ಬೆಂಗಳೂರು:ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಇದನ್ನೂ ಓದಿ:ಜಮ್ಮು & ಕಾಶ್ಮೀರದ ರಿಯಾಸಿಯಲ್ಲಿ ಕಾರು ಕಣಿವೆಗೆ ಬಿದ್ದು ಓರ್ವ ಸಾವು, ಮೂವರಿಗೆ ಗಾಯ
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ” ಎಂದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿಕೆಶಿ, “ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ. ಅದೇ ರೀತಿ ಅವರು ಎಲ್ಲಾದರೂ ಪರಿಹಾರವನ್ನು ಹುಡುಕಿಕೊಂಡು ಹೋಗಲಿ” ಎಂದು ಸಚಿವ ಕೆ.ಎನ್​ ರಾಜಣ್ಣ ಹೇಳಿಕೆಗೆ ತಿರುಗೇಟು ನೀಡಿದರು.
ಮುಂದಿನ ವರ್ಷದಿಂದ ಇಂತಹ ತಪ್ಪು ಆಗದಂತೆ ಕ್ರಮ:ಕೆಂಪೇಗೌಡರ ಜಯಂತಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡದ ವಿಚಾರವಾಗಿ ರಾಜ್ಯ ಒಕ್ಕಲಿಗರ ಸಂಘ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಯಾರನ್ನೂ ಅಗೌರವಿಸುವ ಉದ್ದೇಶ ನಮಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರಾಗಿ ಎಸ್.ಎಂ ಕೃಷ್ಣ, ಸದಾನಂದ ಗೌಡರು, ದೇವೇಗೌಡರು, ಕುಮಾರಸ್ವಾಮಿ ಅವರು ಇದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ಶಿಷ್ಟಾಚಾರವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಮಾತ್ರ ಆಹ್ವಾನ ನೀಡಿದ್ದಾರೆ. ಕುಮಾರಸ್ವಾಮಿ ಮಂಡ್ಯಕ್ಕೆ ಹೋಗಿದ್ದು, ದೇವೇಗೌಡರು ಹಾಸನದ ಪ್ರತಿನಿಧಿಯಾಗಿದ್ದಾರೆ. ಈ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕಿತ್ತು. ಮುಂದಿನ ವರ್ಷ ಈ ರೀತಿಯ ತಪ್ಪುಗಳು ನಡೆಯದಂತೆ ಸರಿಪಡಿಸಲಾಗುವುದು.
ಒಕ್ಕಲಿಗ ಸಮುದಾಯದವರ ಜತೆಗೆ ಬೇರೆ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿಗಳನ್ನು ಆಹ್ವಾನಿಸುವಂತೆ ಸೂಚಿಸಲಾಗಿದೆ. ಕೆಂಪೇಗೌಡರು ಎಲ್ಲ ಸಮುದಾಯದವರಿಗೂ ಸೇರಿ ಬೆಂಗಳೂರನ್ನು ಕಟ್ಟಿದ್ದಾರೆ. ಹೀಗಾಗಿ ಎಲ್ಲ ಸಮುದಾಯದವರು ಕೆಂಪೇಗೌಡ ಜಂಯತಿ ಆಚರಣೆಯಲ್ಲಿ ಭಾಗಿಯಾಗಬೇಕು. ಇದರಲ್ಲಿ ರಾಜಕೀಯ ಮಾಡುವವರು ಮಾಡಲಿ” ಎಂದು ತಿಳಿಸಿದರು.
ಕೆಂಪೇಗೌಡ ಜಯಂತಿಗೆ ಹೆಚ್ಚಿನ ಅನುದಾನ:ರಾಜ್ಯದೆಲ್ಲೆಡೆ ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ನೀಡುವ 25 ಸಾವಿರದ ಜತೆಗೆ ಬಿಬಿಎಂಪಿಯಿಂದ 1 ಲಕ್ಷ ಅನುದಾನ ನೀಡಲಾಗುವುದು. ಕೆಂಪೇಗೌಡರು ಎಲ್ಲರ ಆಸ್ತಿ. ಒಂದು ಜಾತಿ ಹಾಗೂ ಧರ್ಮಕ್ಕೆ ಸೇರಿದವರಲ್ಲ. ಇವರ ಬಗ್ಗೆ ಹೆಚ್ಚಿನ ಪ್ರಚಾರ ಮಾಡಲು ನಮ್ಮ ಸರ್ಕಾರ ಮುಂದಾಗಿದೆ ಎಂದರು.
ರಾಜ್ಯದ ಸಮಸ್ಯೆ ಬಗ್ಗೆ ಸಂಸದರ ಜತೆ ಚರ್ಚೆ:“ಕರ್ನಾಟಕ ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದರನ್ನು ಭೇಟಿ ಮಾಡಿ, ನಮ್ಮ ರಾಜ್ಯದಲ್ಲಿ ಬಾಕಿ ಉಳಿದಿರುವ ಕೇಂದ್ರದ ಯೋಜನೆಗಳು, ಅನುದಾನ ಬಾಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತುವಂತೆ ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.
ಕೇಂದ್ರದೊಂದಿಗೆ ಸಂಘರ್ಷ, ಸಂಸದರೊಂದಿಗೆ ಕಾಟಾಚಾರದ ಸಭೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಅಶೋಕ್ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
