ಬೆಂಗಳೂರು:ಕೃತಕ ಬುದ್ದಿಮತ್ತೆಯು(ಎ.ಐ) ಭಾರತೀಯ ಐತಿಹಾಸಿಕ ಸನ್ನಿವೇಶಗಳನ್ನು ಮರುಸೃಷ್ಟಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಶ್ರೀಲಂಕಾ ಕೊಲಂಬಿಯಾ ವಿಶ್ವವಿದ್ಯಾಲಯ ರಾಷ್ಟ್ರೀಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಆರ್.ಸಿ.ಜಿ ಗಮಗೆ ಅಭಿಪ್ರಾಯಪಟ್ಟಿದ್ದಾರೆ.
ಶೇಷಾದ್ರಿಪುರಂ ಸಂಜೆ ಕಾಲೇಜು ಗ್ರಂಥಾಲಯ ವಿಭಾಗ, ಭಾರತೀಯ ಗ್ರಂಥಾಲಯಗಳ ಸಂಘ ಹಾಗೂ ಶ್ರೀಲಂಕಾ ಗ್ರಂಥಾಲಯಗಳ ಸಂಘಗಳ ಸಹಯೋಗದಲ್ಲಿ ಶೈಕ್ಷಣಿಕ ಗ್ರಂಥಾಲಯದ ಮೇಲೆ ಕೃತಕ ಬುದ್ಧಿಮತ್ತೆಯ ಪ್ರಭಾವದ ಕುರಿತು ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಕೃತಕ ಬುದ್ಧಿಮತ್ತೆಯ ಪ್ರಭಾವದಿಂದ ಸಂಶೋಧನಾ ಪ್ರಬಂಧವನ್ನು ಬರೆಯಲು ಹಾಗೂ ಪರಿಣಾಮಕಾರಿ ಬೋಧನೆಯನ್ನು ಕೈಗೊಳ್ಳಲು ಸಹಾಯಕವಾಗಿದೆ. ಕೃತಕ ಬುದ್ಧಿಮತ್ತೆಗೆ ಸಂವೇದನೆಗಳಿಲ್ಲ. ಆದರೆ,ಸನ್ನಿವೇಶಗಳನ್ನು ಸೃಷ್ಟಿಸುತ್ತದೆ, ಕೃತಕ ಬುದ್ದಿಮತ್ತೆಯನ್ನು ಬಳಸಿ ಸಂವೇದನೆಗಳನ್ನು ತುಂಬಬಲ್ಲ ಸಾಮರ್ಥ್ಯವು ಮನುಷ್ಯನ ಸಾಧ್ಯತೆಯಾಗಿದೆ ಎಂದರು.
ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ಡಾ. ವೂಡೇ ಪಿ. ಕೃಷ್ಣ ಮಾತನಾಡಿ, ಶೈಕ್ಷಣಿಕ ಗ್ರಂಥಾಲಯಗಳು ಕೃತಕ ಬುದ್ಧಿಮತ್ತೆಯ ಸಾಧ್ಯತೆಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಮಾದರಿ ಗ್ರಂಥಾಲಯಗಳನ್ನಾಗಿ ರೂಪಿಸಬೇಕಿದೆ. ಶೇಷಾದ್ರಿಪುರಂ ಸಂಜೆ ಕಾಲೇಜು ನ್ಯಾಕ್ ಎ ಶ್ರೇಯಾಂಕ ಮಾನ್ಯತೆ ಪಡೆದಿದ್ದು, 100 ಅಂತಾರಾಷ್ಟ್ರೀಯ ಅಂತರ್ಜಾಲ ವಿಚಾರ ಸಂಕಿರಣಗಳನ್ನು ಆಯೋಜಿಸುವಲ್ಲಿ ಯಶಸ್ವಿಯಾಗಿದೆ ಎಂದರು.
ಪ್ರಾಂಶುಪಾಲ ಡಾ.ಎನ್.ಎಸ್.ಸತೀಶ್,ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಧರ್ಮದರ್ಶಿ ಡಬ್ಲೂ. ಡಿ ಅಶೋಕ್, ರಾಯ್‌ಪುರದ ಕಳಿಂಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಚಂದ್ರಪ್ಪ, ದ್ರಾವಿಡ ವಿಶ್ವವಿದ್ಯಾಲಯ, ಕುಪ್ಪಂನ ಉಪಕುಲಪತಿಗಳಾದ ಡಾ.ದೊರೈಸ್ವಾಮಿ, ಶೇಷಾದ್ರಿಪುರಂ ಸಂಜೆ ಕಾಲೇಜಿನ ಆಡಳಿತ ಸಲಹಾ ಮಂಡಳಿಯ ಅಧ್ಯಕ್ಷ ಪಿ.ಸಿ. ನಾರಾಯಣ, ಪ್ರಾಂಶುಪಾಲರಾದ ಡಾ.ಎನ್.ಎಸ್. ಸತೀಶ್ ಹಾಗೂ ಅಂತರಿಕ ಗುಣಮಟ್ಟ ಭರವಸಾ ಸಮಿತಿ ಸಂಚಾಲಕ ನಾಗಸುಧ.ಆರ್, ಗ್ರಂಥಪಾಲಕ ಯೋಗಾನಂದ.ಎಸ್.ವಿ, ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಪಾಲಕ ಡಾ.ಸುರೇಶ್ ಜಂಗೆ ಮತ್ತಿತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
