ಬೆಂಗಳೂರು:ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ ಎಂದು  ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ. ಇದು ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿದೆ.
ರಾಷ್ಟ್ರೀಯ ಹಬ್ಬ, ನಾಡಹಬ್ಬ ಹಾಗೂ ಜಯಂತಿಗಳನ್ನು ಹೊರತುಪಡಿಸಿ, ಯುಗಾದಿ, ರಂಜಾನ್‌, ಕ್ರಿಸ್‌ಮಸ್‌ನಂತಹ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ. ಎಲ್ಲಾ ವಸತಿ ಶಾಲಾ- ಕಾಲೇಜುಗಳಲ್ಲಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಣೆ ಮಾಡಬೇಕು ಎಂದು ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ.
ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಈ ಸುತ್ತೋಲೆಯನ್ನು ಹೊರಡಿಸಿದೆ. ಕೇವಲ 10 ರಾಷ್ಟ್ರೀಯ ಹಬ್ಬಗಳ ಆಚರಣೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಧಾರ್ಮಿಕ ಹಬ್ಬಗಳನ್ನು ಆಚರಿಸಿದರೆ ಆಯಾ ಪ್ರಿನ್ಸಿಪಾಲರು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ.
1) ಗಣರಾಜ್ಯೋತ್ಸವ2) ಸ್ವಾತಂತ್ರ್ಯ ದಿನಾಚರಣೆ3) ಗಾಂಧಿ ಜಯಂತಿ4) ಕನ್ನಡ ರಾಜ್ಯೋತ್ಸವ5) ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ6) ವಾಲ್ಮೀಕಿ ಜಯಂತಿ7) ಕನಕದಾಸ ಜಯಂತಿ8) ಬಸವ ಜಯಂತಿ9) ಸಂವಿಧಾನ ಜಯಂತಿ10) ಯೋಗ ದಿನಾಚರಣೆ
ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಕಾಲೇಜುಗಳಲ್ಲಿ ಈ ಮೇಲಿನ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸುಬೇಕು. ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬವನ್ನು ಆಚರಿಸುವುದು ಕಂಡುಬಂದಲ್ಲಿ ಸಂಬಂಧ ಪಟ್ಟ ಪ್ರಾಂಶುಪಾಲ ಹಾಗೂ ಸಿಬ್ಬಂದಿ ವಿರುದ್ಧ ನಿಯಮನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
