ಬೆಂಗಳೂರು:ಬ್ರಿಜೇಶ್ ರೆಡ್ಡಿ ಎಂಬ ಉದ್ಯಮಿ ತಾನು ಉದ್ಯಮದಲ್ಲಿ ವಿಪರೀತ ನಷ್ಟ ನೋಡಿದ ಕಾರಣ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್ ತಾಲ್ಲೂಕಿನ ಹುಲ್ಲಹಳ್ಳಿಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:77ನೇ ಸ್ವಾತಂತ್ರ್ಯ ದಿನಾಚರಣೆಗೆ ವೇದಿಕೆ ಸಜ್ಜು; ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಬನ್ನೇರುಘಟ್ಟ ಸಮೀಪದ ಹುಲ್ಲಹಳ್ಳಿಯ ಮ್ಯಾಂಗೋ ಎಕ್ರೆಸ್ ಲೇಔಟ್​​ನಲ್ಲಿ ಘಟನೆ ಸಂಭವಿಸಿದ್ದು, ಬ್ರೀಜೆಶ್ ರೆಡ್ಡಿ ಎಂಬ ಉದ್ಯಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಬಿಸಿನೆಸ್​ ಮಾಡುತ್ತಿದ್ದ ವ್ಯಕ್ತಿ, ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್​ನಲ್ಲಿ ಮನೆ ಹಾಗೂ ಆಫೀಸ್ ಮಾಡಿಕೊಂಡಿದ್ದರು. ಇತ್ತೀಚೆಗೆ ಉದ್ಯಮದಲ್ಲಿ ಸಾಕಷ್ಟು ನಷ್ಟ ನೋಡಿದ ಕಾರಣ, ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬೀಗಿದುಕೊಂಡು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:Santosh Lad Slams BJP, JDS | ಬಿಜೆಪಿ, ಜೆಡಿಎಸ್​ ಸೇರಿ ಕಾಂಗ್ರೆಸ್​ ಇಮೇಜ್​ ಡ್ಯಾಮೇಜ್​ ಮಾಡ್ತಿದೆ: ಸಂತೋಷ್ ಲಾಡ್​
“ತಮ್ಮ ಹೆಚ್.ಎಸ್‌.ಆರ್ ಬಳಿಯ ನಿವಾಸವನ್ನು ಮಾರಾಟ ಮಾಡಿದ್ದ ಮೃತ ಬ್ರಿಜೇಶ್ ರೆಡ್ಡಿ, ಉದ್ಯಮದಲ್ಲಿ ನಷ್ಟ ಹೊಂದಿದ್ದ ಹಿನ್ನೆಲೆ ತೀವ್ರ ಮನನೊಂದಿದ್ದರು. ಹಾಗಾಗಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ. ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ ಬನ್ನೇರುಘಟ್ಟ ಪೋಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ವೈರಲ್​ ಆಯ್ತು ನಟ ಶಿವಕಾರ್ತಿಕೆಯನ್​ ‘ಸಿಕ್ಸ್ ಪ್ಯಾಕ್​’ ಫೋಟೋ; ಇದು ಫೇಕ್​ ಎಂದ ಚಿತ್ರತಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − four =
Remember me
