ಬೆಂಗಳೂರು:ಹೆಚ್.ಡಿ. ಕುಮಾರಸ್ವಾಮಿ ಮತ್ತು ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವಂತೆ ರಾಜ್ಯ ಸರ್ಕಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಡತಗಳನ್ನು ಕಳುಹಿಸಿತ್ತು, ಆದರೆ,ರಾಜ್ಯಪಾಲರು ಆಗಸ್ಟ್ 28 ರಂದು ಎರಡೂ ಕಡತಗಳನ್ನು ವಾಪಸ್ ಕಳಿಸಿದ್ದಾರೆ. ದಾಖಲೆಗಳು ಕನ್ನಡದಲ್ಲಿದೆ, ಇಂಗ್ಲೀಷ್‌ಗೆ ಅನುವಾದ ಮಾಡಿ ಕಳಿಸಿ ಎಂದು ಕಾರಣ ಕೊಟ್ಟು ವಾಪಸ್ ಕಳಿಸುವ ಮೂಲಕ ಕನ್ನಡ ವಿರೋಧಿ ಧೋರಣೆ ತೋರಿಸಿದ್ದಾರೆ ಎಂದು ರಾಜ್ಯ ಆಮ್ ಆದ್ಮಿ ಪಾರ್ಟಿ ಉಪಾಧ್ಯಕ್ಷ ಡಾ. ರಮೇಶ್ ಬೆಳ್ಳಂಕೊಂಡ ಆರೋಪಿಸಿದ್ದಾರೆ.
2023ರ ನವೆಂಬರ್ ತಿಂಗಳಿನಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ದಾಖಲೆಗಳನ್ನು ನೀಡಿ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿತ್ತು. ಆದರೆ 9 ತಿಂಗಳು ಸುಮ್ಮನೆ ಇದ್ದ ರಾಜ್ಯಪಾಲರು ಆಗಸ್ಟ್ 28 ರಂದು ಇಂಗ್ಲಿಷ್‌ಗೆ ಅನುವಾದ ಮಾಡಿ ಕಳಿಸಿ ಎಂದು ವಾಪಸ್ ಕಳಿಸಿದ್ದಾರೆ. ಕನ್ನಡ ಅರ್ಥವಾಗದೇ ಇದ್ದರೆ ಇಂಗ್ಲಿಷ್‌ಗೆ ಅನುವಾದ ಮಾಡಿ ಕೊಡಿ ಎಂದು ಕೇಳಲು 9 ತಿಂಗಳು ಕಾಯಬೇಕಿತ್ತಾ ಎಂದು ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆ ಮಾಡಿದರು.
ಗೆಹ್ಲೋಟ್ ಕಳೆದ 3 ವರ್ಷದಿಂದ ಕರ್ನಾಟಕದ ರಾಜ್ಯಪಾಲರಾಗಿದ್ದಾರೆ, ಅವರಿಗೆ ಕನ್ನಡ ಬರದೇ ಇದ್ದರೆ, ಒಬ್ಬರು ತರ್ಜುಮೆ ಮಾಡಲು ಕೂಡ ಅವರ ಕಚೇರಿಯಲ್ಲಿ ಸಿಬ್ಬಂದಿಯನ್ನು ಇಟ್ಟುಕೊಂಡಿಲ್ಲವಾ, ಕರ್ನಾಟಕದಲ್ಲಿದ್ದರೂ ಕನ್ನಡದ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯ ಏಕೆ ಎಂದ ಅವರುಬೇರೆ ರಾಜ್ಯದವರು ಕರ್ನಾಟಕದ ರಾಜ್ಯಪಾಲರಾದಾಗ ಕನ್ನಡ-ಇಂಗ್ಲೀಷ್ ತರ್ಜುಮೆ ಮಾಡುವ ಸಿಬ್ಬಂದಿ ಇರಬೇಕಲ್ಲವಾ, ಕನ್ನಡಿಗರು ಏನಾದರೂ ರಾಜ್ಯಪಾಲರಿಗೆ ದೂರು ಕೊಡಬೇಕೆಂದರೆ, ಇಂಗ್ಲಿಷ್‌ನಲ್ಲೇ ಕೊಡಬೇಕಾ, ಕನ್ನಡದಲ್ಲಿ ಕೊಟ್ಟರೆ ಅದನ್ನು ರಾಜ್ಯಪಾಲರು ಅರ್ಥ ಮಾಡಿಕೊಳ್ಳಲು ಯಾಕೆ ವ್ಯವಸ್ಥೆ ಮಾಡಿಕೊಂಡಿಲ್ಲ ಆಕ್ರೋಶ ವ್ಯಕ್ತಪಡಿಸಿದರು.
ಆಮ್ ಆದ್ಮಿ ಪಾರ್ಟಿ ಹಿರಿಯ ನಾಯಕ ಗುರುಮೂರ್ತಿಯವರು ಮಾತನಾಡಿ, ರಾಜ್ಯಪಾಲರ ವರ್ತನೆಯನ್ನು ನೋಡಿದರೆ ಅವರು ಈಗ ಒಂದು ಪಕ್ಷದ ಪರ ಇದ್ದಾರೆ ಎನ್ನುವ ಅನುಮಾನ ಮೂಡುತ್ತಿದೆ. ಗಂಭೀರ ಭ್ರಷ್ಟಾಚಾರ ಆರೋಪಗಳಿದ್ದರೂ, ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದಾಗ ಹಲವು ತಿಂಗಳು ಕಾಯಿಸುವುದು ಸರಿಯಾದ ನಡೆಯಾ ಎಂದರು, ರಾಜ್ಯಪಾಲರು ಈ ಪ್ರಶ್ನೆಗಳಿಗೆ ಉತ್ತರ ಕೊಡಬೇಕು, ಕನ್ನಡಿಗರಿಗೆ ಅವರು ಇದಕ್ಕೆ ಉತ್ತರ ಕೊಡಬೇಕು ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
