ಬೆಂಗಳೂರು:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ 12 ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದರು. ಈ ಪೈಕಿ 8 ಮಂದಿಯ ಗುರುತು ಪತ್ತೆಯಾಗಿದೆ.
ಮೃತ ಎಂಟು ಕಾರ್ಮಿಕರು ತಮಿಳುನಾಡು ಮೂಲದವರು ಎಂದು ತಿಳಿದು ಬಂದಿದ್ದು, ಕಾರ್ಮಿಕರೆಲ್ಲರೂ ಪದವೀಧರರಾಗಿದ್ದು, ಕೂಲಿ ಕೆಲಸಕ್ಕಾಗಿ ಪಟಾಕಿ ಗೋದಾಮಿಗೆ ಬಂದಿದ್ದರು ಎಂದು ವರದಿಯಾಗಿದೆ.
ಇದನ್ನೂ ಓದಿ:ಜಿಹಾದಿಗಳು ನವರಾತ್ರಿ ಉತ್ಸವಗಳಲ್ಲಿ ಭಾಗಿಯಾಗದಂತೆ ನೋಡಿಕೊಳ್ಳಬೇಕು: ವಿಹಿಂಪ
ಮೃತರು ತಮಿಳುನಾಡಿನ ಧರ್ಮಪುರಿ ಮೂಲದ ವೆಡಪ್ಪನ್, ರಾಘವನ್, ಆದಿಕೇಶವನ್, ಗಿರಿ, ಮುನಿವೇಲಂ, ಆಕಾಶ್, ಇಳಂಬರ್ದಿ ಹಾಗೂ ಪ್ರಕಾಶ್ ರಾಜ್ ಎಂದು ಗುರುತಿಸಲಾಗಿದೆ. ಇನ್ನೂ ನಾಲ್ವರ ಗುರುತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತದೇಹಳನ್ನೂ ಆಕ್ಸ್​ಫರ್ಡ್​ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಇತ್ತ ಪಟಾಕಿ ಗೋದಾಮು ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಮೃತದೇಹಗಳನ್ನು ತೋರಿಸಲು ಆಸ್ಪತ್ರೆ ಹಾಗೂ ಪೊಲೀಸ್​ ಸಿಬ್ಬಂದಿ ಹಿಂದೇಟು ಹಾಕುತ್ತಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಶನಿವಾರ ಮಧ್ಯಾಹ್ನ ದುರಂತ ನಡೆದಿದ್ದು, ಭಾನುವಾರ ಬೆಳಗ್ಗೆಯಾದರೂ ಮೃತದೇಹಗಳನ್ನು ತೋರಿಸಿಲ್ಲ. ಕಡೇ ಪಕ್ಷ ತಂದೆ-ತಾಯಿಯನ್ನಾದರೂ ಒಳಗೆ ಬಿಡಬೇಕು ಎಂದು ಮೃತರ ಸಂಬಂಧಿಕರು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − eleven =
Remember me
