳುಗಿ ದುರಂತ ಅಂತ್ಯ ಕಂಡಿದ್ದರು.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಮಕ್ಕಳ ಶವಗಳನ್ನು ಹೊರತೆಗೆದರು. ಮೃತದೇಹ ಸಿಗುತ್ತಿದ್ದಂತೆ ಪಾಲಕರ ಆಕ್ರಂದ ಮುಗಿಲು ಮುಟ್ಟಿತ್ತು. ಮೃತ ದೇಹಗಳನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಯಾದಗಿರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಸಾರ್ಟಿಸಿ-ಕಾರಿನ​ ನಡುವೆ ಭೀಕರ ಅಪಘಾತ: 5 ವಿದ್ಯಾರ್ಥಿಗಳು ದುರ್ಮರಣ, ಸಾವಲ್ಲೂ ಒಂದಾದ ಸ್ನೇಹಿತರು…

ಮಾತು ಬಾರದ, ಕಿವಿ ಕೇಳದ ಯುವಕನ ಬಾಳು ಬೆಳಗಿದ ಪದವೀಧರೆ! ಮನ ತಟ್ಟುವಂತಿದೆ ವಧುವಿನ ತಂದೆಯ ಆ ಮಾತು

ಇಂದಿನಿಂದ ಅಪ್ಪು ಡಾ. ಪುನೀತ್‌ ರಾಜ್​ಕುಮಾರ್: ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್​ ಪ್ರಶಸ್ತಿ ಸ್ವೀಕರಿಸಿದ ಅಶ್ವಿನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − eight =
Remember me
