ಆನೇಕಲ್:ಆಕೆ ಮದುವೆಯಾಗಿದ್ದರೂ ಗಂಡನಿಂದ ದೂರವಾಗಿ ಇನ್ನೊಬ್ಬನ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಸಂಬಂಧ ಅದೆಷ್ಟೇ ಗಟ್ಟಿಯಾಗಿದ್ರೂ ಅನೈತಿಕವಾಗಿದ್ರೆ,‌ ಅಂತ್ಯವಾಗೋದು ದುರಂತದಲ್ಲೇ ಎಂಬುದಕ್ಕೆ ಈ ಘಟನೆ ತಾಜಾ ಉದಾಹರಣೆಯಾಗಿದೆ.
ಆನೇಕಲ್ ತಾಲೂಕಿನ ಹೆಬ್ಬಗೋಡಿ ವ್ಯಾಪ್ತಿಯ ಸಿಂಗೇನ ಅಗ್ರಹಾರ ನಿರ್ಜನ ಪ್ರದೇಶದಲ್ಲಿ ಮಹಿಳೆಯ ಸುಟ್ಟ ದೇಹವೊಂದು ಕೆಲ ದಿನಗಳ ಹಿಂದೆ ಪತ್ತೆಯಾಗಿತ್ತು.‌ ಮಹಿಳೆಯೊಬ್ಬಳ ಹುಡುಕಾಟದಲ್ಲಿದ್ದ ಹೆಬ್ಬಗೋಡಿ ಪೊಲೀಸರು ಈ ದೇಹ ಅವಳದ್ದೇನಾ ಅಂತ ಅವಳ ಸಂಬಂಧಿಕರಿಗೆ ಕರೆದುಕೊಂಡು ಬಂದಾಗ ಪೊಲೀಸರಿಗೆ ಇದ್ದ ಶಂಕೆ ನಿಜವಾಯಿತು. ಸಿಂಗೇನ ಅಗ್ರಹಾರದ ನಿರ್ಜನ ಪ್ರದೇಶದಲ್ಲಿ ಸುಟ್ಟಿರುವ ಸ್ಥಿತಿಯಲ್ಲಿ ಬಿದ್ದಿದ್ದ ದೇಹದ ತುಂಡುಗಳು, ತಲೆ ಬುರಡೆ ಹಾಗೂ ಅಸ್ಥಿ ಪಂಜಿರವು ನಡೆದಿದ್ದ ಘೋರ ಕತೆಯನ್ನು ಹೇಳುತ್ತಿತ್ತು.
ಇದನ್ನೂ ಓದಿ:ಎಸ್​.ಎಲ್​.ಭೈರಪ್ಪ, ಸುಧಾಮೂರ್ತಿ ಅವರಿಂದ ಪದ್ಮಭೂಷಣ ಪುರಸ್ಕಾರ ಸ್ವೀಕಾರ: ರಾಷ್ಟ್ರಪತಿಯಿಂದ ಪ್ರಶಸ್ತಿ ಪ್ರದಾನ
ಕೆಲ ದಿನಗಳ ಹಿಂದೆ ಅಂದರೆ, ಮಾ. 29ರಂದು 32 ವರ್ಷದ ಮಂಜುಳ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿತ್ತು. ನಿರ್ಜನ ಪ್ರದೇಶದಲ್ಲಿ ಸಿಕ್ಕಿರುವ ದೇಹ ಗುರುತಿಸುವುದಕ್ಕೆ ಮಂಜುಳ ತಂಗಿ ಲಕ್ಷ್ಮಿಯನ್ನು ಪೊಲೀಸರು ಕರೆದು ತಂದಾಗ, ಕಿವಿ ಓಲೆ, ಚಪ್ಪಲಿ, ಕೊರಳಲ್ಲಿದ್ದ ಚೈನ್ ನೋಡಿ, ಹೌದು ಇದು ಮಂಜುಳದ್ದೇ ಮೃತದೇಹ ಎಂದು ತಂಗಿ ಹೇಳಿದ್ದಳು. 29ರಂದು ನಾರಾಯಣ ಜತೆ ಹೋಗಿದ್ದ ಅಕ್ಕ ಮತ್ತೆ ವಾಪಾಸ್ ಬಂದಿರಲಿಲ್ಲ. ಹಾಗಾಗಿ ನಾರಾಯಣ ಮೇಲೆ ಅನುಮಾನ ಇದೆ ಎಂದು ತಂಗಿ ಪೊಲೀಸರಿಗೆ ದೂರು ನೀಡಿದ್ದರು.
ಸಂಪಿಗೆನಗರ ನಿವಾಸಿ ನಾರಾಯಣಪ್ಪ ಹಾಗೂ ಮಂಜುಳ ನಡುವೆ ಹತ್ತು ವರ್ಷಗಳ ಹಿಂದೆ ಸ್ನೇಹ ಬೆಳೆದಿತ್ತು. ಮದುವೆ ಆದರೂ ಗಂಡನನ್ನು ಬಿಟ್ಟಿದ್ದ ಮಂಜುಳ ಎಲ್ಲರ ಮುಂದೆಯೇ ನಾರಾಯಣಪ್ಪನ ಜತೆ ಸಲುಗೆ ಬೆಳಸಿದ್ದಳು. ಹಲವು ಬಾರಿ ಇವರಿಬ್ಬರ ಮಧ್ಯೆ ಕಿರಿಕ್ ಆದಾಗ ಠಾಣೆಯಲ್ಲಿ ಅವಳನ್ನು ಮದುವೆ ಆಗಿದ್ದೇನೆ ಅಂತಲೂ ನಾರಾಯಣಪ್ಪ ಹೇಳಿದ್ದನಂತೆ. ಕೆಲ ದಿನಗಳ ಹಿಂದೆ ದುಡ್ಡು ಕೊಡು ಅಂತ ಕಿರಿಕ್ ತೆಗೆದಿದ್ದ ನಾರಾಯಣ ಮಂಜುಳಗೆ ಕೊಲೆ ಬೆದರಿಕೆ ಹಾಕಿದ್ದ. ಅಲ್ಲದೇ ನಿನ್ನನ್ನು ಸುಟ್ಟು ಹಾಕುತ್ತೇನೆ ಅಂತ ಸಂಬಂಧಿಕರ ಮಧ್ಯೆಯೇ ಹೇಳಿದ್ದನಂತೆ. 29ರಂದು ಬೆಳಗ್ಗೆ ಆ್ಯಕ್ಟೀವಾದಲ್ಲಿ ಮಂಜುಳಾ ಕರೆದುಕೊಂಡು ಹೋಗುವ ನಾರಯಣ, ಕೆಲ ಗಂಟೆಗಳ ಬಳಿಕ ತಾನೊಬ್ಬನೇ ಬರುತ್ತಾನೆ.
ಇದನ್ನೂ ಓದಿ:ಒಕ್ಕೂಟ ವ್ಯವಸ್ಥೆ ಗೌರವಿಸಿ: ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಯೋಜನೆ ವಿವಾದ
ಸದ್ಯಕ್ಕೆ ಪ್ರಕರಣ ದಾಖಲು ಮಾಡಿಕೊಂಡಿರುವ ಹೆಬ್ಬಗೋಡಿ ಪೊಲೀಸರು ಹಲವು ಆಯಾಮದಲ್ಲಿ ಪ್ರಕರಣದ ತನಿಖೆ ಮುಂದುವರೆಸಿದ್ದು, ನಾರಾಯಣನ ಬಂಧನದ ಬಳಿಕ ಇನ್ನಷ್ಟು ಮಾಹಿತಿ ಹೊರಬರಲಿದೆ.(ದಿಗ್ವಿಜಯ ನ್ಯೂಸ್​)
ಬೇಕಿರುವುದು ಬರೀ ಪದವಿಯಲ್ಲ ಪ್ರಜ್ಞಾವಂತಿಕೆ, ಪ್ರಬುದ್ಧತೆ

ಸಿದ್ಧವಾದ ಆಹಾರ ಸೇವನೆಗೂ ಕಾಲಮಿತಿ!

ಬೆಳವಣಿಗೆಯ ಪರ್ವಕಾಲ ಮೌಲ್ಯಾಧಾರಿತ ಮಾದರಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 3 =
Remember me
