ಬೆಂಗಳೂರು:ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಬೆಂಗಳೂರು ಬಂದ್​ ಆಚರಣೆ ಮಾಡುತ್ತಿದ್ದು, ವಿವಿಧ ಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್​ ಕೂಡ ಬಂದ್​ಗೆ ಬೆಂಬಲ ನೀಡಿದ್ದು, ರಾಜಧಾನಿ ಇಂದು ಭಾಗಶಃ ಸ್ತಬ್ಧವಾಗಿದೆ.
ಹೊರ ರಾಜ್ಯಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ ವಿಮಾನಗಳು ಬಂದ್​ ಹಿನ್ನೆಲೆಯಲ್ಲಿ ಪ್ರಯಾಣಿಕರಿಲ್ಲದೆ ರದ್ದಾಗಿವೆ. ಕೊಚ್ಚಿ, ದೆಹಲಿ, ಮುಂಬೈ ಮತ್ತು ಮಂಗಳೂರು ವಿಮಾನಗಳು ರದ್ದಾಗಿವೆ. ಈ ವಿಮಾನಗಳು ಇಂದು ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿತ್ತು. ಒಟ್ಟು 13 ವಿಮಾನಗಳು ಕೊನೇ ಕ್ಷಣದಲ್ಲಿ ರದ್ದಾಗಿವೆ.
ಕಾವೇರಿಗಾಗಿ ಬೆಂಗಳೂರು ಬಂದ್ ಹಿನ್ನಲೆಯಲ್ಲಿ ಜೆಡಿಎಸ್​ ನಾಯಕರು ನಗರದ ಜೆಡಿಎಸ್‌ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ತಮಿಳುನಾಡಿಗೆ ನೀರನ್ನ ಬಿಡದಂತೆ ಒತ್ತಾಯ ಮಾಡಿದರು. ಮಹಿಳಾ ಕಾರ್ಯಕರ್ತೆಯರು ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು. ನಗರದಲ್ಲಿ 144 ಸೆಕ್ಷನ್​ ಇರುವುದರಿಂದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಇದನ್ನೂ ಓದಿ:ಮಾರಮ್ಮನ ಜಾತ್ರೆಗೆ ಬಂದವರು ಮಸಣಕ್ಕೆ: ಮಧುಗಿರಿಯಲ್ಲಿ ರಸ್ತೆ ಅಪಘಾತಕ್ಕೆ ಮೂವರು ಬಲಿ
ಬೆಂಗಳೂರು ಬಂದ್‌ ಹತ್ತಿಕ್ಕಲು ಕೆಲಸ ಮಾಡಿದ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಇಂದು ಸಂಜೆ ರೈತ ಸಂಘಟನೆ ಮತ್ತು ಕನ್ನಡ ಪರ ಸಂಘಟನೆಯಿಂದ ಮತ್ತೊಂದು ಸಭೆ ನಡೆಯಲಿದೆ. ಸಭೆಯಲ್ಲಿ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಸೇರಿ ಹಲವು ಸಂಘಟನೆಗಳ ನಾಯಕರು ಭಾಗಿಯಾಗಲಿದ್ದು, ಮುಂದಿನ ದಿನ ಸರ್ಕಾರದ ವಿರುದ್ಧ ಹೋರಾಟಕ್ಕೆ ತಯಾರಿ ನಡೆಸಲಿದ್ದಾರೆ. 29ಕ್ಕೆ ಕರ್ನಾಟಕ ಬಂದ್ ಬೆಂಬಲ ನೀಡಲು ಆಪ್ ಪಕ್ಷ ಮತ್ತು ರೈತ ಸಂಘಟನೆ ಮುಂದಾಗಿವೆ. ಸೆ‌. 29ಕ್ಕೆ ಸರ್ಕಾರಕ್ಕೆ ನಮ್ಮ ತಾಕತ್ತು ತೋರಿಸೋಣ ಎಂದು ನಿರ್ಧಾರ ಮಾಡಲಿದ್ದಾರೆ ಎನ್ನಲಾಗಿದೆ.
‘ಕೆನಡಾ ಭಯೋತ್ಪಾದಕರಿಗೆ ಸುರಕ್ಷಿತ ತಾಣ’: ಶ್ರೀಲಂಕಾ ವಿದೇಶಾಂಗ ಸಚಿವ ಅಲಿ ಸಬ್ರಿ

ನಮ್ಮ ನೋವು ಅರ್ಥ ಮಾಡಿಸಲು ಬೆಂಗಳೂರು ಬಂದ್; ದೇವೇಗೌಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
