ಬನ್ನೇರುಘಟ್ಟ:ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಪಂಜರದಿಂದ ತಪ್ಪಿಸಿಕೊಂಡ ಕರಡಿಯೊಂದು ಜೂ ವಾಹನ ಚಾಲಕರೊಬ್ಬರ ಮೇಲೆ ದಾಳಿ ನಡೆಸಿದ್ದು, ಅವರ ತಲೆಗೆ ತೀವ್ರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೂ ವಾಹನದ ಚಾಲಕ ಜಯಶಂಕರ್ ಗಾಯಗೊಂಡವರು.
ಗಂಭೀರವಾಗಿ ಗಾಯಗೊಂಡಿರುವ ಜಯಶಂಕರ್ ಅವರನ್ನು ಜಿಗಣಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವಾರು ವರ್ಷಗಳಿಂದ ಜೈವಿಕ ಉದ್ಯಾನವನದ ಚಾಲಕರಾಗಿರುವ ಶಿವಮೊಗ್ಗ ಮೂಲದ ಜಯಶಂಕರ್ ಅವರನ್ನು ಜೈವಿಕ ಉದ್ಯಾನದ ವನಶ್ರೀ ವಿಪಿನ ಸಿಂಗ್ ಅವರು ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ.
ಇದನ್ನೂ ಓದಿ:ಮೈಮೇಲೇ ಲಾರಿ ಚಲಿಸಿ 3 ವರ್ಷದ ಮಗು ಸ್ಥಳದಲ್ಲೇ ಸಾವು; ಪುತ್ರಿಯೊಂದಿಗೆ ದಂಪತಿ ಸಾಗುತ್ತಿದ್ದ ಬೈಕ್​ಗೆ ಲಾರಿ ಡಿಕ್ಕಿ
ತುಮಕೂರಿನ ಸಿದ್ದಗಂಗಾ ಮಠದ ಬಳಿ ಕಾಣಿಸಿಕೊಂಡಿದ್ದ ಕರಡಿಯನ್ನು ಸೆರೆ ಹಿಡಿದು, ನಂತರ ಅದನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ರವಾನೆ ಮಾಡಲಾಗಿತ್ತು. 9 ವರ್ಷದ ಈ ಗಂಡು ಕರಡಿ 120 ಕೆ.ಜಿ.ಗೂ ಅಧಿಕ ತೂಕ ಇತ್ತು. ಶಕ್ತಿಶಾಲಿಯಾಗಿದ್ದ ಕರಡಿ ಪಂಜರದ ಕೆಳಭಾಗವನ್ನು ಹಾನಿಗೊಳಿಸಿತ್ತು. ಆದರೆ ಈ ಬಗ್ಗೆ ಗೊತ್ತಾಗದೆ ಪಂಜರವನ್ನು ಹಿಂದಕ್ಕೆ ಎಳೆದಾಗ ತಪ್ಪಿಸಿಕೊಂಡ ಕರಡಿ, ಜಯಶಂಕರ್ ಮೇಲೆ ದಾಳಿ ನಡೆಸಿ, ಗಾಯಗೊಳಿಸಿ ಪರಾರಿಯಾಗಿದೆ.
ತಪ್ಪಿಸಿಕೊಂಡಿರುವ ಕರಡಿಗಾಗಿ ಹುಡುಕಾಟ ಮುಂದುವರಿದಿದೆ. ಕರಡಿ ಪತ್ತೆಗೆಂದೇ ಎರಡು ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಪಂಜರ ಹಾನಿಗೊಂಡಿರುವುದು ಗೊತ್ತಿದ್ದೂ ತುಮಕೂರಿನಿಂದ ಅದರಲ್ಲೇ ಕರಡಿಯನ್ನು ಕಳುಹಿಸಿದ್ದಾರೆ ಎನ್ನಲಾಗಿದೆ. ಸದ್ಯ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಹುಚ್ಚನ ಕುಂಟೆ ಕೆರೆ ಸುತ್ತಮುತ್ತ ಕಾರ್ಯಾಚರಣೆ ನಡೆಯುತ್ತಿದ್ದು, ಇದುವರೆಗೂ ಕರಡಿಯ ಸುಳಿವು ಸಿಕ್ಕಿಲ್ಲ.
ಇದನ್ನೂ ಓದಿ:ಗಂಡ ಮಾರ್ಕೆಟ್​ನಲ್ಲಿ ಬೇರೆ ಹೆಂಗಸಿನ ಜತೆಗಿದ್ದ; ಅದನ್ನು ಕಂಡ ಹೆಂಡತಿ ಬೀದಿರಂಪ ಮಾಡಿದ್ಲು; ಮದ್ವೆಯಾಗಿ ಒಂದೇ ವರ್ಷಕ್ಕೆ ಹೀಗೆಲ್ಲ…
ಎರಡನೇ ಮದ್ವೆ ಆಗಲು ಹೊರಟವನನ್ನು ಸ್ಥಳಕ್ಕೇ ತೆರಳಿ ತಡೆದ ಪತ್ನಿ; ಠುಸ್ ಆಯ್ತು ಒಬ್ಳಿಗೆ ಕೈಕೊಟ್ಟು ಇನ್ನೊಬ್ಬಳ ಕೈಹಿಡಿಯೋ ಯತ್ನ

1ರಿಂದ 9ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ ಕೊಡಲಿದೆ ಸರ್ಕಾರ- ಎಲ್ಲರೂ ಪಾಸ್​ ಪಾಸ್​….

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × two =
Remember me
