|ಸಂದೀಪ್ ಸಾಲ್ಯಾನ್ಬಂಟ್ವಾಳ(ದ.ಕ.)
ಕಾಶ್ಮೀರದ ಸರ್ಕಾರಿ ಶಾಲೆಯೊಂದನ್ನು ಕನ್ನಡಿಗನೋರ್ವ ದತ್ತು ಸ್ವೀಕರಿಸಲು ಮುಂದಾಗಿದ್ದಾರೆ! ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದೂರದೃಷ್ಟಿ ಯೋಜನೆಗಳನ್ನು ಹಾಕಿಕೊಂಡಿರುವ ಬಂಟ್ವಾಳದ ಶ್ರೀ ದುರ್ಗಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಈ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಎರಡು ವರ್ಷಗಳಿಂದ ಈ ಕನಸನ್ನು ನನಸು ಮಾಡಲು ಪ್ರಯತ್ನಿಸುತ್ತಿದ್ದರೂ, ಕೋವಿಡ್​ನಿಂದಾಗಿ ಸಾಧ್ಯವಾಗಿರಲಿಲ್ಲ. ಈಗ ಕಾಶ್ಮೀರದಲ್ಲಿ ಸರ್ಕಾರಿ ಶಾಲೆ ದತ್ತು ಪಡೆಯಲು ಅವಕಾಶ ನೀಡುವಂತೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಮನೋಜ್ ಸಿನ್ಹಾಗೆ ಮನವಿ ಸಲ್ಲಿಕೆಯಾಗಿದ್ದು, ಶೀಘ್ರ ಸಕಾರಾತ್ಮಕ ಸ್ಪಂದನೆಯ ನಿರೀಕ್ಷೆಯಲ್ಲಿದ್ದಾರೆ.
ಶೋಭಾ ಕರಂದ್ಲಾಜೆ ಸಾಥ್:ಇತ್ತೀಚೆಗೆ ಬಂಟ್ವಾಳದ ದಡ್ಡಲಕಾಡು ಶಾಲೆಯ ನೂತನ ಕೊಠಡಿಗಳು ಮತ್ತು ಕಲಿಕಾ ಭವನದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶಾಲೆ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮಾತ್ರವಲ್ಲದೆ ಕಾಶ್ಮೀರದಲ್ಲಿ ಶಾಲೆ ದತ್ತು ಪಡೆಯುವ ಪ್ರಕಾಶ್ ಅಂಚನ್ ಕನಸಿಗೆ ಪೂರಕವಾಗಿ ಸ್ಪಂದಿಸಿದ್ದರು. ಮುಂದುವರಿದ ಭಾಗವಾಗಿ ಮೇ 25ರಂದು ದೆಹಲಿಯಲ್ಲಿ ಪ್ರಕಾಶ್ ಅಂಚನ್, ಒಂದು ದೇಶ ಒಂದು ಶಿಕ್ಷಣ ಸಮಿತಿಯ ಪ್ರಮುಖರಾದ ಉತ್ತರ ಪ್ರದೇಶದ ಸರ್ವೆಶ್ ಮಿಶ್ರಾ, ಸುರೇಂದ್ರ ಸಿಂಗ್ ಅವರ ನಿಯೋಗ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿತ್ತು. ಮನವಿಗೆ ಸ್ಪಂದಿಸಿದ ಸಚಿವೆ, ಕಾಶ್ಮೀರದ ಗಡಿಯಲ್ಲಿ ಸರ್ಕಾರಿ ಶಾಲೆ ದತ್ತು ಸ್ವೀಕರಿಸಲು ಶ್ರೀ ದುರ್ಗಾ ಚಾರಿಟೆಬಲ್ ಟ್ರಸ್ಟ್​ಗೆ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದಲ್ಲದೆ, ಜಮ್ಮು ಕಾಶ್ಮೀರದ ರಾಜ್ಯಪಾಲರಿಗೆ ಪತ್ರಮುಖೇನ ಮನವಿ ಮಾಡಿದ್ದಾರೆ.
ಯಾವ ಹುಡ್ಗಿಯೂ ಮದ್ವೆಗೆ ಒಪ್ಪಲಿಲ್ಲ ಎಂದು ಬೇಸತ್ತ ಯುವಕ ಆತ್ಮಹತ್ಯೆ!

ಉಡುಪಿಯಲ್ಲೊಂದು ಪವಾಡ! ಕಳೆದುಹೋಗಿದ್ದ ಚಿನ್ನದ ಸರ ವಾಪಸ್ ಕೊಡಿಸಿದ ದೇವರು!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:fifteen − 12 =
Remember me
