ವಿಜಯಪುರ:ವಿಜಯಪುರದ ಹಳ್ಳಿಯೊಂದಕ್ಕೆ ಭೇಟಿ ನೀಡಿದ್ದ ಬಿಜೆಪಿ ಶಾಸಕರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಆರೆಶಂಕರ ಗ್ರಾಮದಲ್ಲಿ ಘಟನೆ ನಡೆದಿದ್ದು ದೇವರ ಹಿಪ್ಪರಗಿಯ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರಗೆ ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ಉಂಟಾಗಿದೆ.
ದೇವರ ಹಿಪ್ಪರಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಆರೆಶಂಕರ ಗ್ರಾಮದ ಅಭಿವೃದ್ಧಿ ವಿಚಾರವಾಗಿ ಸಿಟ್ಟಾಗಿದ್ದ ಕೆಲ ಗ್ರಾಮಸ್ಥರು ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಶಾಸಕರನ್ನು ಊರಲ್ಲಿ ಸಿಸಿ ರಸ್ತೆಗಳಾಗಿಲ್ಲ, ಚರಂಡಿ ವ್ಯವಸ್ಥೆ ಸರಿ ಇಲ್ಲ, ಅಭಿವೃದ್ಧಿಗೆ ಬಂದಿದ್ದ ಹಣ ಏನ್ ಮಾಡಿದ್ದೀರಿ ಎಂದು ಪ್ರಶ್ನಿಸುತ್ತಾ ತರಾಟೆಗೆ ತೆಗೆದುಕೊಂಡಿದ್ದಾರೆ. ಆ ಸಂದರ್ಭ ಶಾಸಕರ ಬೆಂಬಲಿಗರ ಜತೆ ಕೆಲ ಗ್ರಾಮಸ್ಥರು ವಾಗ್ವಾದ ನಡೆಸಿದ್ದಾರೆ.
ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳೇ ಆಗಿಲ್ಲ ಎಂದು ಶಾಸಕ ಸೋಮನಗೌಡಗೆ ಜನ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ಸಂದರ್ಭ ತಡೆಯಲು ಬಂದ ಶಾಸಕರ ಬೆಂಬಲಿಗರಿಗೂ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 − five =
Remember me
