ನವದೆಹಲಿ:ರಾಜ್ಯದ ಬೆಳಗಾವಿ ಲೋಕಸಭೆ ಹಾಗೂ ಬಸವ ಕಲ್ಯಾಣ, ಮಸ್ಕಿ ವಿಧಾನಸಭೆ ಉಪ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ.
ಈ ಮೂರೂ ಕ್ಷೇತ್ರಗಳಿಗೆ ಏಪ್ರೀಲ್ 17 ರಂದು ಮತದಾನ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.
ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ತೆರವಾಗಿತ್ತು. ಶಾಸಕರಾಗಿದ್ದ ಬಿ ನಾರಾಯಣರಾವ್ ನಿಧನದಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಇನ್ನು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಪ್ರತಾಪ್​ಗೌಡ ಪಾಟೀಲ ಅವರಿಂದ ಕ್ಷೇತ್ರ ತೆರವಾಗಿತ್ತು. ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾಗಿದ್ದ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಆಯೋಗ ಪ್ರಕಟಿಸಿಲ್ಲ.
ಈಗ ಈ ಮೂರೂ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದರಿಂದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಅಧಿವೇಶನ ಮೊಟಕು?
ಬೆಂಗಳೂರು: ಉಪ ಚುನಾವಣೆಗೆ ದಿನಾಂಕ ಪ್ರಕಟವಾಗಿರುವುದರಿಂದ ವಿಧಾನಸಭೆ ಅಧಿವೇಶನವನ್ನು ಮೊಟಕುಗೊಳಿಸುವ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಪೂರ್ವ ನಿರ್ಧರಿತ ವೇಳಾಪಟ್ಟಿ ಪ್ರಕಾರ ಮಾ.31ರವರೆಗೂ ಕಲಾಪ ನಡೆಯುವುದೆಂದ ವೇಳಾಪಟ್ಟಿ ನಿಗದಿಯಾಗಿತ್ತು. ಉಪ ಚುನಾವಣೆ ಕಾರಣಕ್ಕೆ ಕಲಾಪವನ್ನು ಮಾ.26ಕ್ಕೆ ಅಂತಿಮಗೊಳಿಸುವ ಕುರಿತು ವಿಚಾರ ವಿನಿಮಯ ನಡೆದಿದೆ ಎಂದು ತಿಳಿದುಬಂದಿದೆ. ಬಜೆಟ್ ಮೇಲಿನ ಚರ್ಚೆಯನ್ನು ಶುಕ್ರವಾರದೊಳಗೆ ಮುಗಿಸಿ ಸೋಮವಾರ ಮುಖ್ಯಮಂತ್ರಿಯವರು ಉತ್ತರ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಆಡಳಿತ ಪಕ್ಷದ ಮೊಗಸಾಲೆಯಲ್ಲಿ ಚರ್ಚೆ ನಡೆದಿತ್ತು. ಮಾ.22ರಿಂದ 26ವರೆಗೆ ವಿವಿಧ ವಿಧೇಯಕಗಳು ಮತ್ತು ಸರ್ಕಾರಿ ಕಾರ್ಯಕಲಾಪ ಮಾಡುವ ಸಾಧ್ಯತೆ ಇದೆ.
ಟಿಂಎಂಸಿ ಕೊಟ್ಟ ಶಾಕ್​ಗೆ ರಾಜ್ಯಸಭಾ ಸದಸ್ಯ ಸ್ಥಾನವನ್ನೇ ತೊರೆದ ಬಿಜೆಪಿ ಮುಖಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + nine =
Remember me
