ಬೆಂಗಳೂರು:ಪ್ರಧಾನಿ ಮೋದಿ ಅವಧಿಯಲ್ಲೇ ತೈಲ ಬೆಲೆ ಅತಿ ಹೆಚ್ಚು ಏರಿಕೆಯಾದರೂ ತೆಪ್ಪಗಿದ್ದ ಬಿಜೆಪಿಯ ಅಶೋಕ್ ಮತ್ತು ವಿಜಯೇಂದ್ರ ಗ್ಯಾಂಗ್ ಈಗ ಪ್ರತಿಭಟಿಸುತ್ತಿರುವುದು ಬರೀ ನಾಟಕ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಎದಿರೇಟು ನೀಡಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಾವು ಕೇವಲ ಮೂರು ರೂ. ಏರಿಸಿದ್ದೇವೆ ಅಷ್ಟೇ. ಮೋದಿ ಅಧಿಕಾರಕ್ಕೆ ಬಂದ ನಂತರ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕ್ರಮವಾಗಿ 400, 38 ಮತ್ತು 35 ರೂ. ದುಬಾರಿ ಆಗಿದೆ. ಆಗ ಏಕೆ ತೆಪ್ಪಗಿದ್ದರು ಎಂದು ಪ್ರಶ್ನಿಸಿದರು.
ಬಿಜೆಪಿ ಅಧಿಕಾರದಲ್ಲಿ ಇರುವ ಮಹಾರಾಷ್ಟ್ರ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಮಗಿಂತ ಜಾಸ್ತಿ ಇದೆ. ಬಿಜೆಪಿ ಅಲ್ಲೇಕೆ ಪ್ರತಿಭಟಿಸುತ್ತಿಲ್ಲ ಎಂದು ಕೆಣಕಿದರು.
ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಈಗಿನ ಬೆಲೆ ಏರಿಕೆಗೂ ಸಂಬಂಧ ಇಲ್ಲ. ಜತೆಗೆ ನಾವು ಕೊಟ್ಟಿರುವ ಗ್ಯಾರಂಟಿಗಳು ಕೂಡ ನಿಲ್ಲುವುದಿಲ್ಲ. ಅವುಗಳ ಜತೆಯಲ್ಲೇ ನಾವು ಅಭಿವೃದ್ಧಿ ಕೂಡ ಸಾಧಿಸುತ್ತೇವೆ ಎಂದು ಪ್ರತಿಪಾದಿಸಿದರು.
ಹತ್ತು ವರ್ಷಗಳಲ್ಲಿ ಕಚ್ಚಾ ತೈಲದ ಬೆಲೆ ಸಾಕಷ್ಟು ಇಳಿದಿದೆ. ಆದರೆ ಮೋದಿ ಸರ್ಕಾರ ಮಾತ್ರ ತೈಲೋತ್ಪನ್ನಗಳ ಬೆಲೆಯನ್ನು ಒಮ್ಮೆ ಕೂಡ ಇಳಿಸಿಲ್ಲ. ಆದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ , ಡೀಸೆಲ್ ಮತ್ತು ಎಲ್ಪಿಜಿ ಬೆಲೆ ಜನರ ಕೈಗೆ ಎಟುಕುವಂತಿತ್ತು ಎಂದು ಹೇಳಿದರು.ನಾವೀಗ ಕೇವಲ ಮೂರು ರೂಪಾಯಿ ಮಾತ್ರ ಏರಿಸಿದ್ದೇವೆ. ಆದರೆ ಮೋದಿ ಮತ್ತು ಬಿಜೆಪಿ ನೀತಿಗಳಿಂದ ಜನರ ಜೀವನ ದುಬಾರಿಯಾಗಿದೆ. ಇದು ವಾಸ್ತವ ಸಂಗತಿ. ಬಿಜೆಪಿ ನಾಯಕರು ಮೊದಲು ಇದರ ವಿರುದ್ಧ ದನಿ ಎತ್ತುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹದಿನೈದು ಸಲ ಬಜೆಟ್ ಮಂಡಿಸಿದ್ದಾರೆ. ಅವರ ಅರ್ಥಿಕ ಜ್ಞಾನದ ಬಗ್ಗೆ ಜನರಿಗೆ ಚೆನ್ನಾಗಿ ತಿಳಿದಿದೆ. ರಾಜ್ಯದ ಬೊಕ್ಕಸವನ್ನು ಹೇಗೆ ತುಂಬಬೇಕು ಎಂಬುದನ್ನು ಅವರು ಬಲ್ಲರು ಎಂದು ಪಾಟೀಲ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 11 =
Remember me
