ಮೈಸೂರು:ಮನೆಯಿಂದ ತುಂಬಾ ದೂರದಲ್ಲಿ ಕಾರು ಪಾರ್ಕ್ ಮಾಡುವವರಿಗೆ ಇದೊಂದು ಎಚ್ಚರಿಕೆ ಗಂಟೆ ಎಂದರೂ ತಪ್ಪಾಗಲಾರದು. ಅದರಲ್ಲೂ ಈಗಿನ ಕರೊನಾ-ಲಾಕ್​ಡೌನ್​ ಸಂಕಷ್ಟದ ಸಂದರ್ಭದಲ್ಲಿ ಯಾವುದಕ್ಕೂ ಎಂದಿಗಿಂತ ಹೆಚ್ಚಿನ ಮುಂಜಾಗ್ರತೆಯಲ್ಲಿ ಇರುವುದು ಒಳಿತು.
ಏಕೆಂದರೆ ಮೈಸೂರಿನಲ್ಲಿ ಹೀಗೆ ಮನೆಯಿಂದ ದೂರದಲ್ಲಿ ವ್ಯಕ್ತಿಯೊಬ್ಬರು ಕಾರು ಪಾರ್ಕ್ ಮಾಡಿ ಹೋಗಿದ್ದು, ಅದರ ನಾಲ್ಕೂ ಚಕ್ರಗಳು ಈಗ ಮಾಯವಾಗಿವೆ. ಯಾರೋ ಕಿಡಿಗೇಡಿಗಳು ಚಕ್ರಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೈಸೂರಿನ ವಿವೇಕಾನಂದ ವೃತ್ತದ ಬಳಿ ಲಿಂಗಾಂಬುಧಿ ಉದ್ಯಾನಕ್ಕೆ ಹೋಗುವ ಮಾರ್ಗದಲ್ಲಿ ಈ ಕಾರನ್ನು ಪಾರ್ಕ್ ಮಾಡಿ ಹೋದ ಬಳಿಕ ಇಂಥದ್ದೊಂದು ಘಟನೆ ನಡೆದಿದೆ.

ಈ ಪ್ರದೇಶದಲ್ಲಿ ದಾರಿಯುದ್ದಕ್ಕೂ ಬಸ್​-ಕಾರುಗಳು ಸೇರಿ ಹಲವಾರು ವಾಹನಗಳನ್ನು ಪಾರ್ಕ್ ಮಾಡಲಾಗಿರುತ್ತದೆ. ಕೆಲವರು ತಮ್ಮ ಮನೆ ದೂರದಲ್ಲಿದ್ದರೂ ಇಲ್ಲೇ ವಾಹನ ನಿಲುಗಡೆ ಮಾಡಿ ಹೋಗಿರುತ್ತಾರೆ. ದೂರದಲ್ಲೆಲ್ಲೋ ವಾಹನ ನಿಲ್ಲಿಸಿ ಹೋಗುವವರಿಗೆ ಇದೊಂದು ಎಚ್ಚರಿಕೆಯ ಸಂಗತಿ ಎಂಬುದಾಗಿ ಮೈಸೂರಿನ ಪಿ.ಜೆ. ರಾಘವೇಂದ್ರ ಎಂಬವರು ಸೋಷಿಯಲ್ ಮೀಡಿಯಾ ಮೂಲಕ ಈ ವಿಚಾರವಾಗಿ ಪೋಸ್ಟ್​ ಮಾಡಿ, ಅಪಾಯದ ಸೂಚನೆ ಇರುವುದರ ಕುರಿತು ಸಾರ್ವಜನಿಕರ ಗಮನ ಸೆಳೆದಿದ್ದಾರೆ.
ಅರ್ಧಕ್ಕರ್ಧ ಕಡಿತ; ಕಪ್ಪು ಶಿಲೀಂಧ್ರ ರೋಗ ಪತ್ತೆ ಪರೀಕ್ಷೆಗೆ ದರ ನಿಗದಿಪಡಿಸಿದ ಸರ್ಕಾರ

ಬೆಂಗಳೂರಿನಲ್ಲಿ ಆತಂಕ ಹುಟ್ಟಿಸಿದ ಕಪ್ಪು ಸೂಟ್​ಕೇಸ್​; ಹತ್ತಿರ ಹೋಗಲು ಹೆದರಿದ ಜನ..

43 ಸಲ ಪಾಸಿಟಿವ್​, 7 ಬಾರಿ ಆಸ್ಪತ್ರೆಗೆ ದಾಖಲು; ಈತ ಜಗತ್ತಲ್ಲೇ ಅತಿ ಹೆಚ್ಚು ದಿನ ಕೋವಿಡ್​ನಿಂದ ಬಳಲಿದ ವ್ಯಕ್ತಿ!

ಸೀಟ್​​ ಹಿಂದಿನಿಂದ ಕೈ ತೂರಿಸಿ ಅಲ್ಲೇ ಮುಟ್ಟಲು ಯತ್ನಿಸುತ್ತಿದ್ದ; ಅಸಹ್ಯ ಅನುಭವ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
