ಬೆಂಗಳೂರು:ಕೇಂದ್ರ ಗೃಹಸಚಿವ ಅಮಿತ್ ಷಾ ನೇತೃತ್ವದಲ್ಲಿ ಬಿಜೆಪಿ ಕೋರ್​ ಕಮಿಟಿ ಸಭೆ ನಡೆದಿದ್ದು, ಇದೀಗ ಕೆಲವು ನಿಮಿಷಗಳ ಮೊದಲು ಸಭೆ ಮುಕ್ತಾಯಗೊಂಡಿದೆ. ಈ ಸಭೆಯಲ್ಲಿ ಭಾಗವಹಿಸಿದ ಷಾ ದೆಹಲಿಯತ್ತ ನಿರ್ಗಮಿಸಿದ್ದಾರೆ. ಅದರ ಬೆನ್ನಿಗೇ ಇತ್ತ ಸಿ.ಟಿ. ರವಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಈಗಾಗಲೇ 26 ಜಿಲ್ಲೆಗಳಲ್ಲಿ ಫಲಾನುಭವಿಗಳ ಸಮಾವೇಶ ಆಗಿದೆ, ಏಳು ಜಿಲ್ಲೆಗಳಲ್ಲಿ ವಿಜಯ ಸಂಕಲ್ಪ ಯಾತ್ರೆ ಬಾಕಿ ಇದೆ. ಅದಾಗ್ಯೂ ಕಳೆದ ಕೆಲ ತಿಂಗಳ ಸಂಘಟನೆ ಪರಿಣಾಮ ನಮ್ಮ ಪರ ಅಲೆ ಇದ್ದು, ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಕಾರ್ಯಕರ್ತರಲ್ಲಿ ಉತ್ಸಾಹ ಇದೆ, ನಾವು ಗೆಲ್ಲೋದು ನಿಶ್ಚಿತ ಎಂದು ಸಿ.ಟಿ.ರವಿ ಹೇಳಿದ್ದಾರೆ.
ಇದನ್ನೂ ಓದಿ:ಆನ್​ಲೈನ್​ನಲ್ಲಿ ಐಫೋನ್​ ಬುಕ್​ ಮಾಡಿದ್ರೆ ಬಂದಿದ್ದು ನಿರ್ಮಾ ಸೋಪ್​!; ಮುಂದೇನಾಯ್ತು?
ಎಸ್​ಸಿ-ಎಸ್​ಟಿ ಮೀಸಲಾತಿ ಕೊಟ್ಟಿದ್ದೆವು, ಇದರಿಂದ ಕಾಂಗ್ರೆಸ್‌ನವರ‌ ಉತ್ಸಾಹ ಕಮರಿ ಹೋಗಿತ್ತು. ಈಗ ಲಿಂಗಾಯತ, ಒಕ್ಕಲಿಗ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿದ್ದೇವೆ. ಇದರಿಂದ ಕಾಂಗ್ರೆಸ್‌ನವರಿಗೆ ಮರ್ಮಾಘಾತ ಆಗಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ:ಚುನಾವಣೆಗೆ ನಿಲ್ಲುವವರಿಗೂ ಇಲ್ಲಿ 5 ಲಕ್ಷ ರೂ. ಕೊಡ್ತಾರೆ!; ಷರತ್ತುಗಳೇನು?
ಅಮಿತ್ ಷಾ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ, ಸಿ.ಟಿ.ರವಿ, ಗೋವಿಂದ ಕಾರಜೋಳ, ಡಾ.ಕೆ.ಸುಧಾಕರ್, ಶೋಭಾ ಕರಂದ್ಲಾಜೆ, ಈಶ್ವರಪ್ಪ, ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಚುನಾವಣಾ ಸಹ ಉಸ್ತುವಾರಿಗಳಾದ ಮನ್​ಸುಖ್ ಮಾಂಡವೀಯ, ಅಣ್ಣಾಮಲೈ, ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಮುಂತಾದವರು ಭಾಗಿಯಾಗಿದ್ದರು.
ಪ್ಯಾನ್-ಆಧಾರ್ ಲಿಂಕ್​, ಮಾ. 31 ಕಡೇ ದಿನ: ಸ್ಟೇಟಸ್​ ಚೆಕ್ ಮಾಡಿಕೊಳ್ಳುವುದು ಹೇಗೆ?

ಬಾಯ್ಬಿಟ್ಟು ಕೆಟ್ಟಳು ಕಿಡ್ನ್ಯಾಪ್ ಮಾಡಿದ್ದ ಮಹಿಳೆ; ಸಿಕ್ಕಿ ಹಾಕಿಕೊಳ್ಳುವಂತೆ ಮಾಡಿತು ‘ಹಾಲು-ಉಪ್ಪಿಟ್ಟು’!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − one =
Remember me
