ಬೆಂಗಳೂರು:ರಾಜ್ಯದಲ್ಲಿ ಹಲವು ಕಠಿಣ ಕ್ರಮಗಳ ನಡುವೆಯೂ ಮಾನವ ಕಳ್ಳ ಸಾಗಣೆ ಅವ್ಯಾಹತವಾಗಿ ನಡೆಯುತ್ತಿದೆ. ಶುಕ್ರವಾರ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ಅನಾಥ ಆಶ್ರಮದ ಮೇಲೆ ನಡೆದ ದಾಳಿಯಲ್ಲಿ 20 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ.
ಇದನ್ನೂ ಓದಿ:ಬೊಮ್ಮಾಯಿ ಎದುರೇ ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ! ನಡೆಯಬೇಕಿದ್ದ ಕಾರ್ಯಕ್ರಮ ಮೊಟಕು
ಪತ್ತೆಯಾದವರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದಕ್ಷಿಣ ಭಾರತದಲ್ಲಿ ಇಂತಹ ಪ್ರಕರಣಗಳು ಈಗಾಗಲೇ ವರದಿಯಾಗಿವೆ ಎನ್ನಲಾಗುತ್ತಿದೆ. ಎನ್​ಸಿಪಿಸಿಆರ್​ನಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
आज कर्नाटक के बंगलुरु में एक अवैध यतीमख़ाने का निरीक्षण करने के दौरान चौकाने वाली जानकारी सामने आयी है।– यहाँ 20 लड़कियाँ थीं जिनमें से अनाथ बच्चियाँ भी हैं।– बच्चियों को स्कूल नहीं भेजा जाता है,पूरे बाल गृह में भी खिड़की या रोशनदान नहीं है,लड़कियों को एकदम क़ैद कर के रखा गया…pic.twitter.com/fPKLhW4W57
— प्रियंक कानूनगो Priyank Kanoongo (@KanoongoPriyank)March 15, 2024

ಈ ಕುರಿತು ಎನ್​ಸಿಪಿಸಿಆರ್​ ದೂರು ಆಧರಿಸಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.ಮದರಸದಲ್ಲಿ ಸುಮಾರು 10-20 ಮಕ್ಕಳು ಇದ್ದರು. ಮಕ್ಕಳಿಗೆ ಸರಿಯಾಗಿ ಶಿಕ್ಷಣವನ್ನು ನೀಡುತ್ತಿಲ್ಲ. ಜೊತೆಗೆ ಧಾರ್ಮಿಕ‌ ಶಿಕ್ಷಣವನ್ನು ನೀಡುತ್ತಿದ್ದಾರೆ. ಯಾವುದೇ ಲೈಸೆನ್ಸ್ ಇಲ್ಲದೆ ಮದರಸವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.
ಈ ಬಗ್ಗೆ ಎಕ್ಸ್​​ನಲ್ಲಿ ಬರೆದುಕೊಂಡಿರುವ ಪ್ರಿಯಾಂಕ ಕಂಗೂನ್​, ತನಿಖೆಯ ವೇಳೆ ಬಾಲಕಿಯರನ್ನು ಸಿಡಬ್ಲ್ಯುಸಿ ಮುಂದೆ ಹಾಜರುಪಡಿಸಲು ಮುಂದಾದಾಗ ಸಲ್ಮಾ ಎಂಬು ಮಹಿಳೆ ಮತ್ತು ಆಕೆಯ ಬಾಸ್ ಶಮೀರ್ ಗೂಂಡಾಗಳನ್ನು ಕರೆಸಿ ಜಗಳಕ್ಕೆ ಯತ್ನಿಸಿದ್ದಾರೆ. ಪೊಲೀಸರ ಮಧ್ಯಸ್ಥಿಕೆಯಲ್ಲಿ ಗೂಂಡಾಗಳನ್ನು ನಿಯಂತ್ರಿಸಲಾಗಿದೆ. ಪೊಲೀಸರ ಸಲಹೆ ಮೇರೆಗೆ ಮಹಿಳಾ ಅಧಿಕಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಠಾಣೆಗೆ ಬರಲಾಗಿದೆ.
ದಾಳಿ ವೇಳೆ ಕೆಲ ಹುಡುಗಿಯರು ಮಾತನಾಡಿದ್ದು, ಸಲ್ಮಾ ಎಂಬ ಮಹಿಳೆ ಕುವೈತ್‌ನಲ್ಲಿರುವ ಹುಡುಗಿಯರ ಸಂಬಂಧಗಳನ್ನು ಏರ್ಪಡಿಸುತ್ತಾಳೆ ಎಂದು ಆರೋಪ ಮಾಡಿದ್ದಾರೆ. ಪ್ರಾಥಮಿಕ ಮಾಹಿತಿ ವರದಿಯಂತೆ ಗಲ್ಫ್ ದೇಶಗಳಲ್ಲಿ, ಮದುವೆಯ ಹೆಸರಿನಲ್ಲಿ ಕಳ್ಳಸಾಗಣೆಗಾಗಿ ಹುಡುಗಿಯರನ್ನು ಶೃಂಗಾರಗೊಳಿಸುವ ಕೆಲಸವನ್ನು ಇಲ್ಲಿ ಮಾಡಲಾಗುತ್ತದೆ ಎನ್ನಲಾಗಿದೆ.
ಲೋಕಸಮರ: ಮಂಡ್ಯದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 5 =
Remember me
