ಬೆಂಗಳೂರು:ತಾಳಿ ಕಟ್ಟಿದ ಪತಿಯನ್ನೇ ಕೊಲೆ ಮಾಡಿದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಯಲಹಂಕ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಚಂದ್ರಶೇಖರ ಕೊಲೆಯಾದ ದುರ್ದೈವಿ. ಆರೋಪಿಗಳಾದ ಪತ್ನಿ ಶ್ವೇತಾ ಮತ್ತು ಪ್ರಿಯಕರ ಸುರೇಶ್​ ಅಲಿಯಾಸ್​ ಮೂಲಿಸೂರಿ ಎಂಬಾತನನ್ನು ಬಂಧಿಸಲಾಗಿದೆ.
ತಾನು ವಾಸಿಸುತ್ತಿದ್ದ ಮೂರನೇ ಮಹಡಿಯ ಮನೆಯ ಟೆರೆಸ್​ ಮೇಲೆ ತನ್ನ ಅಳಿಯ ಚಂದ್ರಶೇಖರ್​ನನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆಂದು ಯಲಹಂಕದ ಕೊಂಡಪ್ಪಲೇಔಟ್​ ನಿವಾಸಿ ಶಿವಪ್ಪ ಎಂಬುವರು ಯಲಹಂಕ ಪೊಲೀಸ್ ಠಾಣೆಯಲ್ಲಿ ಅ.21ರಂದು ದೂರು ದಾಖಲಿಸಿದ್ದರು.
ಈ ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರಿಗೆ ಈ ಕೃತ್ಯ ಕೊಲೆಯಾದ ಚಂದ್ರಶೇಖರ್​​ ಪತ್ನಿ ಶ್ವೇತಾಳಿಂದಲೇ ನಡೆದಿದೆ ಎಂಬುದು ಖಚಿತವಾಗಿದೆ. ಶ್ವೇತಾ (21) ಮತ್ತು ಮತ್ತೊಬ್ಬ ಆರೋಪಿ ಸುರೇಶ್​ (25) ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಚಂದ್ರಶೇಖರ್​ ಜೊತೆ ಶ್ವೇತಾಳ ಮದುವೆ ನಡೆಯುವುದಕ್ಕೂ ಮುಂಚಿನಿಂದಲೂ ಇಬ್ಬರ ನಡುವೆ ಪ್ರೀತಿಯಿತ್ತು. ಇಷ್ಟವಿಲ್ಲದಿದ್ದರೂ ತಾಯಿಯ ತಮ್ಮನ ಜೊತೆ ಶ್ವೇತಾ ಬಲವಂತವಾಗಿ ಮದುವೆ ಆಗಿದ್ದಳು. ಮದುವೆ ನಂತರವೂ ಶ್ವೇತಾ ಮತ್ತು ಸುರೇಶ್​ ನಡುವೆ ಪ್ರೀತಿ ಮುಂದುವರಿದು, ವಿವಾಹೇತರ ಸಂಬಂಧವನ್ನು ಹೊಂದಿದ್ದರು.
ಇಬ್ಬರ ಸಂಬಂಧಕ್ಕೆ ಗಂಡ ಅಡ್ಡಿಯಾಗಿದ್ದರಿಂದ ಆತನನ್ನು ಸಾಯಿಸಲು ಪ್ರಿಯಕರನ ಜೊತೆ ಸೇರಿ, ಶ್ವೇತಾ ಸಂಚು ರೂಪಿಸಿದ್ದಳು. ಬಳಿಕ ತಮ್ಮ ಪ್ಲಾನ್​ನಂತೆ ಕೊಲೆ ಮಾಡಿ, ಯಾರಿಗೂ ಗೊತ್ತಿಲ್ಲದಂತೆ ಶ್ವೇತಾ ಮತ್ತು ಸುರೇಶ್​ ನಾಟಕವಾಡಿದ್ದರು. ಇದೀಗ ಇಬ್ಬರ ಮುಖವಾಡ ಕಳಚಿಬಿದ್ದಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ.
ನವಾಜ್​ ಎಸೆದ ವೈಡ್​ ಬಾಲ್​ ಸ್ಪಿನ್​ ಆಗಿ ಪ್ಯಾಡ್​ಗೆ ಬಡಿದಿದ್ರೆ ಏನ್​ ಮಾಡ್ತಿದ್ರಿ? ಅಚ್ಚರಿಯ ಉತ್ತರ ಕೊಟ್ಟ ಅಶ್ವಿನ್

ಪರಸ್ತ್ರಿಗಾಗಿ ಪತ್ನಿಯ ಮೇಲೆಯೇ ಕಾರು ಹರಿಸಿದ ಬಾಲಿವುಡ್​ ನಿರ್ಮಾಪಕನ ವಿರುದ್ಧ ದೂರು ದಾಖಲು

ತೆಲಂಗಾಣದ TRS ಸರ್ಕಾರ ಉರುಳಿಸುವ ಯತ್ನ: ಶಾಸಕರಿಗೆ 100 ಕೋಟಿ ರೂ. ಆಫರ್​, ಸಿಕ್ಕಿಬಿದ್ದ ನಾಲ್ವರು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 5 =
Remember me
