ಹಾಸನ:ಹಾಸನ ಭಾಗದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಮರ ಕಡಿದು, ಸಾಗಾಟ ಮಾಡಿದ ಆರೋಪದ ಮೇಲೆ ಬಿಜೆಪಿ ಸಂಸದ ಪ್ರತಾಪ್​ ಸಿಂಹ ಅವರ ಸಹೋದರ ವಿಕ್ರಮ್​ ಸಿಂಹರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸುಮಾರು 126 ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ವಿಕ್ರಮ್​ ಸಿಂಹ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ತಿಂಗಳ ಆರಂಭದಲ್ಲಿ ವಿಕ್ರಮ್ ಸಿಂಹ ಅವರು ಸಂಸತ್ತಿನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳಿಗೆ ವಿಸಿಟರ್​ ಪಾಸ್‌ಗಳನ್ನು ನೀಡಿ ಗಮನ ಸೆಳೆದಿದ್ದರು. ಇದೀಗ ಮರ ಕಳ್ಳಸಾಗಾಣೆ ಪ್ರಕರಣದಲ್ಲಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ಹಾಸನದ ನಂದಗೊಂಡನಹಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ಮರ ಕಡಿದು ಮತ್ತು ಮರದ ಕಳ್ಳಸಾಗಣೆ ಆರೋಪದ ಮೇಲೆ ವಿಕ್ರಮ್ ಸಿಂಹ ವಿರುದ್ಧದ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿತ್ತು. ತಹಸೀಲ್ದಾರ್ ಮಮತಾ ಅವರು ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಕಾರ್ಯಾಚರಣೆ ಬೆಳಕಿಗೆ ಬಂದಿದ್ದು, ಕೂಡಲೇ ಅಧಿಕಾರಿಗಳನ್ನು ಎಚ್ಚರಿಸಿ ಎಫ್‌ಐಆರ್ ದಾಖಲಿಸಿದ್ದರು.
ಮರಗಳನ್ನು ಕಡಿಯಲಾದ ಅರಣ್ಯ ಪ್ರದೇಶವು ಸರ್ಕಾರಿ ಸ್ವಾಮ್ಯದಲ್ಲಿದ್ದು, 12 ಎಕರೆಗಳಷ್ಟು ವ್ಯಾಪಿಸಿರುವ ಗೋಮಾಳ ಭೂಮಿ (ಜಾನುವಾರು ಹುಲ್ಲುಗಾವಲು) ಅನ್ನು ಇಬ್ಬರು ವ್ಯಕ್ತಿಗಳಿಗೆ ಹಂಚಲಾಗಿತ್ತು. ವಿಕ್ರಮ್ ಸಿಂಹ ಅವರು ಆರಂಭದಲ್ಲಿ ಶುಂಠಿ ಕೃಷಿ ಮಾಡಲು ಒಪ್ಪಿಕೊಂಡಿದ್ದರು ಆದರೆ, ಮರಗಳನ್ನು ಕಡಿಯಲು ಮುಂದಾದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮೊದಲೇ ಹೇಳಿಕೆ ನೀಡಿದ್ದರು.
ಎಪಿ ವಸತಿ ಯೋಜನೆಯಲ್ಲಿ ಭಾರಿ ಅಕ್ರಮ: ಸಿಬಿಐ ತನಿಖೆ ನಡೆಸಲು ಪ್ರಧಾನಿ ಮೋದಿಗೆ ಪವನ್ ಕಲ್ಯಾಣ್ ಪತ್ರ..

ಮಲೈಕಾ ಅರೋರಾ ಮತ್ತೆ ಮದುವೆಯಾಗುತ್ತಾರಾ?: ಈ ಪ್ರಶ್ನೆಗೆ ನಟಿ ಕೊಟ್ಟ ಉತ್ತರ ಕೇಳಿ ಫ್ಯಾನ್ಸ್‌ ಶಾಕ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 7 =
Remember me
