ಬೆಂಗಳೂರು:ರಾಜ್ಯದಲ್ಲಿ ಐದು ತಿಂಗಳ ಬಳಿಕ 9, 10ನೇ ಇಯತ್ತೆ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳು ಸೋಮವಾರ ಪ್ರಾರಂಭವಾಗಲಿದ್ದು, ದಿನ ಬಿಟ್ಟು ದಿನ ನೇರ ತರಗತಿಗೆ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ.
ಬೆಂಗಳೂರಿನ ಎರಡು ಶಾಲೆಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸ್ವತಃ ಭೇಟಿ ನೀಡಲಿದ್ದು, ಆಯಾ ಜಿಲ್ಲೆಯ ಶಾಲೆಗಳಿಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸುವಂತೆ ಎಲ್ಲ ಸಚಿವರಿಗೆ ಸೂಚಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬೊಮ್ಮಾಯಿ‌, ಶಿಕ್ಷಕರನ್ನು ಪ್ರೋತ್ಸಾಹಿಸಿ, ಪಾಲಕ-ಪೋಷಕರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಸಚಿವ ಸಹೋದ್ಯೋಗಿಗಳಿಗೆ ಸಲಹೆ ನೀಡಿದ್ದಾರೆ.
ಮಕ್ಕಳು ಮತ್ತು ಪಾಲಕರು ಕರೊನಾ ಮಾರ್ಗಸೂಚಿಯನ್ನು ಪಾಲಿಸಬೇಕು. ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಯಾವುದೇ ಆತಂಕ ಇಲ್ಲದೇ ಸರ್ಕಾರದ ಜತೆ ಸಹಕರಿಸಬೇಕು ಎಂದು ಸಿಎಂ ಬೊಮ್ಮಾಯಿ‌ ಮನವಿ ಮಾಡಿದ್ದಾರೆ.
ಇಷ್ಟ ಇದ್ರೆ ಬನ್ನಿ.. ಬರೋವಾಗ ತಿಂಡಿ-ಕುಡಿಯೋ ನೀರು ನೀವೇ ತನ್ನಿ; ಸೋಮವಾರ ಶಾಲೆ ಶುರು, ವಿದ್ಯಾರ್ಥಿಗಳಿಗೆ ಸೂಚನೆ

‘ನೀವು ಯುವತಿ ಜತೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ’ ಎಂದು ಬಿಜೆಪಿ ಮುಖಂಡನಿಗೆ ಬ್ಲ್ಯಾಕ್​ಮೇಲ್​ ಮಾಡಿದ ಅಪರಿಚಿತ

ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್

ನಾನು ಟೈಟಾಗಿದ್ದೇನೆ ಗೊತ್ತಾಗಿಲ್ಲ, ಇನ್ನೊಂದು ಕಾರ್ಡ್ ನಂಬರ್ ಕೊಡಿ ಎಂದ; 730 ರೂಪಾಯಿ ವೈನ್‌ಗೆ 1.79 ಲಕ್ಷ ರೂ. ಧೋಖಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 19 =
Remember me
