ಮಂಡ್ಯ:ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೇ ಸೆಪ್ಟಂಬರ್ 12ರ ನಂತರ ಕಾವೇರಿ ಕೊಳ್ಳದ ಜಿಲ್ಲೆಗಳ ಜನರೊಂದಿಗೆ ಸೇರಿ ಕಾವೇರಿ ರಕ್ಷಣಾ ಯಾತ್ರೆ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆಆರ್​ಎಸ್​ಗೆ ಭೇಟಿ ನೀಡಿ ನೀರಿನ ವಸ್ತು ಸ್ಥಿತಿ ಪರಿಶೀಲನೆಯ ನಂತರ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಈ ವರ್ಷ ಮಳೆ ಕೊರತೆಯಾಗಿರುವುದು ಮೇ, ಜೂನ್ ತಿಂಗಳ ಪ್ರಾರಂಭದಲ್ಲಿಯೇ ಗೊತ್ತಾಗಿದೆ. ಆದರೂ ಸರ್ಕಾರ ಸಂಪೂರ್ಣವಾಗಿ ಕಾವೇರಿ ವ್ಯಾಪ್ತಿಯ ನಾಲ್ಕು ಡ್ಯಾಮ್​ಗಳ ನಿರ್ವಹಣೆಯಲ್ಲಿ ವಿಫಲವಾಗಿದೆ‌. ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್​ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ ಎಂದು ಕಿಡಿಕಾರಿದ್ದಾರೆ.
ತಮಿಳುನಾಡಿನವರು 15000 ಕ್ಯೂಸೆಕ್ಸ್ ನೀರು ಕೇಳಿದ ಮೇಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೇ ಕಾಲ ಹರಣ ಮಾಡಿದೆ. ತಮಿಳುನಾಡಿನವರು ಕುರುವೈ ಬೆಳೆಗೆ ಈಗಾಗಲೇ 32 ಟಿಎಂಸಿ ಬದಲು 60 ಟಿಎಂಸಿ ನೀರು ಬಳಕೆ ಮಾಡಿಕೊಂಡಿದ್ದಾರೆ. ಆದರೂ ಅವರ ಬೇಡಿಕೆಯಂತೆ ಪ್ರತಿದಿನ ನೀರು ಹರಿಸುತ್ತಿದ್ದಾರೆ. ಈ ಬಗ್ಗೆ ಸರ್ವ ಪಕ್ಷ ಸಭೆಯಲ್ಲೆ ಕೇಳಿದಾಗ ಇನ್ನು ಮುಂದೆ ನೀರು ಬಿಡುವುದಿಲ್ಲ ಅಂತ ಹೇಳಿ, ನಿರಂತರ ನೀರು ಹರಿಸುತ್ತಿದ್ದಾರೆ. CWC ಎದುರು ಸರಿಯಾಗಿ ವಾದ ಮಾಡಿದ್ದರೆ ಸುಮಾರು 15 ಟಿಎಂಸಿ ನೀರು ಉಳಿಯುತ್ತಿತ್ತು.
ರಾಜ್ಯ ಸರ್ಕಾರ ಸೆ. 12ನೇ ತಾರೀಖಿನ ನಂತರವೂ ನೀರು ಬಿಡುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ವಿಚಾರಣೆ ನಡೆಯುವವರೆಗೂ ನೀರು ಹರಿಯುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಮಂಡ್ಯ ಜಿಲ್ಲೆಯೊಂದರಲ್ಲೇ ಸುಮಾರು 4 ಲಕ್ಷ ಎಕರೆ ಬೆಳೆ ಒಣಗುತ್ತಿದೆ. ಕೃಷಿ ಅಧಿಕಾರಿಗಳು ಒಣ ಬೇಸಾಯದ ಬೆಳೆ ಬೆಳೆಯುವಂತೆ ಸೂಚನೆ ನೀಡುತ್ತಿದ್ದಾರೆ. ತಮಿಳುನಾಡಿನ ಬೆಳೆಗೆ ನೀರು ಹರಿಸುತ್ತಿದ್ದಾರೆ.
ಕೆಆರ್ ಎಸ್ ಡ್ಯಾಮ್ ನಲ್ಲಿ ಕೇವಲ 13 ಟಿಎಂಸಿ ನೀರು ಮಾತ್ರ ಬಳಕೆಗೆ ಇದೆ. ಮುಂದಿನ ಮೇವರೆಗೂ ಇನ್ನೂ ಎರಡು ಟಿಎಂಸಿ ನೀರು ಆವಿಯಾಗಿ ಹೋಗುತ್ತದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ರಾಜ್ಯದ ಜನರು ಇದನ್ನು ಕ್ಷಮಿಸುವುದಿಲ್ಲ. ರಾಜ್ಯ ಸರ್ಕಾರ ಇದುವರೆಗೂ ನಮ್ಮ ರೈತರಿಗೆ 33 ಟಿಎಂಸಿ ನೀರು ಬಿಡಬೇಕಿತ್ತು. ಕೇವಲ 7 ಟಿಎಂಸಿ ನೀರು ಬಿಟ್ಟಿದ್ದಾರೆ, ನಮ್ಮ ರೈತರು ಎಲ್ಲಿಗೆ ಹೋಗಬೇಕು. ಕಾವೇರಿ ಭಾಗದ ಜನರು ನಿಮಗೆ ಬಹುಮತ‌ ನೀಡಿದ್ದಾರೆ. ಅವರಿಗೆ ಇದೇ ಬಹುಮಾನಾನಾ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ದಲಿತ ಮಹಿಳೆ ಮೇಲೆ ದೌರ್ಜನ್ಯ ಎಸಗಿ ಬಲವಂತವಾಗಿ ಗೋಮಾಂಸ ತಿನ್ನಿಸಿದ ದುರುಳರು
ಡಿಸಿಎಂ ಡಿಕೆ ಶಿವಕುಮಾರ್ ಅವರು ಮೇಕೆದಾಟು ಬಗ್ಗೆ ಹೇಳಿದ್ದಾರೆ. ನ್ಯಾಷನಲ್ ಹೈಡ್ರೊ ಎಲೆಕ್ಟ್ರಿಕ್ ಕಾರ್ಪೊರೇಶನ್​ನವರು ವಿದ್ಯುತ್ ಉತ್ಪಾದನೆಗೆ ನಾಲ್ಕು ಡ್ಯಾಮ್​ಗಳಿಗೆ ಅನುಮತಿ ನೀಡಿದ್ದರು. ಆದರೆ, ತಮಿಳುನಾಡು ವಿರೋಧ ಮಾಡಿತು. ನಾನು 2012ರಲ್ಲಿ ನೀರಾವರಿ ಸಚಿವನಾಗಿದ್ದಾಗ ಮೇಕೆದಾಟು ಯೋಜನೆ ಮಾಡಲು ತೀರ್ಮಾನಿಸಿ, ಫಿಜಿಬಿಲಿಟಿ ರಿಪೋರ್ಟ್ ಸಿದ್ದಪಡಿಸಿದ್ದೇವು. ಡಿಪಿಆರ್ ಸಿದ್ದಪಡಿಸುವ ಸಂದರ್ಭದಲ್ಲಿ ಕಾಂಗ್ರೆಸ್​ನವರು ಮೇಕೆದಾಟು ಪಾದಯಾತ್ರೆ ಮಾಡಿದರು. ಪ್ರಕರಣ ಕೋರ್ಟ್​ನಲ್ಲಿದೆ ಅಂತ ಹೇಳಿದಾಗ ಒಪ್ಪಲಿಲ್ಲ. ಈಗ ಅವರೇ ಸತ್ಯ ಒಪ್ಪಿಕೊಂಡಿದ್ದಾರೆ.
ರೈತ ಸಂಘದವರು ಕಾವೇರಿ ರಕ್ಷಣೆಗೆ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದಾರೆ. ನಾವು ರಾಜಕಾರಣ ಮಾಡಬಾರದು ಅಂತ ಕಾದು ನೋಡಿದೆವು. CWC ಸಭೆ ಕರೆಯುವ ಮೊದಲು ನಾನು ಸಿಎಂಗೆ ಪತ್ರ ಬರೆದಿದ್ದೆ, ಸರ್ವಪಕ್ಷ ಸಭೆ ಕರೆಯುವಂತೆ ಒತ್ತಡ ಹೇರಿದ್ದೇವೆ. ಸರ್ಕಾರ ಈಗಲೂ ನೀರು ಹರಿಸುವುದನ್ನು ತಡೆಯುವಂತೆ ಒತ್ತಡ ಹೇರಲು ವಸ್ತುಸ್ಥಿತಿ ಅರಿಯಲು ಬಂದಿದ್ದೇವೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ‌ನಾಯಕರ ಹೇಳಿಕೆಗಳನ್ನು ನೋಡಿದರೆ, ತಮಿಳುನಾಡಿನ ಓಲೈಕೆಗೆ ರಾಜಕಾರಣ ಮಾಡುತ್ತಿದ್ದಾರೆ. ಕಾವೇರಿ ಹಿನ್ನೀರು ಸಂಪೂರ್ಣ ಖಾಲಿಯಾಗಿದೆ. ಸರ್ಕಾರ ಇನ್ನೂ ನೀರು ಹರಿಸಿದರೆ ಈ ಪರಿಸ್ಥಿತಿಯಲ್ಲಿ ನಾವು ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:2 + 9 =
Remember me
