ಬೆಂಗಳೂರು:ರಾಜ್ಯ ಸರ್ಕಾರದ ವಿರುದ್ಧ ನಾಲ್ವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಶೀಘ್ರದಲ್ಲೇ ಸರ್ಕಾರದ ವಿರುದ್ಧ ಹೈಕೋರ್ಟ್​ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಲಿದೆ. ಕೆಲವು ಜಾತಿಗಳಿಗೆ ಸಂಬಂಧಿತ ವಿಚಾರವಾಗಿ ಇಂಥದ್ದೊಂದು ಬೆಳವಣಿಗೆ ನಡೆದಿದೆ.
ಲಂಬಾಣಿ, ಭೋವಿ, ಕೊರಮ ಹಾಗೂ ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಆಗಿದೆ. ರಾಯಚೂರು ಮೂಲದ ಮಹೇಂದ್ರ ಕುಮಾರ್ ನೇತೃತ್ವದಲ್ಲಿ ನಾಲ್ವರ ಈ ಅರ್ಜಿ ಹಾಕಿದ್ದಾರೆ.
ಇದನ್ನೂ ಓದಿ:ನಾಯಿ ಕಾಣೆಯಾಗಿದೆ, ಸೆಕ್ಯುರಿಟಿಯವರನ್ನು ಅಮಾನತುಗೊಳಿಸಿ: ಪೊಲೀಸ್​ ಅಧಿಕಾರಿಗೆ ಹೈಕೋರ್ಟ್​ ಜಡ್ಜ್ ಪತ್ರ
ಲಂಬಾಣಿ, ಭೋವಿ, ಕೊರಮ ಹಾಗೂ ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆದು ಹಾಕುವ ಸಂಬಂಧ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಸುಪ್ರೀಂಕೋರ್ಟ್​ 2020ರಲ್ಲಿ ಸೂಚನೆ ನೀಡಿತ್ತು. ಅಲ್ಲದೆ ಜಾತಿಗಳನ್ನು ಎಸ್​ಸಿಯಿಂದ ಕೈ ಬಿಡುವ ಬಗ್ಗೆ ಪ್ರಸ್ತಾವನೆ ಕಳುಹಿಸುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚನೆ ನೀಡಿತ್ತು. ಆದರೆ ಈ ವರೆಗೂ ರಾಜ್ಯ ಸರ್ಕಾರ ಇದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಕಳಿಸಿಲ್ಲ.
ಇದನ್ನೂ ಓದಿ:30 ಕೋಟಿ ರೂಪಾಯಿಯ ವಾಚ್​ಗಳಿದ್ದರೂ ಈತನ ಟೈಮ್​ ಸರಿ ಇರಲಿಲ್ಲ!
ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದ್ದು, ಇಂದು ಈ ಕುರಿತಂತೆ ನ್ಯಾ. ಅರವಿಂದ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಕೂಡ ನಡೆದಿದೆ. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಬಳಿಕ ಹೈಕೋರ್ಟ್​​ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಸೂಚನೆ ನೀಡಿದೆ.
ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!

ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + four =
Remember me
