ಧಾರವಾಡ:ಇಷ್ಟು ವರ್ಷ ಬಿಜೆಪಿಯಲ್ಲಿ ಸುಖ, ಶಾಂತಿ, ಸಂತೋಷ ಅನುಭವಿಸಿ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಪಕ್ಷ ತೊರೆದಿರುವುದು ದುರದೃಷ್ಟಕರ. ಪಕ್ಷದಿಂದ ಯಾರೇ ಹೋದರೂ ಬಿಜೆಪಿ ಬಹುಮತ ಬರುವುದು ಖಂಡಿತ. ಈ ದೇಶಕ್ಕೆ ನರೇಂದ್ರ ಮೋದಿ, ರಾಜ್ಯಕ್ಕೆ ಬಿಜೆಪಿ ಸರ್ಕಾರ ಬೇಕಿದೆ. ಈ ಬಾರಿ ಬಿಜೆಪಿಗೆ ಹೊಸ ನಾಯಕತ್ವ ಬರಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ:ನಾಮಪತ್ರ ಸಲ್ಲಿಸಿದ ಎಂಟಿಬಿ ನಾಗರಾಜ್ | 1510 ಕೋಟಿ ರೂ. ಆಸ್ತಿ ಘೋಷಣೆ; ಕಳೆದ ಬಾರಿಗಿಂತ 495 ಕೋಟಿ ರೂ. ಆಸ್ತಿ ಹೆಚ್ಚಳ
ಧಾರವಾಡ ಜಿಲ್ಲೆ ನವಲಗುಂದದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾತನಾಡುತ್ತಾ, ಬಿಜೆಪಿಯಲ್ಲಿ ಈ ಬಾರಿ ಎರಡನೇ ಸಾಲಿನ ನಾಯಕತ್ವ ಬರಲಿದ್ದು, ಲಿಂಗಾಯತರೇ ಮುಂದಿನ ಸಿಎಂ. ಸಾಕಷ್ಟು ಲಿಂಗಾಯತ ನಾಯಕರು ಇನ್ನೂ ಪಕ್ಷದಲ್ಲಿ ಇದ್ದಾರೆ ಎಂದು ಹೇಳಿದರು.
ಜಗದೀಶ್ ಶೆಟ್ಟರ್ ಮತ್ತಿತರು ಅನ್ಯಾಯ ಆಗಿದೆ ಎನ್ನುತ್ತಾರೆ. ಶಾಸಕ, ಮಂತ್ರಿ, ಸಿಎಂ, ಸ್ಪೀಕರ್, ಡಿಸಿಎಂ ಆಗಿ ಸುಖ ಉಂಡಿದ್ದಾರೆ. ದುಡಿಯಲಾರದೆ ದುಃಖ ಪಡಲಾರದೆ ಸುಖ ಉಂಡಿದ್ದಾರೆ. ದುಡಿಯುವವರೇ ಬೇರೆ, ಸುಖ ಉಂಡ ಇವರೇ ಬೇರೆ. ಹೋಗುವವೆರೆಲ್ಲ ಹೋಗಿ ಆಗಿದೆ. ಈಗ ಎಲ್ಲವೂ ನಮ್ಮ ಕೈಯಲ್ಲಿ ಬರುವುದಿದೆ ಎಂದು ಪರೋಕ್ಷವಾಗಿ ಜಗದೀಶ್ ಶೆಟ್ಟರ್ ವಿರುದ್ಧ ಕಿಡಿಕಾರಿದರು.
ಇದನ್ನೂ ಓದಿ:ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ; ದೇವೆಗೌಡರಿಂದ ಬಿ ಫಾರ್ಮ್ ಪಡೆಯುತ್ತಲೇ ಕಣ್ಣೀರು!
ಪ್ರಲ್ಹಾದ ಜೋಶಿ, ಬಿ.ಎಲ್. ಸಂತೋಷ್ ಯಾರೂ ಸಿಎಂ ಆಗುವುದಿಲ್ಲ. ಮತ್ತೊಮ್ಮೆ ಲಿಂಗಾಯತರೇ ಮುಖ್ಯಮಂತ್ರಿ ಆಗುತ್ತಾರೆ. ಪ್ರಲ್ಹಾದ ಜೋಶಿ ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ. ನಾನು ಸಿಎಂ ರೇಸ್‌ನಲ್ಲಿ ಇರುವೆ ಎಂದು ಹೇಳಲಾರೆ. ಕರ್ನಾಟಕದಲ್ಲಿ ಬಿಜೆಪಿಯದ್ದೇ ಸಿಎಂ ಆಗುತ್ತಾರೆ. ಜಗದೀಶ್ ಶೆಟ್ಟರ್, ಶಾಮನೂರ ಶಿವಶಂಕರಪ್ಪ, ಎಂ.ಬಿ. ಪಾಟೀಲ್ ಎಲ್ಲರೂ ಬೀಗರು. ಇವರೆಲ್ಲ ಒಂದೇ ಪಕ್ಷದಲ್ಲಿದ್ದಾರೆ. ಇಷ್ಟು ದಿನ ಬೀಗರು ಬೇರೆ ಬೇರೆ ಪಕ್ಷದಲ್ಲಿದ್ದು, ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದರು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಇದನ್ನೂ ಓದಿ:ಕಾಳ ಸಂತೆಯಲ್ಲಿ ಮಾರಾಟವಾಗುತ್ತಿವೆ ಟಿಕೆಟ್! ಐಪಿಎಲ್ ಟಿಕೆಟ್ ಹಗರಣ ಎಂದು ಕಿಡಿಕಾರಿದ ಫ್ಯಾನ್ಸ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
