ಬೆಂಗಳೂರು:ಮಹಾಮಾರಿ ಕರೊನಾ ವೈರಸ್​ನಿಂದ ಉಂಟಾದ ಕಠಿಣ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು.
ಏಳು ದಿನಗಳ ವಿಧಾನಮಂಡಲ ಅಧಿವೇಶದ ಮೊದಲ ದಿನದಂದು ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು ಕೋವಿಡ್ ವಾರಿಯರ್ಸ್ ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಕೋವಿಡ್​ನಿಂದ ಮೃತಪಟ್ಟವರಿಗೆ ಸರ್ಕಾರ 30 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಕೋವಿಡ್ ರೋಗಿಗಳಿಗೆ ಸರ್ಕಾರದಿಂದ 248 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಸುಮಾರು 1.36 ಲಕ್ಷ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ ಎನ್ನುವ ಮೂಲಕ ಸರ್ಕಾರ ಕಾರ್ಯಕ್ಕೆ ಫುಲ್​ ಮಾರ್ಕ್ಸ್​ ನೀಡಿದರು.
ಇದನ್ನೂ ಓದಿರಿ:ರಾತ್ರಿ ಫೋನ್ ಕಾಲ್​ ಬಂದ ಬೆನ್ನಲ್ಲೇ ತೆರಳಿದ ಅಪ್ರಾಪ್ತೆ ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಶವವಾಗಿ ಪತ್ತೆ!
ಬೇಳೆಕಾಳುಗಳ ಉತ್ಪಾದನೆಯಲ್ಲಿ ಪ್ರಥಮ ಹಾಗೂ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನ ಪಡೆದಿದ್ದೇವೆ. ದೇಶದ ಮಾಹಿತಿ ತಂತ್ರಜ್ಞಾನಕ್ಕೆ ಶೇಕಡಾ 40ರಷ್ಟು ಕೊಡುಗೆಯನ್ನು ನಾವು ನೀಡಿದ್ದೇವೆ. ಕರೊನಾ ಸಂಕಷ್ಟದಲ್ಲೂ ವಾಣಿಜ್ಯ ತೆರಿಗೆ 30,467 ಕೋಟಿ ರೂ. ಹಾಗು ಅಬಕಾರಿ ಇಲಾಖೆ 16788 ಕೋಟಿ ರೂ. ರಾಜಸ್ವ ಸಂಗ್ರಹವಾಗಿದೆ. ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ ಆಹಾರ ಭದ್ರತೆಯನ್ನು ಸರ್ಕಾರ ಖಾತರಿಪಡಿಸಿದೆ. ಕರೊನಾ ಲಾಕ್​ಡೌನ್​ ಸಮಯದಲ್ಲಿ 90 ಲಕ್ಷ ಪ್ಯಾಕ್ ಮಾಡಿದ ಪೌಷ್ಟಿಕ ಆಹಾರ ಪೊಟ್ಟಣಗಳನ್ನು ಒದಗಿಸಿದೆ ಎಂದು ಸರ್ಕಾರವನ್ನು ರಾಜ್ಯಪಾಲ ವಾಲಾ ಕೊಂಡಾಡಿದರು.
ರೈಲುಗಳ ಮೂಲಕ ಕಾರ್ಮಿಕರನ್ನು ಅವರವರ ಸ್ವಂತ ಊರುಗಳಿಗೆ ಕಳುಹಿಸುವ ಕೆಲಸ ಮಾಡಿದೆ. ಅಸಂಘಟಿತ ಕಾರ್ಮಿಕರಿಗೆ 5,372 ಕೋಟಿ ರೂ. ಮೌಲ್ಯದ ಹಣಕಾಸು ನೆರವು ನೀಡಿದೆ. ಸುಮಾರು 63,59,000 ಫಲಾನುಭವಿಗಳಿಗೆ ನೆರವು ಸಿಕ್ಕಿದೆ. 11,770 ಚರ್ಮ ಕುಶಲ ಕರ್ಮಿಗಳಿಗೆ ತಲಾ 5000 ರೂಪಾಯಿಗಳಂತೆ ಸಹಾಯ ಧನ ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ನಿಧಿಯಲ್ಲಿ 51 ಲಕ್ಷ ರೈತರಿಗೆ 2000 ರೂಪಾಯಿ ಹೆಚ್ಚುವರಿ ಮೊತ್ತದೊಂದಿಗೆ 1020 ಕೋಟಿ ರೂಪಾಯಿಗಳನ್ನು ಸರ್ಕಾರ ಮಂಜೂರು ಮಾಡಿದೆ ಎಂದರು.
ಇದನ್ನೂ ಓದಿರಿ:ಟಿಕ್​ಟಾಕ್​ನಲ್ಲಿ ಅರೆಬೆತ್ತಲೆ ವಿಡಿಯೋ ಹರಿಬಿಡ್ತಿದ್ದ ಪ್ರಭಾವಿ ಮಹಿಳೆ ಗಂಡನಿಂದಲೇ ದುರಂತ ಅಂತ್ಯ!
ಗ್ರಾಮ ಜ್ಯೋತಿ ಅಡಿಯಲ್ಲಿ ವಿದ್ಯುಚ್ಛಕ್ತಿ ಸೌಲಭ್ಯವಿರದ 14,320 ಕುಟುಂಬಗಳಿಗೆ ಸೌಲಭ್ಯ ಒದಗಿಸಲಾಗಿದೆ. ‘ನನ್ನ ಶಾಲೆ ನನ್ನ ಕೊಡುಗೆ’ ಕಾರ್ಯಕ್ರಮ ಆರಂಭ ಮಾಡಿದೆ. ಈ ಯೋಜನೆ ಅಡಿಯಲ್ಲಿ 1500 ಶಾಲೆಗಳನ್ನು ದತ್ತು ಪಡೆಯಲಾಗಿದೆ. ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಕಲ್ಬುರ್ಗಿಯಲ್ಲಿ ಜಯದೇವ ಹೃದ್ರೋಗ ಸಂಶೋಧನಾ ಸಂಸ್ಥೆಯ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣದಿಂದ ಅನುಕೂಲವಾಗಲಿದೆ. ಸ್ವಚ್ಛ ಭಾರತ ಅಭಿಯಾನದಲ್ಲಿ 3.15 ಲಕ್ಷ ಪ್ರತ್ಯೇಕ ಗೃಹ ಶೌಚಾಲಯ ನಿರ್ಮಾಣವಾಗಿದೆ. ಅಮೃತಯೋಜನೆಯಲ್ಲಿ 1680 ಕೋಟಿ ರೂ. ಮೊತ್ತದ 306 ಕಾಮಗಾರಿ ಪೂರ್ಣಗೊಳಿಸಲಾಗಿದೆ ಎನ್ನುತ್ತಾ ಸರ್ಕಾರ ಯೋಜನೆಗಳ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದರು.(ದಿಗ್ವಿಜಯ ನ್ಯೂಸ್​​)
“ಜೈ ಶ್ರೀರಾಮ್”​ ಘೋಷಣೆ ನೇತಾಜಿಗೂ, ರಾಮನಿಗೂ ತೋರಿದ ಅಗೌರವ: ಆರ್​ಎಸ್​ಎಸ್​

ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ- ಹೌಹಾರಿದ ಜನತೆ

ಪತ್ನಿ ತುಂಬಾ ಚೆಲ್ಲುಚೆಲ್ಲು, ಹುಟ್ಟುವ ಮಗುವಿನ ಡಿಎನ್​ಎ ಪರೀಕ್ಷೆ ಮಾಡಿಸಬಹುದಾ?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:twenty − twelve =
Remember me
