ಬೆಂಗಳೂರು:ನಿನ್ನೆ (ಮೇ. 3) ರಾತ್ರಿ ಸುರಿದ ಭಾರೀ ಮಳೆಗೆ ಕೆರೆಯಂತಾಗಿದ್ದ ಹೊಸೂರು ಹೆದ್ದಾರಿಯಲ್ಲಿ ಮಳೆ ನೀರನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸಂಚಾರಿ ಪೊಲೀಸರಿಗೆ ಜನಸಾಮಾನ್ಯರು ಬಹುಪರಾಕ್ ಹೇಳಿದ್ದಾರೆ. ​

ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ನಗರದ ಹಲವೆಡೆ ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಹೊಸೂರು ಹೆದ್ದಾರಿಗೆ ಮಳೆ ನೀರು ನುಗ್ಗಿ ವಾಹನ ಸವಾರರ ಪರದಾಡುವಂತಾಯಿತು. ಹೊಸೂರು ರಸ್ತೆ ಜಲಾವೃತಗೊಂಡಿದ್ದರಿಂದ ಹತ್ತಾರು ಕಿ.ಮೀ ದೂರ ಟ್ರಾಫಿಕ್ ಜಾಮ್​ ಆಗಿ, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಎಲೆಕ್ಟ್ರಾನಿಕ್ ಸಿಟಿಯಿಂದ ಬೊಮ್ಮಸಂದ್ರದವರೆಗೆ ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದರು. ಎಲೆಕ್ಟ್ರಾನಿಕ್ ಸಿಟಿ ಬಳಿಯ ವೀರಸಂದ್ರ ಸಿಗ್ನಲ್ ಬಳಿ ಜಲಾವೃತಗೊಂಡಿತ್ತು. ಪ್ರತಿ ಬಾರಿ ಮಳೆಯಾದಾಗಲೆಲ್ಲ ವೀರಸಂದ್ರ ಸಿಗ್ನಲ್ ಬಳಿ ಹೆದ್ದಾರಿ ಜಲಾವೃತಗೊಳ್ಳುತ್ತದೆ. ಆದರೂ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ:ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ ಪಕ್ಷೇತರ ಅಭ್ಯರ್ಥಿ!

ಹೆದ್ದಾರಿಯಲ್ಲಿ ನೀರು ತುಂಬಿ ಕೆಸರು ಗದ್ದೆಯಂತಾಗಿದ್ದ ರಸ್ತೆಯಲ್ಲಿ ಮಳೆ ನೀರನ್ನು ತೆರವು ಮಾಡುವ ಮೂಲಕ ಟ್ರಾಫಿಕ್ ಪೋಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ರಸ್ತೆಯಲ್ಲಿ ಪೊಲೀಸರು ಕೆಲಸ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಗುರಿ ಇರಲಿ… ರಾಜ್ಯ ಚುನಾವಣೆಯನ್ನು ಮಹಾಭಾರತಕ್ಕೆ ಹೋಲಿಸಿದ ಪ್ರಿಯಾಂಕಾ ಗಾಂಧಿ

ಚಿತ್ತಾಪುರ ತಹಸೀಲ್ದಾರ್ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟ ಪೊಲೀಸ್​ ಕಾನ್ಸ್​ಟೆಬಲ್​

Bajrang Dal Ban: ಕೆ. ಸುಧಾಕರ್ ನೇತೃತ್ವದಲ್ಲಿ ಬಜರಂಗದಳ, ಹಿಂದೂಪರ ಸಂಘಟನೆಗಳ ಪ್ರತಿಭಟನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 6 =
Remember me
