ತುಮಕೂರು:ಕರೊನಾ ಲಾಕ್​ಡೌನ್​ ಸಂದರ್ಭದಲ್ಲಿ ರಸ್ತೆಗಿಳಿದ ಸಾರ್ವಜನಿಕರ ಮೇಲೆ ದಾಖಲಾದ ದೂರುಗಳನ್ನು ವಾಪಸ್​ ಪಡೆಯಲು ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಪೊಲೀಸ್​ ಠಾಣೆ ಕಟ್ಟಡ ಉದ್ಘಾಟಿಸಲು ಬುಧವಾರ ಆಗಮಿಸಿದ್ದ ಮಾಧುಸ್ವಾಮಿ, ಈ ವೇಳೆ ಮಾತನಾಡುತ್ತಾ ಕರೊನಾ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿರುವ ಸಾವಿರಾರು ಪ್ರಕರಣಗಳು ನ್ಯಾಯಾಲಯದಲ್ಲಿ ಒತ್ತಡಕ್ಕೆ ಕಾರಣವಾಗಿವೆ ಎಂದರು.
ಕರೊನಾ ನಿಬಂಧಗಳನ್ನು ಉಲ್ಲಂಘನೆ ಮಾಡಿದ ಸಾರ್ವಜನಿಕರ ವಿರುದ್ಧ ದಾಖಲಿಸಲಾಗಿದ್ದ ಮೊಕದ್ದಮೆಗಳನ್ನು ಹಿಂತೆಗೆಯುವ ಅಗತ್ಯವಿದೆ. ಇದರಿಂದ ಪೊಲೀಸ್​ ಇಲಾಖೆ, ಸಾರ್ವಜನಿಕರೂ ಮತ್ತು ನ್ಯಾಯಾಲಯಗಳ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ದೂರುಗಳನ್ನು ವಾಪಸ್​ ಪಡೆಯಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮಾಧುಸ್ವಾಮಿ ತಿಳಿಸಿದರು.
ಚಿನ್ನದ ವ್ಯಾಮೋಹಕ್ಕೆ ಭೂಮಿ ಹೋಯ್ತು! 20 ಲಕ್ಷ ರೂಪಾಯಿಗೆ 8 ಕೆಜಿ ಚಿನ್ನದ ಆಮಿಷ… ಸಂಕಷ್ಟದಲ್ಲಿ ದಂಪತಿ…

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ: ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 7 =
Remember me
