ಬೆಂಗಳೂರು:ಪೆಟ್ರೋಲ್ ಬಂಕ್‌ಗಳಲ್ಲಿ ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಕೇರಳ ರಾಜ್ಯದ ಆರೋಪಿಯನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಅಖಿಲ್ ಜಾರ್ಜ್(26) ಬಂಧಿತ. ಆರೋಪಿಯಿಂದ 22,500 ರೂ. ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಾಲ್‌ಬಾಗ್ ಮುಖ್ಯರಸ್ತೆಯಲ್ಲಿರುವ ಎಸ್.ಎಂ. ಕಣ್ಣಪ್ಪ ಆಟೋ ಮೊಬೈಲ್ಸ್ ಎಂಬ ಇಂಡಿಯನ್ ಪೆಟ್ರೋಲ್ ಬಂಕ್‌ಗೆ ಆರೋಪಿ ಅಖಿಲ್ ಜಾರ್ಜ್ ನ.1ರಂದು ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿನಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಬಂದು 900 ರೂ. ಗಳಿಗೆ ಪೆಟ್ರೋಲ್ ಹಾಕಿಸಿಕೊಂಡಿದ್ದಾನೆ.

ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ 5೦೦ ರೂ. ಮುಖಬೆಲೆಯ ಒಂದು ನೋಟು ಹಾಗೂ 100 ರೂ. ಮುಖಬೆಲೆಯ ನಾಲ್ಕು ನೋಟುಗಳನ್ನು ನೀಡಿದ್ದಾನೆ. ಆತ ನೀಡಿದ್ದ ನೋಟುಗಳ ಪೈಕಿ 500 ರೂ. ಮುಖಬೆಲೆಯ ನೋಟು ತೆಳುವಾಗಿರುವಂತೆ ಕಂಡು ಸಿಬ್ಬಂದಿಗೆ ಅನುಮಾನ ಬಂದಿದೆ. ತಕ್ಷಣ ಅವರ ಬಳಿ ಇದ್ದ 500 ರೂ. ಮುಖಬೆಲೆಯ ಅಸಲಿ ನೋಟನ್ನು ತೆಗೆದು ಆ ನೋಟಿಗೆ ಹೋಲಿಕೆ ಮಾಡಿ ನೋಡಿದಾಗ ವ್ಯತ್ಯಾಸ ಕಂಡು ಬಂದಿದೆ. ತಕ್ಷಣ ಸಿಬ್ಬಂದಿ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಕಾರು ಸಮೇತ ನೋಟಿನೊಂದಿಗೆ ಠಾಣೆಗೆ ಕರೆದೊಯ್ದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 22,500 ರೂ. ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, ಈ ಹಣವನ್ನು ಯಾವ ವ್ಯಕ್ತಿಯಿಂದ ಪಡೆದಿದ್ದಾನೆ ಎಂದು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹುತ್ರಿದುರ್ಗ ಬೆಟ್ಟದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಯುವಕ-ಯುವತಿಯ ಬಟ್ಟೆ ಬಿಚ್ಚಿ ಕಿರುಕುಳ, ಚಾರಣಿಗರಿಗೆ ಬೆದರಿಕೆ ಹಾಕಿ ದರೋಡೆ…

ಬೆಂಗ್ಳೂರಲ್ಲಿ ವಿಕೃತ ಮನಸ್ಥಿತಿಯ ವೈದ್ಯ ಅರೆಸ್ಟ್​! ಚಿಕಿತ್ಸೆ ನೀಡುವ ನೆಪದಲ್ಲಿ ಮಹಿಳೆಯರ ಖಾಸಗಿ ಅಂಗಗಳ ವಿಡಿಯೋ ಚಿತ್ರೀಕರಿಸುತ್ತಿದ್ದ…

ಗಂಡನ ಮನೆಗೆ ಹೋಗವ್ವಾ… ಎಂದು ತಾಯಿ ಬುದ್ಧಿಮಾತು ಹೇಳಿದ್ದೇ ತಪ್ಪಾ? ಮನನೊಂದು ಸಾವಿನ ಮನೆಯ ಕದ ತಟ್ಟಿದ ಮಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + two =
Remember me
