ಹುಬ್ಬಳ್ಳಿ:ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿರುವ ಐದು ಕೆಜಿ ಅಕ್ಕಿಯಲ್ಲಿಯೇ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ ಎಂದು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್​ ಟೀಕಿಸಿದ್ದಾರೆ.
ಕಾಂಗ್ರೆಸ್​ ಪಕ್ಷವು ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಶುಕ್ರವಾರ ನಡೆದ ಸಂಪುಟ ಸಭೆ ಬಳಿಕ ಜಾರಿಗೆ ತಂದ ಕುರಿತು ಅರವಿಂದ್​ ಬೆಲ್ಲದ್​ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿರುವ ಐದು ಕೆಜಿ ಅಕ್ಕಿಯಲ್ಲಿಯೇ ಕಾಂಗ್ರೆಸ್​ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ. ಅಕ್ಕಿ ಕೊಡುವ ಬದಲು ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಅದರ ಹಣವನ್ನು ವರ್ಗಾವಣೆ ಮಾಡಬೇಕು. ಹಾಗೆ ಮಾಡಿದ್ದಲ್ಲಿ ಯಾರು ಎಷ್ಟು ಕೆಜಿ ಅಕ್ಕಿ ಕೊಡುತ್ತಿದ್ದಾರೆ ಎಂದು ಜನರಿಗೆ ತಿಳಿಯುತ್ತದೆ.
ಜನರು ಬರಿ ಅಕ್ಕಿ ತಿನ್ನುವುದಿಲ್ಲ. ಒಬ್ಬರಿಗೆ ತಿಂಗಳಿಗೆ 10 ಕೆಜಿ ಹೆಚ್ಚಾಗುತ್ತದೆ. ಕೇಂದ್ರ ಸರ್ಕಾರ ನೀಡುವ ಅಕ್ಕಿಯ ಬದಲು ಅದರ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಿದರೆ ಅವರು ದೈನಿಂದನ ಆಹಾರ ಪದಾರ್ಥಗಳಾದ ರಾಗಿ, ಜೋಳದಂತಹ ಧಾನ್ಯಗಳನ್ನು ಖರೀದಿಸುತ್ತಾರೆ.
ಇದನ್ನೂ ಓದಿ:ಶಾಪಗ್ರಸ್ತ ಕೋರಮಂಡಲ್​ ಎಕ್ಸ್​ಪ್ರೆಸ್​ ರೈಲು? ಕಳೆದ ನಾಲ್ಕು ದಶಕದಲ್ಲಿ 8 ಅಪಘಾತ
ಕೇಂದ್ರ ಸರ್ಕಾರ ಅಕ್ಕಿ ಕೊಡುವ ಬದಲು ಖಾತೆಗಳಿಗೆ ಹಣ ಹಾಕಿದರೆ ಜನರಿಗೆ ಕಾಂಗ್ರೆಸ್​ನ ಗ್ಯಾರಂಟಿಗಳ ಬಗ್ಗೆ ಅರಿವಾಗುತ್ತದೆ. ಈ ಕುರಿತು ಕೇಂದ್ರ ಸರ್ಕಾರವನ್ನು ನಾನು ಒತ್ತಾಯಿಸುತ್ತೇನೆ ಎಂದು​ ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತು ಪ್ರತಿಕ್ರಿಯಿಸಿ ಈ ಬಗ್ಗೆ ಪಕ್ಷದ ಹೈಕಮಾಂಡ್​ ತೀರ್ಮಾನ ಮಾಡುತ್ತದೆ. ಅವರು ಏನೇ ಜವಾಬ್ದಾರಿ ನೀಡಿದರೂ ನಾನು ನಿಭಾಯಿಸಲು ಸಿದ್ದನಿದ್ದೇನೆ ಎಂದು ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕರ ಆಯ್ಕೆ ಪಕ್ಷದ ನಾಯಕರಿಗೆ ಬಿಟ್ಟಿದ್ದು ನನಗೆ ಶಾಸಕನಾಗಿ ಕೆಲಸ ಮಾಡುವಂತೆ ಟಿಕೆಟ್​ ಕೊಟ್ಟಿದ್ದಾರೆ. ಅದರಂತೆ ಕ್ಷೇತ್ರದ ಜನತೆ ಕೂಡ ಆಶೀರ್ವಾದ ಮಾಡಿದ್ದಾರೆ. ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದನಾಗಿರುತ್ತೇನೆ ಎಂದು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + eleven =
Remember me
