ಧಾರವಾಡ:ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ವೀಣಾ ಭರದ್ವಾಡ ಆಯ್ಕೆಯಾದರು. ನೂತನ ಮೇಯರ್​ಗೆ ಸಂಸದ ಪಲ್ಹಾದ್ ಜೋಶಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಶುಭ ಹಾರೈಸುತ್ತಿದ್ದಾರೆ.
ಹು-ಧಾ ಮೇಯರ್ ಆಗಿ ಆಯ್ಕೆಗೊಂಡ ಬಳಿಕ ವೀಣಾ ಭರದ್ವಾಡ ದಿಗ್ವಿಜಯ ನ್ಯೂಸ್​ನೊಂದಿಗೆ ಮಾತನಾಡುತ್ತಾ, ಮೇಯರ್ ಆಗಿ ನನ್ನನ್ನು ಆಯ್ಕೆ ಮಾಡಿರುವುದು ತುಂಬಾ ಸಂತಸ ತಂದಿದೆ. ಅವಳಿ ನಗರದ ಜನತೆ ನಮ್ಮಿಂದ ಸಾಕಷ್ಟು ಅಭಿವೃದ್ದಿ ನಿರೀಕ್ಷೆ ಮಾಡಿದ್ದು, ಉತ್ತಮ ಆಭಿವೃದ್ಧಿ ನಿರೀಕ್ಷೆ ಮಾಡಿದ್ದಾರೆ. ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಸಾಕಷ್ಟು ಸವಾಲುಗಳಿವೆ. ಪ್ರಮುಖವಾಗಿ ಅಭಿವೃದ್ದಿ ಕಾರ್ಯಗಳತ್ತ ಗಮನ ಹರಿಸುತ್ತೇನೆ. ಕುಂಠಿತಗೊಂಡ ಅಭಿವೃದ್ದಿ ಕಾರ್ಯಗಳು ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹೇಳಿದರು.
ರಾಜ್ಯದ ಎರಡನೇಯ ಬೃಹತ್ ಮಹಾನಗರ ಪಾಲಿಕೆಯಾದ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ 22ನೇಯ ಮಹಾಪೌರರಾಗಿ ಚುನಾಯಿತರಾದ ಶ್ರೀಮತಿ ವೀಣಾ ಚೇತನ್ ಬರದ್ವಾಡಹಾಗೂ ಉಪಮಹಾಪೌರರಾಗಿ ಚುನಾಯಿತರಾದ ಶ್ರೀ ಸತೀಶ್ ಸುರೇಂದ್ರ ಹಾನಗಲ್ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.pic.twitter.com/7ovmgeaNnl— Pralhad Joshi (@JoshiPralhad)June 20, 2023
ರಾಜ್ಯದ ಎರಡನೇಯ ಬೃಹತ್ ಮಹಾನಗರ ಪಾಲಿಕೆಯಾದ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ 22ನೇಯ ಮಹಾಪೌರರಾಗಿ ಚುನಾಯಿತರಾದ ಶ್ರೀಮತಿ ವೀಣಾ ಚೇತನ್ ಬರದ್ವಾಡಹಾಗೂ ಉಪಮಹಾಪೌರರಾಗಿ ಚುನಾಯಿತರಾದ ಶ್ರೀ ಸತೀಶ್ ಸುರೇಂದ್ರ ಹಾನಗಲ್ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.pic.twitter.com/7ovmgeaNnl
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಒಟ್ಟು 82 ಸದಸ್ಯರ ಬಲ ಹೊಂದಿದ್ದು, ಅಧಿಕಾರ ಪಡೆದುಕೊಳ್ಳಲು 46 ಸಂಖ್ಯಾಬಲ ಬೇಕಿತ್ತು. ಬಿಜೆಪಿ ಕಾರ್ಪೊರೇಟರ್​ಗಳ ಸಂಖ್ಯೆ 39 ಇದ್ದು, ಕಾಂಗ್ರೆಸ್​​​​ 33, ಪಕ್ಷೇತರ 6, AIMIM 3, ಜೆಡಿಎಸ್ 1 ಸ್ಥಾನ ಹೊಂದಿದೆ. ಇನ್ನು 8 ಜನಪ್ರತಿನಿಧಿಗಳು, 4 ಶಾಸಕರು, 1 ಸಂಸದ, 3 ಎಂಎಲ್​ಸಿ ಪಾಲಿಕೆ ವ್ಯಾಪ್ತಿಯ ಜನಪ್ರತಿನಿಧಿಗಳು ಸೇರಿಸಿ ಒಟ್ಟು 90 ಮತಗಳಿದ್ದವು.
ಬಿಜೆಪಿ ಮೇಯರ್ ಅಭ್ಯರ್ಥಿ ಪರ 46 ಮತಗಳು ಚಲಾವಣೆಯಾಗಿದ್ದರೆ, ಕಾಂಗ್ರೆಸ್​ನ ಸುವರ್ಣ ಅವರು 37 ಮತ ಪಡೆಯುವುರೊಂದಿಗೆ ಸೋಲು ಕಂಡರು. ಇದರೊಂದಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ಪಾಲಾಗಿದೆ. ಸತೀಶ ಹಾನಗಲ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಅವಳಿನಗರದ ಜನತೆಗೆ ನಮ್ಮ ಆಡಳಿತದ ಮೇಲೆ ಅಪಾರ ವಿಶ್ವಾಸ ಹಾಗೂ ನಂಬಿಕೆ ಇದೆ. ಅವರ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಬೇಕಿದೆ. ಸಾರ್ವಜನಿಕರ ನಿರೀಕ್ಷೆಗಳನ್ನು ಪೂರೈಸಲು ತಮ್ಮನ್ನು ತಾವು ಸಮರ್ಪಿಸಿಕೊಳ್ಳಲಿದ್ದೀರಿ ಎಂಬ ನಂಬಿಕೆ ಇದೆ. ಅತ್ಯಂತ ಯಶಸ್ವಿ ಅವಧಿ ನಿಮ್ಮದಾಗಿಲಿ ನೂತನ ಮೇಯರ್ ಹಾಗೂ ಉಪಮೇಯರ್​ಗೆ ಸಂಸದ ಪ್ರಲ್ಹಾದ ಜೋಶಿ ಹಾರೈಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 14 =
Remember me
