ಬೆಂಗಳೂರು: ಹವ್ಯಕ ಸಮಾಜ ಆದರ್ಶಗಳನ್ನು ನೆಚ್ಚಿಕೊಂಡಿದ್ದು, ನಾಡನ್ನು ಉತ್ತಮ ಪಥದಲ್ಲಿ ಕೊಂಡೊಯ್ಯಲು ತನ್ನನ್ನು ಸಮರ್ಪಿಸಿಕೊಂಡಿದೆ ಎಂದು ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷ ಡಾ.ಗಿರಿಧರ ಕಜೆ ಹೇಳಿದ್ದಾರೆ.
ಅಖಿಲ ಹವ್ಯಕ ಮಹಾಸಭಾ ಮಲ್ಲೇಶ್ವರದ ಹವ್ಯಕ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಸಂಸ್ಥಾಪನೋತ್ಸವ, ಹವ್ಯಕ ವಿಶೇಷ ಪ್ರಶಸ್ತಿ ಹಾಗೂ ಪಲ್ಲವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹವ್ಯಕರು ಸುಶಿತರಾಗಿದ್ದು, ಸ್ವಾಭಿಮಾನಿಗಳಾಗಿದ್ದಾರೆ. ಹೀಗಾಗಿ ಹವ್ಯಕ ಮಹಾಸಭೆ ಸಮಗ್ರ ಸಮಾಜವನ್ನು ತಲುಪಲು ಸಾಧ್ಯವಾಗುತ್ತಿದೆ. ಇದು ತನ್ನತನದ ಬೇರಿನೊಂದಿಗೆ ನೆರಳು ಕೊಡಬೇಕಿದೆ. ಡಿ.27, 28, 29ರಂದು ಅರಮನೆ ಮೈದಾನದಲ್ಲಿ 3ನೇ ವಿಶ್ವ ಹವ್ಯಕ ಸಮ್ಮೇಳನ ಆಯೋಜಿಸಲಾಗುತ್ತಿದೆ. ಹವ್ಯಕರನ್ನು ಪರಿಚಯಿಸುತ್ತಾ, ಎಲ್ಲಾ ಸಮುದಾಯದವರನ್ನು ಒಂದುಗೂಡಿಸಿ ಸಮಾವೇಶ ಮಾಡಲಾಗುತ್ತದೆ ಎಂದು ತಿಳಿಸಿದರು.
ಹಿರಿಯ ವಿದ್ವಾಂಸ ಡಾ.ಪಾದೇಕಲ್ಲು ವಿಷ್ಣು ಭಟ್​ ಮಾತನಾಡಿ, ಸಾಧನೆಯ ಜತೆಗೆ ನಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಜ್ಞಾನವನ್ನು ಹಂಚಬೇಕು. ಸನ್ಮಾನದಿಂದ ಸಾಧಕರ ಪರಿಚಯವಾಗುತ್ತದೆ, ಜತೆಗೆ ಅವರ ಕಾರ್ಯಗಳು ದಾಖಲಾಗುತ್ತವೆ ಎಂದು ಹೇಳಿದರು.
ಸಿಐಡಿ ಎಸ್​ಪಿ ಕೆ. ರಾವೇಂದ್ರ ಹೆಗಡೆ ಮಾತನಾಡಿ, ಪ್ರಶಸ್ತಿ ಪುರಸ್ಕಾರದಿಂದ ಸಾಧಕರಿಗೆ ಗೌರವ ಲಭಿಸಿದರೆ, ಇತರರಿಗೆ ಪ್ರೇರಣೆಯಾಗುತ್ತದೆ. ಹವ್ಯಕ ಮಹಾಸಭೆ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ಸಮಾಜದ ಉನ್ನತಿ ಇನ್ನಷ್ಟು ಹೆಚ್ಚಲಿ ಎಂದರು.
ಪ್ರಶಸ್ತಿ ಪುರಸ್ಕೃತ ಪರಿಸರ ತಜ್ಞ ಶಿವಾನಂದ ಕಳವೆ ಮಾತನಾಡಿ, ಪರಿಸರದ ಸೂಕ್ಷ$್ಮತೆಗಳನ್ನು ಗಮನಿಸಿ, ಅಲ್ಲಿ ಕೃಷಿ ಚಟುವಟಿಕೆ ನಡೆಸಿದ ಹೆಮ್ಮೆ ಹವ್ಯಕ ಸಮಾಜಕ್ಕೆ ಸಲ್ಲುತ್ತದೆ. ನಮ್ಮ ಹಿರಿಯರು ಕಾಡು ಹಾಗೂ ಕಾಡಿನ ಉತ್ಪನ್ನಗಳ ಕುರಿತಾಗಿ ಆಂತರಿಕ ಜ್ಞಾನ ಹೊಂದಿದ್ದ ಕೃಷಿವಿಜ್ಞಾನಿಗಳು ಎಂದು ತಿಳಿಸಿದರು.
ಹವ್ಯಕ ಸಮಾಜದ ಜನಸಂಖ್ಯೆ ದಿನದಿಂದ ದಿನಕ್ಕೆ ಣಿಸುತ್ತಿದ್ದು, ಹಳ್ಳಿ ಜನರ ಸಮಸ್ಯೆ ಹೆಚ್ಚುತ್ತಿದೆ. ಕಾಲ ಸರಿಯುತ್ತಿದ್ದಂತೆ ನಮ್ಮತನದಿಂದಲೂ ದೂರವಾಗುತ್ತಿದ್ದೇವೆ. ಹಳೆಯದನ್ನು ಉಳಿಸಿಕೊಂಡು, ಹೊಸತನವನ್ನು ಬಳಸಿಕೊಂಡು ಮುಂದುವರಿಯಬೇಕು.-ಎಚ್​.ಎಂ. ತಿಮ್ಮಪ್ಪ ಕಲಸಿ, ಹವ್ಯಕ ವಿಭೂಷಣ ಪ್ರಶಸ್ತಿ ಪುರಸ್ಕೃತ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − five =
Remember me
