ರಾಮನಗರ: ಚನ್ನಪಟ್ಟಣ ನಗರದಲ್ಲಿ ಇದೇ ಮೊದಲ ಸಲ ಕರಡಿಗಳ ದಾಳಿ ನಡೆದಿದ್ದು, ಬುಧವಾರ ಬೆಳಗ್ಗೆ ರಂಗೋಲಿ ಹಾಕುತ್ತಿದ್ದ ನಗರಸಭೆಯ ಮಾಜಿ ಸದಸ್ಯೆ ಸಾಕಮ್ಮ ಅವರ ಮೇಲೆ ದಾಳಿ ಎಸಗಿವೆ. ಗಂಭೀರ ಗಾಯಗೊಂಡಿರುವ ಅವರನ್ನು ಕೂಡಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಇದನ್ನೂ ಓದಿ:ತಳವಾರ, ಪರಿವಾರಕ್ಕೆ ಪರಿಶಿಷ್ಟ ಪಂಗಡ ಪ್ರಮಾಣಪತ್ರ ನೀಡಿ
ನಗರದ ಡೂಮ್​ಲೈಡ್ ಸರ್ಕಲ್ ಬಳಿ ಸಾಕಮ್ಮ ಅವರ ಮನೆ ಇದ್ದು, ಮುಂಜಾನೆ 5 ಗಂಟೆಗೆ ಮನೆ ಬಾಗಿಲಿಗೆ ರಂಗೋಲಿ ಹಾಕುತ್ತಿದ್ದ ವೇಳೆ ಕರಡಿಗಳು ದಾಳಿ ನಡೆಸಿವೆ. ಕೂಡಲೇ ಸಾಕಮ್ಮ ಕಿರುಚಾಡಿದ್ದು, ಜನ ಸೇರುವ ಹೊತ್ತಿಗೆ ಕರಡಿಗಳು ಬಳಿಕ ಅಲ್ಲಿಂದ ಮುಂದೆ ಯಾವ ಕಡೆ ಹೋಗಿವೆ ಎಂಬುದು ಗೊತ್ತಾಗಿಲ್ಲ. ಸಾಕಮ್ಮ ಮುಖವನ್ನು ಸಂಪೂರ್ಣ ಘಾಸಿಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ:ಸರ್ಕಾರದ ವಿರುದ್ಧ ಡಿಕೆಶಿ ಆಕ್ರೋಶ ಹೋರಾಟ ನಡೆಸುವ ಎಚ್ಚರಿಕೆ
ಪ್ರಾಥಮಿಕ ಮಾಹಿತಿ ಪ್ರಕಾರ, ಏಳು ಕರಡಿಗಳ ಗುಂಪು ಈ ದಾಳಿ ನಡೆಸಿದ್ದು ಅವು ಬಂದಿರುವುದು ಎಲ್ಲಿಂದ ಎಂಬುದೂ ಗೊತ್ತಿಲ್ಲ. ಚನ್ನಪಟ್ಟಣ ಸುತ್ತಮುತ್ತ ದಟ್ಟಾರಣ್ಯಗಳು ಇಲ್ಲದ ಅವುಗಳ ಆಗಮನದ ಮೂಲ ಪತ್ತೆ ಕಷ್ಟವಾಗಿದೆ. ಈ ಭೀಕರ ದಾಳಿ ನಗರವಾಸಿಗಳಲ್ಲಿ ಭಯ, ಆತಂಕ ಸೃಷ್ಟಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಈಗ ಈ ಕರಡಿಗಳ ಸೆರೆಗಾಗಿ ಶೋಧ ಕಾರ್ಯ ಶುರುಮಾಡಿದ್ದಾರೆ.
ಸತ್ತವ ಎದ್ದು ಬಂದ; ಮತ್ತೆ ಸತ್ತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − five =
Remember me
