ಬೆಂಗಳೂರು:ಯಶವಂತಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ. ಎರಡು ವರ್ಷಗಳ ಕೋವಿಡ್​ ನಡುವೆಯೂ ಕ್ಷೇತ್ರದಲ್ಲಿ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಪ್ರತಿನಿತ್ಯ ಕ್ಷೇತ್ರದ ಜನತೆ ಜೊತೆ ನಿಂತು ಕೆಲಸ ಮಾಡುವ ನನ್ನ ಪರ ಮತದಾರರ ಒಲವಿದೆಯೇ ಹೊರತು 5 ವರ್ಷಕ್ಕೆ ಅಳುತ್ತ ಬರುವ ವ್ಯಕ್ತಿಗಲ್ಲ ಎಂದು ಸಹಕಾರ ಸಚಿವರು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್​.ಟಿ. ಸೋಮಶೇಖರ್​ ಅವರು ಹೇಳಿದರು.
ಕೇಂಗೆರಿಯಲ್ಲಿ ಹಮ್ಮಿಕೊಂಡಿದ್ದ ರೋಡ್​ ಶೋ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ನನ್ನನ್ನು ಆಯ್ಕೆ ಮಾಡಿ ಕಳುಹಿಸಿದ ಜನರ ಋಣ ತೀರಿಸುವ ಕೆಲಸ ಮಾಡಿದ್ದೇನೆ. ಶೇ.80 ರಷ್ಟು ಕಾಮಗಾರಿ ಮುಕ್ತಾಯವಾಗಿದ್ದು ಕೆಲವೇ ಕಾಮಗಾರಿ ಬಾಕಿಯಿದೆ. ಕೋವಿಡ್​ ಇರದಿದ್ದರೆ ಎಲ್ಲವೂ ಸುಸೂತ್ರವಾಗಿ ನೆರವೇರುತ್ತಿತ್ತು ಎಂದರು.
ಇದನ್ನೂ ಓದಿ:ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ. ರವಿ ಟಾರ್ಗೆಟ್; ಬಿಜೆಪಿ ವಿರುದ್ಧ ಒಗ್ಗಟ್ಟಿನ ಮಂತ್ರ, ಗೆಲ್ಲುವ ತಂತ್ರ
ಯಶವಂತಪುರದ ಜನತೆ ಯಾರು ಕೆಲಸ ಮಾಡುತ್ತಾರೆ? ಕಷ್ಟಕ್ಕೆ ಯಾರು ಸ್ಪಂದಿಸುತ್ತಾರೆ? ಎಂಬುದನ್ನು ಗಮನಿಸಿ ಮತ ನೀಡುತ್ತಾರೆ. ಕೇವಲ ಕಣ್ಣೀರು ಹಾಕಿದಾಕ್ಷಣ ಮತದಾರರು ಕರಗುವುದಿಲ್ಲ. ಅವರು ಬುದ್ಧಿವಂತರಿದ್ದಾರೆ ಎಂದರು.
ಜೆಡಿಎಸ್​ ಅಭ್ಯರ್ಥಿ ಐದು ವರ್ಷದಲ್ಲಿ ಕೇವಲ ಎರಡು ತಿಂಗಳು ಮಾತ್ರ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಅದೂ ಚುನಾವಣೆ ಘೋಷಣೆಯಾಗುವಾಗ. ಉಳಿದ ದಿನಗಳಲ್ಲಿ ಕ್ಷೇತ್ರದ ಜನರು ನೆನಪಾಗುವುದಿಲ್ಲವೇ? ಎಂದು ಪ್ರಶ್ನಿಸಿದರು.
ಚುನಾವಣೆಯಲ್ಲಿ ಸೋಲು ಗೆಲುವ ಸಾಮಾನ್ಯ. ಸೋತಾಕ್ಷಣ ಕ್ಷೇತ್ರದಲ್ಲಿ ಕಣ್ಮರೆಯಾಗಿ ಈಗ ಬಂದು ಕಣ್ಣೀರು ಹಾಕಿದರೆ ಜನ ಕರಗುತ್ತಾರೆಯೇ? ಕೋವಿಡ್​ ಸಮಯದಲ್ಲಿ ಜನ ಕಣ್ಣೀರು ಹಾಕುವಾಗ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಅಭಿವೃದ್ಧಿಗಾಗಿ ಮತ ನೀಡಿ: ಮಂಜುಳಾ ಲಿಂಬಾವಳಿ ಮನವಿ
ನೀರಿನ ಸಮಸ್ಯೆ ನಿವಾರಣೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಒಳಚರಂಡಿ ಕಾಮಗಾರಿ ಬಹುತೇಕ ಮುಕ್ತಾಯವಾಗಿದೆ. ಮೂಲ ಸೌಕರ್ಯ ಕಲ್ಪಿಸಲಾಗಿದೆ. ಕೋವಿಡ್​ ಸಮಯದಲ್ಲಿ ಜನರ ಕಷ್ಟಕ್ಕೆ ಸ್ಪಂದಿಸಿದ್ದೇನೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕೆಂದು ಸ್ತ್ರೀಶಕ್ತಿ ಸಂಘಗಳನ್ನು ಉಚಿತವಾಗಿ ನೋಂದಾಯಿಸಿ, ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಜೆಡಿಎಸ್​ ಅಭ್ಯರ್ಥಿ ಯಾವುದಾದರೂ ಒಂದೇ ಒಂದು ಅಭಿವೃದ್ಧಿ ಕಾರ್ಯ ಮಾಡಿದ್ದರೆ ತಿಳಿಸಿ ಎಂದು ಪ್ರಶ್ನಿಸಿದರು.
ಸಂಸದರಾದ ಡಿ.ವಿ.ಸದಾನಂದಗೌಡ, ರಾಜಸ್ಥಾನದ ಶಾಸಕರಾದ ಅವಿನಾಶ್​ ಗೆಹ್ಲೋಟ್​, ಜಾರ್ಖಂಡ್​ ಶಾಸಕರಾದ ಮನೀಶ್​ ಜೈಸ್ವಾಲ್​ ಸೇರಿದಂತೆ ನಗರ, ಗ್ರಾಮಾಂತರ ಮಂಡಲದ ಅಧ್ಯಕ್ಷರು ಜೊತೆಯಲ್ಲಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 14 =
Remember me
