ಮೈಸೂರು:ಕರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಸಿನಿಮಾ ಕ್ಷೇತ್ರದ ಜನರಿಗಾಗಿ ಹಲವಾರು ಸ್ಟಾರ್​ ನಟರು ಮುಂದೆ ಬಂದು ಸಹಾಯ ಮಾಡಿದ್ದಾರೆ, ಮಾಡುತ್ತಿದ್ದಾರೆ. ಅದೇ ರೀತಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಕೂಡ ಅಂಥದ್ದೊಂದು ಉದ್ದೇಶಕ್ಕಾಗಿ ಮುಂದೆ ಬಂದಿದ್ದಾರೆ. ಆದರೆ ಅವರು ಈಗ ಕೈಜೋಡಿಸಿ ಕೇಳಿಕೊಂಡಿರುವುದು ಮನುಷ್ಯರಿಗಾಗಿ ಅಲ್ಲ..!!
ಹೌದು.. ಅರಣ್ಯ ಇಲಾಖೆಯ ರಾಯಭಾರಿಯೂ ಆಗಿರುವ ಪ್ರಾಣಿಪ್ರಿಯ ದರ್ಶನ್​ ಇದೀಗ ಮೃಗಾಲಯದ ಪ್ರಾಣಿಗಳ ಪರವಾಗಿ ದನಿ ಎತ್ತಿದ್ದಾರೆ. ಕರೊನಾದ ಕಾರಣದಿಂದಾಗಿ ಮೃಗಾಲಯಕ್ಕೂ ಸಂಕಷ್ಟ ಎದುರಾಗಿದ್ದು, ಪ್ರಾಣಿಗಳ ಬದುಕಿಗೂ ಕಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಪ್ರಾಣಿಗಳ ಕುರಿತ ಪ್ರೀತಿಯನ್ನು ವ್ಯಕ್ತಪಡಿಸಿ ನೆರವಾಗಬೇಕು ಎಂಬುದಾಗಿ ಅವರು ವಿಡಿಯೋ ಮೂಲಕ ಕೋರಿಕೊಂಡಿದ್ದಾರೆ.
ಇದನ್ನೂ ಓದಿ:ಟ್ವಿಟರ್​ನಲ್ಲಿ ಉಪೇಂದ್ರಗೆ 1 ಮಿಲಿಯನ್ ಫಾಲೋವರ್ಸ್; ಸ್ಯಾಂಡಲ್​ವುಡ್​​ನಲ್ಲಿ ಗರಿಷ್ಠ ಫಾಲೋವರ್ಸ್​ ಹೊಂದಿರುವ 2ನೇ ನಟ..
ಕರೊನಾದಿಂದಾಗಿ ಕರ್ನಾಟಕದ 9 ಮೃಗಾಲಯಗಳಿಗೂ ಸಮಸ್ಯೆ ಆಗಿದೆ. ಪ್ರವಾಸಿಗರು ಬರದೇ ಇರುವುದರಿಂದ ಈ ಮೃಗಾಲಯಗಳಲ್ಲಿರುವ ಒಟ್ಟು 5 ಸಾವಿರ ಪ್ರಾಣಿಗಳಿಗೆ ಕಷ್ಟ ಎದುರಾಗಿದೆ. ಹಾಗಂತ ಎಲ್ಲರೂ ಮನೆಯಲ್ಲಿ ಪ್ರಾಣಿ ಸಾಕಲು ಆಗುವುದಿಲ್ಲ. ಆದರೆ ಈ ಪ್ರಾಣಿಗಳನ್ನು ದತ್ತು ಪಡೆಯಬಹುದ. ಅದಕ್ಕಾಗಿ ವರ್ಷಕ್ಕೊಮ್ಮೆ ಮಾತ್ರ ಹಣ ಕೊಟ್ಟರೆ ಸಾಕು. ಅಲ್ಲದೆ ಆ ಹಣಕ್ಕೆ ಆದಾಯ ತೆರಿಗೆ ವಿನಾಯಿತಿ ಕೂಡ ಸಿಗಲಿದೆ. ಸಾಧ್ಯವಿರುವ ಎಲ್ಲರೂ ಪ್ರಾಣಿಗಳನ್ನು ದತ್ತು ಪಡೆಯಬೇಕು ಎಂದು ಅವರು ಮೃಗಾಲಯದಲ್ಲಿ ಪ್ರಾಣಿಗಳ ಮುಂದೆ ನಿಂತುಕೊಂಡು ವಿಡಿಯೋ ಮೂಲಕ ಕೋರಿಕೊಂಡಿದ್ದಾರೆ.

ಊಟ ಕೇಳಿದ 82 ವರ್ಷದ ತಾಯಿಗೆ ಹೊಡೆದು ಮನೆಯಿಂದ ಹೊರಹಾಕಿದ ಮಗ!

ಹೂತಿಟ್ಟ 20 ದಿನಗಳ ಬಳಿಕ ಶವ ಹೊರಕ್ಕೆ ತೆಗೆಸಿದ ಪೊಲೀಸರು!; ಅದು ಬರೀ ಸಾವಲ್ಲ, ಕೊಲೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
