ಬಾಗಲಕೋಟೆ:ವ್ಯಕ್ತಿಯೊಬ್ಬನ ಕೊಲೆಯತ್ನ ಕೇಸ್​ನಲ್ಲಿ ಜೈಲು ಸೇರಿದ್ದವ ಜಾಮೀನು ಮೇರೆಗೆ ಹೊರ ಬಂದು ತನ್ನ ಪತ್ನಿಯನ್ನೇ ಭೀಕರವಾಗಿ ಕೊಂದ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ಸಂಗಾನಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಸುಮಿತ್ರಾ ಉಳ್ಳಾಗಡ್ಡಿ(48) ಯನ್ನು ಕೊಲೆ ಮಾಡಿದ ಪತಿ ಮಲ್ಲಪ್ಪ ಉಳ್ಳಾಗಡ್ಡಿ ಪರಾರಿಯಾಗಿದ್ದಾನೆ. ಜೈಲಿಂದ ಹೊರ ಬಂದಿದ್ದ ಮಲ್ಲಪ್ಪ, ಪತ್ನಿಯನ್ನು ಕೊಲ್ಲಲು ಹೊಂಚು ಹಾಕಿದ್ದ. ಅದರಂತೆ ಇಂದು ಆಕೆಯ ತಲೆ ಮತ್ತು ಮುಖಕ್ಕೆ ಗುದ್ದಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ.
ಪತ್ನಿ ಸುಮಿತ್ರಾಗೆ ಶ್ರೀಶೈಲ ಎಂಬಾತನೊಂದಿಗೆ ಅನೈತಿಕ ಸಂಬಂಧ ಇದೆ ಎಂದು ಅನುಮಾನಗೊಂಡಿದ್ದ ಮಲ್ಲಪ್ಪ, 2017ರಲ್ಲಿ ಜಗಳ ಮಾಡಿದ್ದ. ಅಲ್ಲದೆ ಶ್ರೀಶೈಲ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆಯನ್ನೂ ಮಾಡಿದ್ದ. ಈ ಪ್ರಕರಣ ಸಂಬಂಧ ಗಂಡನ ವಿರುದ್ಧ ಸುಮಿತ್ರಾ ಸಾಕ್ಷಿ ಹೇಳಿದ್ದಳು.
ಪತ್ನಿ ಮೇಲಿನ ಸೇಡು ತೀರಿಸಿಕೊಳ್ಳಲು ಹೊಂಚು ಹಾಕಿದ್ದ ಭೂಪ, ಜಾಮೀನಿನ ಮೇರೆಗೆ ಜೈಲಿಂದ ಹೊರ ಬಂದಿದ್ದ. ಮನೆ ಸಮೀಪ ಪತ್ನಿಯನ್ನು ಭೀಕರವಾಗಿ ಕೊಂದು ಎಸ್ಕೇಪ್​ ಆಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಯುವ ಮುನ್ನ ಅಪ್ಪನಿಗೆ ಊಟ ಬಡಿಸಿದರು, ಆ ನಂತರ ಅಕ್ಕ-ತಂಗಿ ಇಬ್ಬರೂ ನೇಣಿಗೆ ಶರಣಾದರು!

ಮದ್ವೆಗೆ 2 ದಿನ ಇದ್ದಂತೆ ವಧುಗೆ ಕೈಕೊಟ್ಟ ವರ​! ಮದ್ವೆ ದಿನ ವಾಪಸ್​ ಬಂದವನಿಂದ ಮತ್ತೊಂದು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 17 =
Remember me
