ಶಿವಮೊಗ್ಗ:ಸಾಗರದಲ್ಲಿ ಭಜರಂಗದಳದ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಶಿವಮೊಗ್ಗದ ಎಸ್​ಪಿ ಜಿ.ಕೆ.ಮಿಥುನ್ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಸಾಗರದಲ್ಲಿ ನಡೆದಿರುವ ಭಜರಂಗದಳದ ಕಾರ್ಯಕರ್ತನ ಮೇಲೆ ದಾಳಿ ವೈಯಕ್ತಿಕವಾದುದು. ಬಜರಂಗದಳ ಕಾರ್ಯಕರ್ತ ಸುನಿಲ್ ಕಳೆದ ನಾಲ್ಕೈದು ತಿಂಗಳಿನಿಂದ ಸಮೀರ್ ಸಹೋದರಿಗೆ ಚುಡಾಯಿಸುತ್ತಿದ್ದ. ಈ ಸಂಬಂಧ ಸಮೀರ್, ಸುನಿಲ್​ಗೆ ವಾರ್ನ್ ಮಾಡಿದ್ದ.
ಭಜರಂಗದಳ ಕಾರ್ಯಕರ್ತ ಸುನಿಲ್ ಈ ಹಿಂದೆ ಸಮೀರ್ ತಂಗಿಯ ಫೋನ್​ ನಂಬರ್ ಕೇಳಿದ್ದ. ಇದು ಸಮೀರ್ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ 2-3 ಬಾರಿ ಸಮೀರ್ ಎಚ್ಚರಿಕೆಯನ್ನೂ ನೀಡಿದ್ದ. ದಾಳಿ ನಡೆದ ದಿನವೂ ಸುನಿಲ್ ಮತ್ತು ಸಮೀರ್ ಬಯ್ದಾಡಿಕೊಂಡಿದ್ದಾರೆ.
ಸಮೀರ್ ಮೇಕೆಗೆ ಹುಲ್ಲು ತರಲು ಹೊರಟಿದ್ದ. ಹೀಗಾಗಿ ಮಚ್ಚು ಇಟ್ಟುಕೊಂಡಿದ್ದ. ಇದೇ ಮಚ್ಚಿನಿಂದ ಸುನಿಲ್ ಮೇಲೆ ಹಲ್ಲೆಯಾಗಿದೆ ಎಂದು ಜಿಲ್ಲಾ ಎಸ್​ಪಿ ಜಿ.ಕೆ.ಮಿಥುನ್ ಮಾಹಿತಿ ನೀಡಿದ್ದಾರೆ.
ದಾಳಿಯ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬೇರೆ ಯಾರಾದರೂ ಪ್ರಕರಣದಲ್ಲಿ ಇದ್ದಾರೆಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸುನಿಲ್, ಸಮೀರ್ ಸಹೋದರಿಗೆ ಚುಡಾಯಿಸಿರುವ ಕಾಲ್ ರೆಕಾರ್ಡ್ಸ್ ಲಭ್ಯವಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಸ್​​ಪಿ ಜಿ.ಕೆ.ಮಿಥುನ್ ಹೇಳಿದ್ದಾರೆ.
ಸಾಗರ ನಗರದ ಬಿ.ಎಚ್​.ರಸ್ತೆಯ ಬಸ್ ನಿಲ್ದಾಣ ಬಳಿ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಸಮೀರ್ ಮಚ್ಚು ಬೀಸಿದ್ದು, ಅದೃಷ್ಟವಶಾತ್​ ಕೂದಲೆಳೆ ಅಂತರದಲ್ಲಿ ದಾಳಿಯಿಂದ ಸುನೀಲ್ ಪಾರಾಗಿದ್ದ. ದಾಳಿಗೆ ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 3 =
Remember me
