ಬೀದರ್: ದೆಹಲಿಯ ನಿಜಾಮುದ್ದೀನ್​ ಪ್ರಾರ್ಥನಾ ಮಂದಿರಕ್ಕೆ ಬೀದರ್​ನಿಂದ ತೆರಳಿದ್ದ 26 ಮಂದಿಯನ್ನು ಕ್ವಾರಂಟೈನ್​ನಲ್ಲಿ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಚ್​.ಆರ್​.ಮಹಾದೇವ ಹೇಳಿದರು.
ಪ್ರಾರ್ಥನಾ ಸಭೆಗೆ ಹಾಜರಾಗಿದ್ದವರಲ್ಲಿ ಕರೊನಾ ವೈರಸ್​ ಸೋಂಕು ಲಕ್ಷಣಗಳು ಗೋಚರಿಸಿಲ್ಲ. ಆದರೂ ಅವರನ್ನು ಪ್ರತ್ಯೇಕವಾಗಿ ಇರಿಸಿ ನಿಗಾ ವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
26 ಮಂದಿಯ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸೋಂಕಿನ ಬಗ್ಗೆ ಮಾಹಿತಿ ಲಭ್ಯವಾಗಲಿದೆ. ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದ ಮಜರುದ್ದೀನ್​ ಎಂಬ ವ್ಯಕ್ತಿಯನ್ನು 2 ಬಾರಿಗೆ ಪರೀಕ್ಷೆಗೆ ಒಳಪಡಿಸಲಾಗಿದೆ. 2 ಬಾರಿಯೂ ವರದಿಯಲ್ಲಿ ನೆಗೆಟಿವ್​ ಬಂದಿದೆ. ಜಿಲ್ಲೆಯ ಜನರು ಭೀತಿಪಡುವುದು ಬೇಡ. ಮನೆಯಿಂದ ಯಾರು ಹೊರಗೆ ಬರಬೇಡಿ ಎಂದು ಅವರು ಹೇಳಿದರು.
ದೆಹಲಿಯ ನಿಜಾಮುದ್ದೀನ್​ ಪ್ರಾರ್ಥನಾ ಮಂದಿರದಲ್ಲಿ ಮಾ.1 ರಿಂದ 15ರವರೆಗೆ ನಡೆದ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡಿದ್ದ 6 ಮಂದಿ ತೆಲಂಗಾಣದಲ್ಲಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ನಿಗಾ ವಹಿಸಲಾಗಿದೆ. (ದಿಗ್ವಿಜಯ ನ್ಯೂಸ್​)
ದೆಹಲಿಯ ನಿಜಾಮುದ್ದೀನ್​ ಪ್ರಾರ್ಥನಾ ಮಂದಿರದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 6 ಮಂದಿ ಕರೊನಾ ವೈರಸ್​ನಿಂದ ಸಾವು; ಅಪಾಯದಲ್ಲಿ 2000 ಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
