ಬೆಂಗಳೂರು:ಕಳೆದ ವಾರ ಬೆಂಗಳೂರಿನ ಹೆಸರಾಂತ ರಾಮೇಶ್ವರಂ ಕೆಫೆಯೊಂದರ ಮೇಲೆ ಬಾಂಬ್ ದಾಳಿ ನಡೆಸಿದ ಶಂಕಿತ ಆರೋಪಿ ಹೋಟೆಲ್​ವೊಳಗೆ ಒಂಬತ್ತು ನಿಮಿಷಗಳನ್ನು ಕಳೆದಿದ್ದು, ಅಲ್ಲಿಂದ ಹೊರಡುವ ಮುನ್ನ ಸೆರೆಯಾದ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಇದೀಗ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.
ಇದನ್ನೂ ಓದಿ:https://www.vijayavani.net/crazy-star-v-ravichandran-confirmed-his-ambitious-project-premaloka-2
ಹೊಸ ವಿಡಿಯೋ ತುಣುಕಿನಲ್ಲಿ ಶಂಕಿತ ವ್ಯಕ್ತಿ ಸನ್‌ಗ್ಲಾಸ್, ಮಾಸ್ಕ್ ಮತ್ತು ಬೇಸ್‌ಬಾಲ್ ಟೋಪಿ ಧರಿಸಿ ಬಸ್ ನಿಲ್ದಾಣದಿಂದ ರಾಮೇಶ್ವರಂ ಕೆಫೆ ಕಡೆಗೆ ಹೋಗುತ್ತಿರುವುದನ್ನು ತೋರಿಸುತ್ತದೆ. ಶುಕ್ರವಾರ ಬೆಳಗ್ಗೆ 11.34ಕ್ಕೆ ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಕೆಫೆಗೆ ಪ್ರವೇಶಿಸಿದ ಆತ ಮೊಬೈಲ್‌ನಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ.
ಮತ್ತೊಂದು ದೃಶ್ಯ ಶಂಕಿತ ವ್ಯಕ್ತಿಯು 11.43ಕ್ಕೆ ಕೆಫೆಯಿಂದ ಹೊರಹೋಗುವುದನ್ನು ತೋರಿಸುತ್ತದೆ. ಬಂದಷ್ಟೇ ಆತುರದಿಂದ ಆತ ಹೊರಗೆ ಹೋಗಿರುವುದು ಕೂಡ ವಿಡಿಯೋದಲ್ಲಿ ಕಾಣಿಸಿದೆ. ಸದ್ಯ ಶಂಕಿತ ಆರೋಪಿ ರಾಮೇಶ್ವರಂ ಕೆಫೆಯಲ್ಲಿ ಕೇವಲ ಒಂಬತ್ತು ನಿಮಿಷಗಳ ಕಾಲ ಕಳೆದಿದ್ದಾನೆ ಎಂದು ಸಿಸಿಟಿವಿ ಸಾಕ್ಷ್ಯಗಳು ತೋರಿಸಿವೆ.
ಇದನ್ನೂ ಓದಿ:https://www.vijayavani.net/mukhesh-ambani-cries-for-son-anant-ambani
ಸದ್ಯ ಈ ಪ್ರಕರಣ ಇದೀಗ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೈಸೇರಿದ್ದು, ತನಿಖೆ ಚುರುಕಿನಿಂದ ಸಾಗುತ್ತಿದೆ. ಇದಕ್ಕೂ ಮುನ್ನ ಬೆಂಗಳೂರು ಪೊಲೀಸರು ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.
“ನಾವು ನಮ್ಮ ತನಿಖೆಯನ್ನು ಮುಂದುವರೆಸುತ್ತಿದ್ದೇವೆ. ಈಗಾಗಲೇ ಎಂಟು ತಂಡಗಳನ್ನು ರಚಿಸಲಾಗಿದೆ ಮತ್ತು ಎಲ್ಲರೂ ವಿಭಿನ್ನ ದಿಕ್ಕುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಹಾಗೂ ವಿಭಿನ್ನ ಅಂಶಗಳತ್ತ ಗಮನಹರಿಸುತ್ತಿದ್ದಾರೆ. ನಾವು ಹಲವಾರು ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದೇವೆ” ಎಂದು ರಾಜ್ಯ ಗೃಹ ಸಚಿವರಾದ ಜಿ. ಪರಮೇಶ್ವರ್ ತಿಳಿಸಿದ್ದಾರೆ,(ಏಜೆನ್ಸೀಸ್).
ಮದುವೆಗೂ ಮುನ್ನ ಆರೋಗ್ಯ ಸಮಸ್ಯೆ ತೋಡಿಕೊಂಡ ಅನಂತ್​; ಮಗನ ಮಾತಿಗೆ ಕಣ್ಣೀರಿಟ್ಟ ಮುಖೇಶ್ ಅಂಬಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 6 =
Remember me
