ಬೆಳಗಾವಿ:ಕ್ಷುಲ್ಲಕ ಕಾರಣಕ್ಕೆ ನಡೆದ ಯುವಕರಿಬ್ಬರ ಬರ್ಬರ ಹತ್ಯೆಯು ಬೆಳಗಾವಿ ಜನತೆಯನ್ನು ಬೆಚ್ಚಿಬೀಳಿಸಿದೆ. ನಗರದ ಹೊರ ವಲಯದಲ್ಲೇ ಈ ಘಟನೆ ನಡೆದಿದ್ದು, ಜನರನ್ನು ಆತಂಕಕ್ಕೆ ದೂಡಿದೆ.
ಬಸವರಾಜ್ ಬೆಳಗಾಂವ್ಕರ್ (22), ಗಿರೀಶ್​ ನಾಗಣ್ಣವರ (22) ಹತ್ಯೆಯಾದ ಯುವಕರು. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಯುವಕರು ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ಆಡುತ್ತಿದ್ದರು. ಈ ವೇಳೆ ಮೈದಾನಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ವಾಹನ ನುಗ್ಗಿಸಿದ್ದ.
ಮೈದಾನದಲ್ಲಿ ವಾಹನ ನುಗ್ಗಿಸಿದಕ್ಕೆ ಯುವಕರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಸಿಟ್ಟಾದ ಚಾಲಕ, ವಾಹನದಿಂದ ಕೆಳಗಿಳಿದು ಚಾಕುವಿನಿಂದ ಚುಚ್ಚಿ ಯುವಕರಿಬ್ಬರನ್ನು ಬರ್ಬರ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ. ಇಷ್ಟು ಸಣ್ಣ ವಿಚಾರಕ್ಕೆ ಇಬ್ಬರನ್ನು ಕೊಲೆ ಮಾಡುತ್ತಾರಾ? ಎಂಬ ಚರ್ಚೆಯ ಜೊತೆಗೆ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಘಟನಾ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾಡಿ, ಎಸಿಪಿ ನಾರಾಯಣ ಭರಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕರಿಬ್ಬರ ಮೃತದೇಹಗಳನ್ನು ಬಿಮ್ಸ್‌ ಆಸ್ಪತ್ರೆಗೆ ರವಾನಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಕೆಎಸ್ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.(ದಿಗ್ವಿಜಯ ನ್ಯೂಸ್​)
ಕೇವಲ 26ನೇ ವಯಸ್ಸಿನಲ್ಲಿ 21 ಮದ್ವೆ ಮಾಡ್ಕೊಂಡ ಭೂಪ! ಈ ಒಂದು ಕಾರಣಕ್ಕೆ ಯುವತಿಯರ ಹಿಂದೆ ಬಿದ್ದ ಕಿರಾತಕ

ಭಾರತೀಯರ ಮುಂದೆ ತಪ್ಪೊಪ್ಪಿಕೊಂಡ ಸನ್ನಿ ಲಿಯೋನ್! ಕಹಿ ಘಟನೆ ಬಿಚ್ಚಿಟ್ಟ ಮಾಜಿ ನೀಲಿ ತಾರೆ​

ಬಿಚ್ಚಮ್ಮಳ ಮೇಕಪ್​ ಇಲ್ಲದ ಅವತಾರ ಕಂಡು ಬೆರಗಾದ ನೆಟ್ಟಿಗರು! ಪೂರ್ತಿ ಬಟ್ಟೆಯಲ್ಲಿ ಗುರುತಿಸೋದು ಕಷ್ಟವೆಂದ ನೆಟ್ಟಿಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − four =
Remember me
