ಬೆಂಗಳೂರು:ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ನನಗೆ ಯಾವುದೇ ರೀತಿಯ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು.
ಇದನ್ನೂ ಓದಿ:ಸೂರಜ್‌ ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧವೇ ಎಫ್‌ಐಆರ್!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಸುದ್ದಿ ವಾಹಿನಿಯಲ್ಲಿ ಪ್ರಸಾರವಾಗಿರುವುದನ್ನು ಗಮನಿಸಿದ್ದೇನೆ. ಈವರೆಗೆ ಯಾವುದೇ ರೀತಿಯ ಅಧಿಕೃತ ದೂರು ದಾಖಲಾಗಿಲ್ಲ. ನನಗೆ ಯಾವುದೇ ಪತ್ರ ಬಂದಿಲ್ಲ. ಶಿವಕುಮಾರ್ ಎನ್ನುವರು ದೂರು ಕೊಟ್ಟಿದ್ದಾರೆ ಎಂದರು.

ಪತ್ರ ಬರೆಯುವುದಕ್ಕು, ದೂರು ಕೊಡುವುದಕ್ಕು ಸಾಕಷ್ಟು ವ್ಯತ್ಯಾಸವಿದೆ. ನೈಜತೆಯನ್ನು ಪರಿಶೀಲಿಸಬೇಕಾಗುತ್ತದೆ. ಪೊಲೀಸ್ ಠಾಣೆಗೆ ದೂರು ಕೊಟ್ಟರೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬಹುದು. ಈ ಕುರಿತು ಪ್ರಸಾರ ಮಾಡಿದ ಸುದ್ದಿ ಮಾಧ್ಯಮದವರನ್ನು ಕರೆಸಿ, ಎಲ್ಲಿ‌ ಮಾಹಿತಿ ಸಿಕ್ಕಿದೆ ಎಂಬ ಮಾಹಿತಿ ಪಡೆಯಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರಕ್ಕೆ ಹಣಕಾಸು ವ್ಯವಸ್ಥೆಯನ್ನು ಸರಿಯಾಗಿ ನೋಡಿಕೊಳ್ಳಲು ಆಗುತ್ತಿಲ್ಲ. ಏಜೆನ್ಸಿಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ತಮ್ಮ ಅಧಿಕಾರವಧಿಯಲ್ಲಿ ರಾಜ್ಯದ ಹಣಕಾಸಿನ ಸ್ಥಿತಿ ಯಾವ ರೀತಿ ಇಟ್ಟಿದ್ದರು‌ ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ಸಾಲ ಎಷ್ಟು ಮಾಡಿದ್ದರು, ಏನೆಲ್ಲ ದಿವಾಳಿ ಎಬ್ಬಿಸಿ ಹೋಗಿದ್ದರು ಅಂತ ಗೊತ್ತಿದೆ‌ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ಗ್ಯಾರಂಟಿ ಯೋಜನೆಗಳು ಕೊಟ್ಟಿರುವುದಕ್ಕೆ ಹೊಟ್ಟೆಹುರಿ:ರಾಜ್ಯದ ಅಭಿವೃದ್ಧಿ ಮತ್ತು ಬೆಳವಣಿಗೆಗೆ ನಾವು ಬದ್ಧವಾಗಿದ್ದೇವೆ. ಒಳ್ಳೆಯ ಆಡಳಿತ ನೀಡುತ್ತೇವೆ ಎಂದು ಚುನಾವಣಾ ಪೂರ್ವದಲ್ಲಿ ಜನರಿಗೆ ಭರವಸೆ ನೀಡಿದ್ದೇವೆ. ಗ್ಯಾರಂಟಿ ಕಾರ್ಯಕ್ರಮ ಕೊಟ್ಟಿರುವುದೇ ಇವರಿಗೆ ಹೊಟ್ಟೆಹುರಿಯಾಗಿದೆ. ಬಿಜೆಪಿಯವರು ಯಾರು ಗ್ಯಾರಂಟಿ ಹಣ ತೆಗೆದುಕೊಳ್ಳುತ್ತಿಲ್ಲವೇ? ನಾವು ಪಕ್ಷ ಇಟ್ಟುಕೊಂಡು ಕೆಲಸ ಮಾಡಿದ್ದೇವೆಯೇ? ಕಾಂಗ್ರೆಸ್ ಪಕ್ಷದವರಿಗೆ ಮಾತ್ರ ಯೋಜನೆ ಕೊಟ್ಟಿದ್ದೇವೆಯೇ? ಎಂದು ಪ್ರಶ್ನಿಸಿದರು.
ಎಲ್ಲಿಂದ ಔಷಧಿ ತರಲು ಸಾಧ್ಯ:ರಾಜ್ಯದ ಆರ್ಥಿಕ ಸ್ಥಿತಿಯನ್ನು ಯಾವ ರೀತಿಯಾಗಿ ಸದೃಢ ಮಾಡಿಕೊಳ್ಳಬೇಕು. ಹೇಗೆ ಸರಿಪಡಿಸಿಕೊಳ್ಳಬೇಕು ಎಂದು ಸಲಹೆ ತೆಗೆದುಕೊಳ್ಳುವುದು ಇವರಿಗೆ ಹೊಟ್ಟೆಹುರಿಯಾದರೆ ಉತ್ತರ ಕೊಡಲು ಆಗುವುದಿಲ್ಲ. ಇದಕ್ಕೆ ಎಲ್ಲಿಂದ ಔಷಧಿ ತರಲು ಸಾಧ್ಯ. ಹೆಚ್ಚು ಹಣ ಹೊಂದಿಸಿಕೊಂಡು, ಇದರ ಮೂಲಕ ರಾಜ್ಯದಲ್ಲಿ ನೀರಾವರಿ ಯೋಜನೆ, ರಸ್ತೆ ಅಭಿವೃದ್ಧಿ ಮುಂತಾದ ಕೆಲಸಗಳಾಗಬೇಕಿದೆ ಎಂದರು ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ: 40 ಲಕ್ಷ ರೂಪಾಯಿ ಕೈ ಸಾಲ ಕೊಟ್ಟ ಮೋಹನ್‌ರಾಜ್‌ ನಾಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 1 =
Remember me
