ಬೆಳಗಾವಿ:ಜಿಲ್ಲೆಯ ಖ್ಯಾತ ಉದ್ಯಮಿ, ವಿಜಯಕಾಂತ ಡೇರಿ ಆದಿತ್ಯ ಮಿಲ್ಕ್ ಸಂಸ್ಥಾಪಕ ಶಿವಕಾಂತ ಎಸ್. ಸಿದ್ನಾಳ (49) ಅವರು ಶನಿವಾರ ವಿಧಿವಶರಾದರು. ಅವರಿಗೆ ಪತ್ನಿ ದೀಪಾ ಸಿದ್ನಾಳ, ಓರ್ವ ಪುತ್ರ ಮತ್ತು ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವಿದೆ.
ಮೂಲತಃ ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ ಶಿವಕಾಂತ ಸಿದ್ನಾಳ ಅವರು ವಿಜಯಕಾಂತ ಡೇರಿ ಆದಿತ್ಯ ಮಿಲ್ಕ್ ಉದ್ಯಮ ಆರಂಭಿಸುವ ಮೂಲಕ ಜಿಲ್ಲೆಯಲ್ಲಿ ಹೈನುಗಾರಿಕೆ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡಿದ್ದರು. ವಿಆರ್‌ಎಲ್ ಸಂಮೂಹ ಸಂಸ್ಥೆಗಳ ಚೇರ್ಮನ್ ಡಾ.ವಿಜಯ ಸಂಕೇಶ್ವರ ಅವರ ಅಳಿಯರಾಗಿದ್ದ ಶಿವಕಾಂತ ಸಿದ್ನಾಳ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಶಿವಕಾಂತ ಸಿದ್ನಾಳ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೈಲಹೊಂಗಲ ತಾಲೂಕಿನ ಕುರಗುಂದ ಗ್ರಾಮದ ವಿಜಯಕಾಂತ ಡೇರಿ ಆದಿತ್ಯ ಮಿಲ್ಕ್ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಮಧ್ಯಾಹ್ನ 12 ಗಂಟೆಯಿಂದ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಮಧ್ಯಾಹ್ನ 3 ಗಂಟೆ ನಂತರ ಅಂತ್ಯ ಸಂಸ್ಕಾರ ನಡೆಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 13 =
Remember me
