ಬೆಂಗಳೂರು:ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ‘ ಗಜಗರ್ಭ ಪ್ರಸವ’ ದಂತೆ ಆಡಳಿತ ಬಿಜೆಪಿ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ.
ಮಾಜಿ ಡಿಸಿಎಂ ಲಕ್ಷ್ಮಣ ಸವದಿ ( ಲಿಂಗಾಯತ-ಗಾಣಿಗ), ಪಕ್ಷದ ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್ ( ನೇಕಾರ- ಇತರ ಹಿಂದುಳಿದ ವರ್ಗ), ಪಕ್ಷದ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ( ಪರಿಶಿಷ್ಟ ಜಾತಿ-ಬಲ) ಹಾಗೂ ಹೇಮಲತಾ ನಾಯಕ್ ಹೆಸರುಗಳು ಅಂತಿಮವಾಗಿವೆ.
ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಸವರಾಜ ಹೊರಟ್ಟಿ ಹೆಸರು ಪ್ರಕಟಿಸಲಾಗಿದೆ
ಈ ಮುಂಚೆಯೇ ಹೊರ ಬಿದ್ದ ಸುಳಿವಿನಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ, ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರು ಕೈಬಿಟ್ಟಿರುವುದು ದೃಢಪಟ್ಟಿದ್ದು, ಪಕ್ಷದೊಳಗೆ ಕುದಿಮೌನ ಆವರಿಸಿದೆ.
ದೊಡ್ಡ ಸಂಖ್ಯೆಯಲ್ಲಿ ಆಕಾಂಕ್ಷಿಗಳು, ಜಾತಿ- ವರ್ಗಗಳ ಪ್ರಾತಿನಿಧ್ಯ ನಿಭಾಯಿಸಬೇಕಾದ ಒತ್ತಡಕ್ಕೆ ಸಿಲುಕಿದ್ದ ಪಕ್ಷದ ವರಿಷ್ಠರು ಸಾಕಷ್ಟು ಕಸರತ್ತು ನಡೆಸಿ, ಸೋಮವಾರ ತಡರಾತ್ರಿ ಅಂತಿಮಗೊಳಿಸಿದೆ. ಆದರೂ ನಿರ್ಣಯದ ವ್ಯತಿರಿಕ್ತ ಪರಿಣಾಮಗಳನ್ನು ತಡೆಯಲೆಂದು ನಾಮಪತ್ರ ಸಲ್ಲಿಕೆ ಕೊನೇ ದಿನದವರೆಗೂ ಗೌಪ್ಯತೆ ಕಾಯ್ದುಕೊಂಡಿತು ಎಂದು ಮೂಲಗಳು ತಿಳಿಸಿವೆ.

ಬಿ.ವೈ. ವಿಜಯೇಂದ್ರಗೆ ಬಿಗ್​ ಶಾಕ್​ ಕೊಟ್ಟ ಬಿಜೆಪಿ ಹೈಕಮಾಂಡ್​

ಮಹಿಳೆಯರ ಬದಲು ಪುನಃ ಅಲ್ಪಸಂಖ್ಯಾತರು: ಕಾಂಗ್ರೆಸ್​ನಲ್ಲಿ ಶುರುವಾಯ್ತು ಅಸಮಾಧಾನದ ಹೊಗೆ

ಗಂಭೀರ ಆರೋಪ ಮಾಡಿ ಗಂಡ, ಮಾವನ ವಿರುದ್ಧವೇ ಪೊಲೀಸ್​ ಠಾಣೆಯ ಮೆಟ್ಟಿಲೇರಿದ ನಟಿ ಚೈತ್ರಾ ಹಳ್ಳಿಕೇರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 8 =
Remember me
