ಬೆಂಗಳೂರು: ಬಿಬಿಎಂಪಿ ಘನತ್ಯಾಜ್ಯ ನಿರ್ವಹಣಾ ಉಪನಿಯಮ-2020ಕ್ಕೆ ಸರ್ಕಾರ ಅಂಕಿತ ಹಾಕಿದ್ದು, ಮಾಸಿಕ ಕರ ವಸೂಲಿಯನ್ನು ಜುಲೈನಿಂದ ಜಾರಿಗೊಳಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್​ಕುಮಾರ್ ತಿಳಿಸಿದ್ದಾರೆ.
ವಾಸದ ಮನೆಗಳು, ವಾಣಿಜ್ಯ ಕಟ್ಟಡಗಳು, ಹೆಚ್ಚು ತ್ಯಾಜ್ಯ ಉತ್ಪಾದಿಸುವ ಕೇಂದ್ರಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಘನತ್ಯಾಜ್ಯ ನಿರ್ವಹಣಾ ಉಪನಿಯಮಕ್ಕೆ ಅಂಕಿತ ಹಾಕಿದೆ. ತ್ಯಾಜ್ಯದ ಕರವನ್ನು ಮಾಸಿಕ ಅಥವಾ ವಾರ್ಷಿಕ ವಸೂಲಿ ಮಾಡುವ ಕುರಿತು ಗೊಂದಲಗಳಿದ್ದು, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು. ಜುಲೈ ಆರಂಭದಿಂದ ತ್ಯಾಜ್ಯ ಕರ ವಸೂಲಿ ಹಾಗೂ ದಂಡ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಇದನ್ನೂ ಓದಿ:ನ್ಯಾಯಾಲಯಗಳ ವಿರುದ್ಧ ವೃಥಾ ಟೀಕೆ ಅಕ್ಷಮ್ಯ
1.08 ಲಕ್ಷ ರೂ. ದಂಡ ವಸೂಲಿ: ಬಿಬಿಎಂಪಿ ಮಾರ್ಷಲ್​ಗಳು ನಗರದಲ್ಲಿ ಮಾಸ್ಕ್ ಹಾಕದ ಸಾರ್ವಜನಿಕರಿಂದ ತಲಾ 200 ರೂ. ದಂಡ ವಿಧಿಸುವ ಕಾರ್ಯವನ್ನು ಮಂಗಳವಾರ ಆರಂಭಿಸಿದ್ದಾರೆ. ಕಳೆದ ಎರಡು ದಿನದಲ್ಲಿ ಮಾಸ್ಕ್ ಹಾಕದೆ ಸಂಚಾರ ಮಾಡುತ್ತಿದ್ದ 544 ಜನರಿಗೆ 1,08,800 ರೂ. ದಂಡ ವಿಧಿಸಿದ್ದಾರೆ.
ಬಿಡದಿಯ ಎಂಎಸ್​ಐಎಲ್​ ಯಾರ್ಡ್​ನಲ್ಲಿ ವ್ಯರ್ಥವಾಗ್ತಿದೆ ಮಲೇಷ್ಯಾ ಮರಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + sixteen =
Remember me
