ಬೆಂಗಳೂರು:ಬಿಜೆಪಿ ಕಾಲದ‌ ಹಗರಣಗಳು ಎಂದು ಈಗ ಹೇಳುತ್ತಿದ್ದಾರೆ. ಒಂದೂವರೆ ವರ್ಷ ಈ ಸರ್ಕಾರದ ಕೈ ಕಟ್ಟಿ ಹಾಕಿದವರು ಯಾರು? ರಾಜೀ ರಾಜಕೀಯಕ್ಕಾಗಿ ಸಿಎಂ ಸಿದ್ದರಾಮಯ್ಯಸುಮ್ಮನಿದ್ದರೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದರು.
ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಂಗಳವಾರ ಮಾತನಾಡಿದ ಅವರು, ವಿಪಕ್ಷ ನಾಯಕರಾಗಿದ್ದಾಗ ಬಿಜೆಪಿ ಸರಕಾರದ ವಿರುದ್ಧ 40ಪರ್ಸೆಂಟ್ ಕಮಿಷನ್ ಸರ್ಕಾರವೆಂದು ಸಿದ್ದರಾಮಯ್ಯ ಆರೋಪ ಮಾಡಿದ್ದರು. ಒಂದೂವರೆ ವರ್ಷ ಆಗಿದೆ. ಶೇ 40ರ ಕುರಿತು ಯಾರ ಮೇಲೆ ಎಫ್‌ಐಆರ್ ಹಾಕಿದ್ದಾರೆ ?. ಆಗ ಅವರು ಸುಳ್ಳು ಆರೋಪ ಮಾಡಿದ್ದರು. ಈಗಲೂ ನಮ್ಮ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ವಿಷಯಾಂತರ ಮಾಡಲು, ಜನರಲ್ಲಿ ಗೊಂದಲ ಮೂಡಿಸಲು, ಅವರ ಮೇಲೆ ಆರೋಪ ಬಂದಾಕ್ಷಣ ಇನ್ನೊಬ್ಬರ ಕಡೆ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ. ತಮ್ಮ ಮೇಲಿನ ಆರೋಪಕ್ಕೆ ಉತ್ತರಿಸುವ ಬದಲಾಗಿ ಬ್ಲ್ಯಾಕ್ ಮೇಲ್ ಪಾಲಿಟಿಕ್ಸ್ ಶುರು ಮಾಡಿದ್ದಾರೆ. ಸಿಎಂ ಹತಾಶರಾಗಿರುವುದು ಎತ್ತಿ ತೋರಿಸುತ್ತದೆ ಎಂದರು.
ಬಿಜೆಪಿ ಕಾಲದಲ್ಲಿನ ಆರೋಪಗಳ ತನಿಖೆ ಕುರಿತ ಮುಖ್ಯಮಂತ್ರಿಗಳ ಹೇಳಿಕೆ ಕುರಿತು ಗಮನ ಸೆಳೆದಾಗ ಅವರು ಈ ಉತ್ತರ ನೀಡಿದರು. ನಾವೇನಾದರೂ ಮಾಡ್ತೀವಿ; ನೀವು ಕೇಳಬೇಡಿ. ನೀವು ಮಾಡಿದರೆ ನಾವು ಕೇಳಲ್ಲ ಎಂಬ ರಾಜೀ ರಾಜಕಾರಣಕ್ಕಾಗಿ ಕಾಂಗ್ರೆಸ್ಸಿನವರು ಸುಮ್ಮನಿದ್ದರೇ ಎಂದು ಸಿ.ಟಿ.ರವಿ ಕೇಳಿದರು.
ಮುಖ್ಯಮಂತ್ರಿಗಳು ತಾವೊಬ್ಬ ಮುಖ್ಯಮಂತ್ರಿ ಎಂಬುದನ್ನು ಮರೆತು ಹೇಳಿಕೆ ಕೊಟ್ಟಂತೆ ಕಾಣುತ್ತಿದೆ. ಬಹಳ ಹತಾಶರಾಗಿ (ಅಪ್‌ಸೆಟ್) ಹೇಳಿಕೆ ಕೊಟ್ಟಂತಿದೆ. ವಾಸ್ತವವಾದಿಯಾಗಿ ಯೋಚಿಸುವುದಕ್ಕಿಂತಲೂ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಮೇಲ್ನೋಟಕ್ಕೆ ಅವರ ವಿರುದ್ಧ ಇದೆ, ಮೆರಿಟ್ ಇಲ್ಲ ಎಂದು ಅನಿಸಿದಾಗ ಇಮೋಷನಲ್ ಕಾರ್ಡ್ ಅನ್ನು ಬಹಳ ಜನ ಬಳಸುತ್ತಾರೆ ಎಂದರು.
ಭ್ರಷ್ಟಾಚಾರ ಮುಚ್ಚಿ ಹಾಕಲು ಅವರಿಗೆ ಜಾತಿ ಬೇಕಾಗಿದೆ ಎಂದು ಟೀಕಿಸಿದರು. ತಿಂದಿರುವವರು ಇವರು; ಸಪೋರ್ಟಿಗೆ ಜಾತಿ ಬೇಕಾಗಿದೆ. ತಿಂದವರು ಇವರೇ; ಜಾತಿಯವರಿಗೇನೂ ತಿನಿಸಿಲ್ಲ ಎಂದು ವ್ಯಂಗ್ಯವಾಗಿ ಹೇಳಿದರು. ಎಮೋಷನಲ್ ಕಾರ್ಡ್ ಬಳಸುತ್ತಿದ್ದಾರೆ. ಅವರು ವಿಪಕ್ಷದ ನಾಯಕನಲ್ಲ ಎಂದು ತಿಳಿಸಿದರು.
ರಾಜಿ ರಾಜಕಾರಣ ಮಾಡುವವರು ಎಲ್ಲ ಕಡೆ ಸಲ್ಲುತ್ತಾರೆ..ಹೊಂದಾಣಿಕೆ ರಾಜಕಾರಣವು ರಾಜ್ಯ ಮತ್ತು ಪಕ್ಷದ ಹಿತ ಎರಡನ್ನೂ ಕೂಡ ಹಾಳುಮಾಡಿದೆ. ಪ್ರಾಮಾಣಿಕವಾಗಿ ಪಾರ್ಟಿ ಪಾರ್ಟಿ ಎಂದು ಯಾರು ಹೊಡೆದಾಡುತ್ತಾರೋ ಅವರು ಬಲಿಪಶು ಆಗುತ್ತಾರೆ. ರಾಜಿ ರಾಜಕಾರಣ ಮಾಡುವವರು ಎಲ್ಲ ಕಡೆ ಸಲ್ಲುತ್ತಾರೆ ಎಂದು ಗೂಡಾರ್ಥದಲ್ಲಿ ಹೇಳಿದರು.
ಕೆಂಪಣ್ಣ ಆಯೋಗದ ವರದಿ ಮಂಡಿಸಬೇಕು ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಕಪ್ಪುಚುಕ್ಕಿ ಇಲ್ಲದ 40 ವರ್ಷಗಳ ರಾಜಕಾರಣ ನಿಮ್ಮದಲ್ಲವೇ? ಆ ಆಯೋಗದ ಕೊಟ್ಟ ಅಭಿಪ್ರಾಯ, ಶಿಫಾರಸುಗಳ ಬಗ್ಗೆ ನೀವು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು.
ಪಾದಯಾತ್ರೆಯಿಂದ ರಾಜಕೀಯ- ವೈಯಕ್ತಿಕ ಆರೋಗ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಇಡೀ ರಾಜ್ಯದ ಕಾರ್ಯಕರ್ತರು ಉತ್ಸಾಹದಿಂದ ಬೆಂಗಳೂರು- ಮೈಸೂರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು ಎಂದರು.
ನಮ್ಮ ಪಕ್ಷದ ಪಾದಯಾತ್ರೆಯಿಂದ ಭಯಗೊಂಡ ಕಾಂಗ್ರೆಸ್ ಪಕ್ಷ, ಭ್ರಷ್ಟಾಚಾರದ ಸಮರ್ಥನೆಗೆ ದೆಹಲಿ ನಾಯಕರು ಓಡಿ ಬಂದು ನಿಲ್ಲುವ ಪರಿಸ್ಥಿತಿ ಬಂದಿತ್ತು ಎಂದು ಸಿ.ಟಿ.ರವಿ ವಿಶ್ಲೇಷಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
