ಬಳ್ಳಾರಿ:ಸಿರುಗುಪ್ಪ ತಹಸೀಲ್ದಾರ್​ ಸತೀಶ ಬಿ.ಕೂಡ್ಲಿಗಿ ಅವರ ಪತ್ನಿ ಶಂಕ್ರಮ್ಮ ಮೃತದೇಹ ಗುರುವಾರ ಬೆಳಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ತಹಸೀಲ್ದಾರ್​ ಗೃಹ ಕಚೇರಿಯಲ್ಲಿ ಪತ್ತೆಯಾಗಿದೆ.
ಚುನಾವಣಾ ಕರ್ತವ್ಯ ಹಿನ್ನೆಲೆ ಇತ್ತೀಚೆಗೆ ಬಳ್ಳಾರಿ ಡಿಸಿ ಕಚೇರಿಗೆ ಸತೀಶ್​ ವರ್ಗವಣೆಯಾಗಿದ್ದರು. ಆದರೆ, ಸಿರುಗುಪ್ಪದಲ್ಲಿನ ಮನೆಯನ್ನು ಖಾಲಿ ಮಾಡಿರಲಿಲ್ಲ. ಅಲ್ಲಿ ಪತ್ನಿ ಶಂಕ್ರಮ್ಮ ಇದ್ದರು. ಇದೇ ಮನೆಯಲ್ಲಿ ಶಂಕ್ರಮ್ಮ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆಯೂ ವ್ಯಕ್ತವಾಗಿದೆ.ಇದನ್ನೂ ಓದಿರಿ6 ದಿನದ ಹಿಂದೆ ನಾಪತ್ತೆಯಾಗಿದ್ದ ತಾಯಿ-ಮಕ್ಕಳು ಊರ ಕೆರೆಯಲ್ಲಿ ಶವವಾಗಿ ಪತ್ತೆ!
ತಹಸೀಲ್ದಾರ್​ರ ಪತ್ನಿ ಮೃತಪಟ್ಟ ಸ್ಥಳಕ್ಕೆ ಎಸಿ ಕೋನಾರಡ್ಡಿ, ಶಾಸಕ ಸೋಮಲಿಂಗಪ್ಪ ಭೇಟಿ ನೀಡಿದ್ದರು. ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸೋಮಲಿಂಗಪ್ಪ, ಹಲವು ವರ್ಷಗಳಿಂದ ಶಂಕ್ರಮ್ಮ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನ ಹಲವು ಬಾರಿ ಆಸ್ಪತ್ರೆಗೂ ಕರೆದುಕೊಂಡು ಹೋಗಲಾಗಿತ್ತು. ಶಂಕ್ರಮ್ಮ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಬಗ್ಗೆ ಆಸ್ಪತ್ರೆಯ ದಾಖಲೆಗಳಿವೆ ಎಂದು ಮೃತರ ಕುಟುಂಬಸ್ಥರು ಹೇಳಿದ್ದಾರೆ ಎಂದರು.
ಆ ಮೂಲಕ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ತಹಸೀಲ್ದಾರ್​ರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪರೋಕ್ಷವಾಗಿ ಶಾಸಕರು ಹೇಳಿದಂತಾಗಿದೆ.
ಮನೆ ಪಾಠ ಹೇಳಿಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ, ಬಾಲಕಿ ಗರ್ಭಿಣಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
