ರಾಮನಗರ:ಕೋವಿಡ್​ ವಾರ್ಡ್​ನಲ್ಲಿ ಮೂಲ ಸೌಕರ್ಯ ಕೊರತೆ ಕಾಡುತ್ತಿದೆ, ಕೋವಿಡ್​ ಆಸ್ಪತ್ರೆಯಲ್ಲಿ ಸೋಂಕಿತರಿಗೆ ‘ನರಕ’ ದರ್ಶನವಾಗುತ್ತಿದ್ದು, ಕುಡಿಯೋಕೆ ನೀರಿಲ್ಲದೆ ಕೆಲವರು ಶೌಚಗೃಹದ ನೀರನ್ನೇ ಕುಡಿದಿದ್ದಾರೆ, ಸೂಕ್ತ ಊಟ-ತಿಂಡಿಯ ವ್ಯವಸ್ಥೆಯೂ ಇರಲಿಲ್ಲ. ರೋಗದಿಂದ ಬಳಲುತ್ತಿರುವವರಿಗೆ ಹಸಿವಿನ ಶಿಕ್ಷೆ ಕಾಡಿತ್ತು, ಇಲ್ಲಿನ ಕರೊನಾ ವಾರಿಯರ್ಸ್ ಪೊಲೀಸ್ ಸಿಬ್ಬಂದಿಯ ಪರಿಸ್ಥಿತಿಯೂ ಭಿನ್ನವಾಗಿರಲಿಲ್ಲ… ಇಂತಹ ಹತ್ತಾರು ಸುದ್ದಿಗಳು ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿತ್ತು. ಕೆಲ ಆಸ್ಪತ್ರೆಗಳಲ್ಲಿನ ಕರ್ಮಕಾಂಡದ ಬಗ್ಗೆ ಕರೊನಾ ಸೋಂಕಿತ ರೋಗಿಗಳೇ ವಿಡಿಯೋ ಮೂಲಕ ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು.
ಈ ನಡುವೆ ಕೋವಿಡ್ ಆಸ್ಪತ್ರೆಯಲ್ಲಿ ಮಾನವೀಯತೆ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಸಾಕ್ಷಿಯಂತಿದೆ ರಾಮನಗರ ಜಿಲ್ಲಾಸ್ಪತ್ರೆ. ಆರೋಗ್ಯ ಇಲಾಖೆಯು ಸೋಂಕಿತರೊಬ್ಬರ ಹುಟ್ಟುಹಬ್ಬವನ್ನು‌ ಕೋವಿಡ್ ವಾರ್ಡಿನಲ್ಲೇ ಆಚರಿಸುವ ಮೂಲಕ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿದ ಅಪರೂಪದ ಘಟನೆಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿರಿಕರೊನಾ ಸೋಂಕು ತಗುಲಿದ್ದ ಸುಮಲತಾ ಅಂಬರೀಶ್, ರಾಕ್​ಲೈನ್​ ವೆಂಕಟೇಶ್​ ಚೇತರಿಕೆ
ನರ್ಸ್ ಆಗಿರುವ ವ್ಯಕ್ತಿಯೊಬ್ಬರಿಗೆ ಕಳೆದ ವಾರ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ರಾಮನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ದಾಖಲಾಗುವ ಮುನ್ನ ಈ ನರ್ಸ್​ ಆರೋಗ್ಯ ಇಲಾಖೆಯೊಂದಿಗೆ ಹಗಲಿರುಳು ದುಡಿದಿದ್ದರು. ನಿನ್ನೆ(ಬುಧವಾರ) ಇವರ ಜನ್ಮದಿನ. ಹಾಗಾಗಿ ಅಂದು ಸಂಜೆ ಕೋವಿಡ್​ ವಾರ್ಡ್​ಗೆ ಬಂದ ಆರೋಗ್ಯ ಇಲಾಖೆ ಸಿಬ್ಬಂದಿ ನರ್ಸ್​ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದ್ದಾರೆ. ಇನ್ನುಳಿದ ಕೋವಿಡ್ ಸೋಂಕಿತರಿಗೂ ಆತ್ಮಸ್ಥೈರ್ಯ ತುಂಬಿದ್ದಾರೆ. ಪಿಪಿಇ ಕಿಟ್ ಧರಿಸಿ ಬಂದಿದ್ದ ಡಿಎಚ್ಒ ಮತ್ತು ಇತರ ಸಿಬ್ಬಂದಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದು ವಿಶೇಷ.
ಕೋವಿಡ್ ಆಸ್ಪತ್ರೆಗೆ ಹೋದ ದಿನವೇ ಧ್ರುವ ಸರ್ಜಾ, ಪತ್ನಿ ಪ್ರೇರಣಾ ಡಿಸ್ಚಾರ್ಜ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + two =
Remember me
