ಬೆಂಗಳೂರು:ಬನ್ನೇರುಘಟ್ಟ ಸಮೀಪದ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬನ ಶವ ಕತ್ತು ಕೊಯ್ದುಕೊಂಡ‌ ಸ್ಥಿತಿಯಲ್ಲಿ ಹಾಸ್ಟೆಲ್​ನಲ್ಲಿ ಪತ್ತೆಯಾಗಿದ್ದು, ತಂದೆ-ತಾಯಿ ಬರಲಿಲ್ಲ ಎಂಬ ವಿಚಾರವೇ ಸಾವಿಗೆ ಕಾರಣವಾಯ್ತು ಎನ್ನಲಾಗಿದೆ.
ಕೇರಳದ ಕೋಳಿಕೋಡ್ ಜಿಲ್ಲೆಯ ಪದಿನಿ ಜರಿಯಾ ಗ್ರಾಮದ ನಿಧಿನ್ (19) ಮೃತ ದುರ್ದೈವಿ. ಎಎಂಸಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ಕೋರ್ಸಿಗೆ ಡಿ.1ರಂದು ಅಡ್ಮಿಶನ್​ ಪಡೆದಿದ್ದ. ಈ ವೇಳೆ ಈತನ ತಂದೆ-ತಾಯಿ ಬಂದಿರಲಿಲ್ಲವಂತೆ. ಸಹೋದರನ ಜತೆ ಬಂದು ಕಾಲೇಜಿಗೆ ದಾಖಲಾಗಿದ್ದ. ದುಬೈನಲ್ಲಿ ವಾಸವಿರುವ ತಂದೆ-ತಾಯಿಗೆ ಪದೇಪದೆ ಫೋನ್​ ಮಾಡುತ್ತಿದ್ದ ನಿಧಿನ್​, ಬರುವಂತೆ ಮನವಿ ಮಾಡುತ್ತಿದ್ದನಂತೆ. ತನ್ನಿಂದ ಅಪ್ಪ-ಅಮ್ಮ ದೂರವಿದ್ದಾರೆ ಎಂದು ಮನನೊಂದ ನಿಧಿನ್​, ಕಾಲ್​ ಮಾಡಿ ಜಗಳವನ್ನೂ ಮಾಡಿದ್ದನಂತೆ. ಇದೇ ವಿಚಾರಕ್ಕೆ ಮನನೊಂದು ಕತ್ತು ಕೊಯ್ದುಕೊಂಡು ಸತ್ತಿರುವ ಶಂಕೆ ವ್ಯಕ್ತವಾಗಿದೆ.
ಕಾಲೇಜಿನ ಕ್ಯಾಂಪಸ್ ಒಳಗಿನ ಹಾಸ್ಟೆಲ್​​ನಲ್ಲಿ ಸಹಪಾಠಿಯೊಬ್ಬರ ಜತೆ ರೂಂನಲ್ಲಿ ವಾಸವಿದ್ದ ನಿಧಿನ್​, ನಿನ್ನೆ(ಬುಧವಾರ) ಮಧ್ಯಾಹ್ನ ಹಾಸ್ಟೆಲ್ ಕೊಠಡಿಯ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ. ಹಾಸ್ಟೆಲ್​ನ ಸಹಪಾಠಿ ಬಂದು ಬಾಗಿಲು ಬಡಿದರೂ ನಿಧಿನ್​, ತೆರೆದಿರಲಿಲ್ಲ. ಈ ಬಗ್ಗೆ ಸಹಪಾಠಿ ಹಾಸ್ಟೆಲ್ ವಾರ್ಡನ್​ಗೆ ತಿಳಿಸಿದ್ದ. ವಾರ್ಡನ್ ಹಾಗೂ ಸಿಬ್ಬಂದಿ ಬಂದು ಬಾಗಿಲು ಒಡೆದು ಒಳ ಹೋಗಿ ನೋಡಿದಾಗ ಕತ್ತು ಕೊಯ್ದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಬನ್ನೇರುಘಟ್ಟ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮಂಡ್ಯದಲ್ಲಿ ಕಾಮುಕ ಶಿಕ್ಷಕನಿಗೆ ಅಟ್ಟಾಡಿಸಿ ಹೊಡೆದ ವಿದ್ಯಾರ್ಥಿನಿಯರು! ಧೈರ್ಯ ತೋರಿದ ಹೆಣ್ಣು ಮಕ್ಕಳಿಗೆ ಸಚಿವರ ಬಹುಪರಾಕ್​

ಪತ್ನಿಯ ಕಿರುಕುಳ: ಮದ್ವೆಯಾದ ಮೂರೇ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಪತಿ

ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 7 =
Remember me
