ಬೆಂಗಳೂರು:ರಾಜ್ಯದ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದ ಅಭ್ಯರ್ಥಿಗಳ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ. ಮೂರ್ನಾಲ್ಕು ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಇದನ್ನೂ ಓದಿ:ಬಿಜೆಪಿ ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ: ಡಿಸಿಎಂ
ನಗರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಅಭ್ಯರ್ಥಿಗಳ ವಿಚಾರ ತಾರ್ಕಿಕ ಅಂತ್ಯಕ್ಕೆ ತಲುಪಿದೆ. ಮೂರ್ನಾಲ್ಕು ದಿನಗಳಲ್ಲಿ ಎಲ್ಲ ವಿವರ ಲಭಿಸಲಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಬಹುತೇಕ 2 ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದರು.
ಎಷ್ಟು ಕ್ಷೇತ್ರ ಗೆಲ್ತೀವಿ ಎಂಬ ಪ್ರಶ್ನೆ ಅಲ್ಲ. ಹೊಸ ಇತಿಹಾಸವನ್ನು ಬಿಜೆಪಿ ರಾಜ್ಯದಲ್ಲಿ ಸೃಷ್ಟಿಸಲಿದೆ ಎಂದು ರಾಜ್ಯಾಧ್ಯಕ್ಷನಾಗಿ ವಿಶ್ವಾಸ ಹೊಂದಿರುವುದಾಗಿ ತಿಳಿಸಿದರು. ಹಿಂದೆ ಬಾರದಂಥ ಅತ್ಯುತ್ತಮ ಫಲಿತಾಂಶದ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದು ನುಡಿದರು.
ಬಿಜೆಪಿ ಪರ ವಾತಾವರಣ ಇದೆ:ರಾಜ್ಯದಲ್ಲಿ ಈಗ ಎಲ್ಲ ಕ್ಷೇತ್ರಗಳಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿ ಪರ ವಾತಾವರಣ ಇದೆ ಎಂದು ಕೇಂದ್ರದ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯೇ ಉತ್ತಮ ಮತ್ತು ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಬರಬೇಕೆಂಬ ತೀರ್ಮಾನಕ್ಕೆ ಜನರು ಬಂದಿದ್ದಾರೆ ಎಂದು ವಿಶ್ಲೇಷಿಸಿದರು. ನಿಮ್ಮ ಎಲ್ಲ ಪ್ರಶ್ನೆಗಳಿಗೆ ಮೂರ್ನಾಲ್ಕು ದಿನಗಳಲ್ಲಿ ಉತ್ತರ ಲಭಿಸಲಿದೆ ಎಂದು ಅವರು ಹೇಳಿದರು.
ಬೆಂಗಳೂರಿನಲ್ಲಿ ಮನುಷ್ಯರೇ ಇಲ್ಲವೇ:ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡವಳಿಕೆಯನ್ನು ಖಂಡಿಸುವುದಾಗಿ ತಿಳಿಸಿದ ಅವರು, ಬೆಂಗಳೂರಿನಲ್ಲಿ 15- 20 ದಿನಗಳಿಂದ ನೀರಿನ ತೀವ್ರ ಸಮಸ್ಯೆ ಇದೆ. ಇದರ ನಡುವೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ 14ಕ್ಕೂ ಹೆಚ್ಚು ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಅದರ ಅರ್ಥ ಏನು? ಬೆಂಗಳೂರಿನಲ್ಲಿ ಮನುಷ್ಯರೇ ಇಲ್ಲವೇ ಎಂದು ಕೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
