ಬೆಂಗಳೂರು:ಸ್ಥಗಿತಗೊಂಡಿರುವ ಬೀದರ್ – ಬೆಂಗಳೂರು ನಡುವಿನ ನಾಗರಿಕ ವಿಮಾನ ಸಂಚಾರ ಪುನಾರಂಭಿಸುವ ಕುರಿತಂತೆ ವಿವಿಧ ಖಾಸಗಿ ವಿಮಾನಯಾನ ಸೇವಾ ಸಂಸ್ಥೆಗಳೊಂದಿಗೆ ಚರ್ಚಿಸಿ ಎರಡು ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಏಕಾಂಗಿ ಸ್ಪರ್ಧೆ: ಸಂಜಯ್ ಸಿಂಗ್
ಬೀದರ್ ಉಸ್ತುವಾರಿ ಮತ್ತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರೊಂದಿಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಸಚಿವರು ಈ ಸೂಚನೆ ನೀಡಿದರು.
ಬೀದರ್ ಮತ್ತು ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನಾರಂಭಿಸುವ ಕುರಿತಂತೆ 72 ಆಸನಗಳ ಚಿಕ್ಕ ವಿಮಾನಯಾನ ಸೇವೆ ಒದಗಿಸುವ ವಿವಿಧ ಕಂಪನಿಗಳ ಜೊತೆಯಲ್ಲಿ ಮಾತುಕತೆ ನಡೆಸಿ 2 ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸಲು ಸಚಿವ ಪಾಟೀಲ ಸೂಚಿಸಿದರು.

ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ಸೇರಿದ ಗಡಿ ಜಿಲ್ಲೆ ಬೀದರ್ ಗೆ ವಿಮಾನಯಾನ ಸೇವೆ ಕಲ್ಪಿಸಬೇಕು ಎಂಬ ಜನರ ಹೋರಾಟಕ್ಕೆ ಮಣಿದು 2020ರಲ್ಲಿ ಭಾರತೀಯ ವಾಯುಪಡೆಗೆ ಸೇರಿದ ವಿಮಾನ ನಿಲ್ದಾಣದಲ್ಲಿಯೇ ನಾಗರಿಕ ವಿಮಾನಯಾನ ಸೇವೆ ಆರಂಭಿಸಲಾಗಿತ್ತು. ಸ್ಥಗಿತಗೊಂಡಿದ್ದ ವಿಮಾನಯಾನ ಮತ್ತೆ 2022ರಲ್ಲಿ ಪುನಾರಂಭವಾಗಿತ್ತು. ಈಗ ಮತ್ತೆ ಕಳೆದ ಡಿಸೆಂಬರ್ ನಿಂದ ಸಂಪೂರ್ಣ ಸ್ಥಗಿತಗೊಂಡಿದೆ.
ಸೇವಾ ಪೂರೈಕೆದಾರ ಸಂಸ್ಥೆಗಳು, ತಮಗೆ ಉಡಾನ್ ಸಬ್ಸಿಡಿ ನಿಲ್ಲಿಸಿರುವ ಕಾರಣ ವಿಮಾನ ಸೇವೆ ಒದಗಿಸಲು ಸಾಧ್ಯವಿಲ್ಲ. ಮತ್ತೆ ಸಬ್ಸಿಡಿ ನೀಡುವುದಾದರೆ ಸೇವೆ ಒದಗಿಸಲು ಸಿದ್ಧ ಎನ್ನುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದಲೇ ಸಬ್ಸಿಡಿ ಹಣ ಭರಿಸುವ ಕುರಿತಂತೆ ವಿಮಾನಯಾನ ಸೇವಾ ಪೂರೈಕೆದಾರರೊಂದಿಗೆ ಮಾತುಕತೆ ನಡೆಸಿ, ಜಿಲ್ಲೆಯ ಜನರಿಗೆ ವಿಮಾನಯಾನ ಸೇವೆ ಪುನಾರಂಭಿಸಬೇಕು ಎಂದು ಹೇಳಿದರು.
ಇದಕ್ಕೆ ಸ್ಪಂದಿಸಿದ ಸಚಿವ ಎಂ.ಬಿ. ಪಾಟೀಲ್, ಬೀದರ್ ಮತ್ತು ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನಾರಂಭಿಸುವ ಕುರಿತಂತೆ 72 ಆಸನಗಳ ಚಿಕ್ಕ ವಿಮಾನಯಾನ ಸೇವೆ ಒದಗಿಸುವ ವಿವಿಧ ಕಂಪನಿಗಳ ಜೊತೆಯಲ್ಲಿ ಮಾತುಕತೆ ನಡೆಸಿ 2 ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.ಸಭೆಯಲ್ಲಿ ಮೂಲಸೌಕರ್ಯ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸತೀಶ ಮತ್ತಿತರರು ಪಾಲ್ಗೊಂಡಿದ್ದರು.
ಜಾರ್ಖಂಡ್‌: ಮೊಹರಂ ಮೆರವಣಿಗೆ ವೇಳೆ ಗಲಾಟೆ, ಆರು ಮಂದಿಗೆ ಗಾಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen + 15 =
Remember me
