ಬೆಂಗಳೂರು:ಟ್ರಾಫಿಕ್​ ಜಾಮ್​ನಲ್ಲಿ ಕಾರು ಸಿಲುಕಿಕೊಂಡಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬಿಟ್ಟು ಪರಾರಿಯಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆ. 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪರಾರಿಯಾದವನ ಹೆಸರು ವಿಜಯ್​ ಜಾರ್ಜ್​. ಮಾಜಿ ಪ್ರೇಯಸಿಯ ಬೆದರಿಕೆಗೆ ಹೆದರಿ ಪತ್ನಿಯನ್ನು ಬಿಟ್ಟು ಓಡಿದ್ದಾನೆಂದು ತಿಳಿದುಬಂದಿದೆ. ಮದುವೆ ನಡೆದ ಮರುದಿನವೇ ಈ ಘಟನೆ ಮಹದೇವಪುರದಲ್ಲಿ ನಡೆದಿದೆ. ಮದುವೆ ಮುಗಿಸಿ ಚರ್ಚ್​ನಿಂದ ಮನೆಗೆ ಮರಳುತ್ತಿದ್ದರು. ಈ ವೇಳೆ ಕಾರು ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡಿತು. ಈ ವೇಳೆ ಕಾರಿನಿಂದ ಕೆಳಗೆ ಇಳಿದು ಜಾರ್ಜ್​ ಎಸ್ಕೇಪ್​ ಆಗಿದ್ದು, ಆತನಿಗಾಗಿ ಪೊಲೀಸರು ಕಳೆದ ಎರಡು ವಾರಗಳಿಂದ ಹುಡುಕಾಟ ನಡೆಸುತ್ತಿದ್ದಾರೆ.
ವಿಜಯ್​, ಈ ಹಿಂದೆ ಮಹಿಳೆಯೊಬ್ಬಳ ಜೊತೆ ಸಂಬಂಧ ಇಟ್ಟುಕೊಂಡಿದ್ದ. ತನ್ನ ತಂದೆಯ ಕಂಪನಿಯಲ್ಲಿ ಕೆಲಸ ಮಾಡುವ ಆಟೋ ಚಾಲಕನ ಪತ್ನಿಯೊಂದಿಗಿ ಜಾರ್ಜ್​, ಲವ್ವಿಡವ್ವಿ ಇಟ್ಟುಕೊಂಡಿದ್ದ. ಮಹಿಳೆ ಇಬ್ಬರು ಮಕ್ಕಳಿದ್ದು ಅದೇ ಕಂಪನಿಯಲ್ಲಿ ಕ್ಲರ್ಕ್​ ಆಗಿ ಕೆಲಸ ಮಾಡುತ್ತಿದ್ದಳು.
ಇದನ್ನೂ ಓದಿ:1.5 ಕೆಜಿ ಚಿನ್ನವನ್ನು ಕಳ್ಳ ಸಾಗಾಣಿಕೆ​ ಮಾಡಲು ಯತ್ನಿಸಿದ ಏರ್ ಇಂಡಿಯಾ ಸಿಬ್ಬಂದಿ ಅರೆಸ್ಟ್
ಯಾವಾಗ ಇಬ್ಬರ ಬಗ್ಗೆ ಕುಟುಂಬಕ್ಕೆ ತಿಳಿಯಿತೋ ಆಗ ಸಂಬಂಧವನ್ನು ಮುರಿದುಕೊಂಡು ಮದುವೆ ಆಗಲು ಜಾರ್ಜ್​ ನಿರ್ಧಾರ ಮಾಡಿದ. ಮದುವೆಗು ಮುನ್ನ ವಿಜಯ್​, ತನ್ನ ತಪ್ಪನ್ನು ಪತ್ನಿಯ ಮುಂದೆ ಹೇಳಿಕೊಂಡಿದ್ದ. ಎಲ್ಲವನ್ನು ಕ್ಷಮಿಸಿ ಆತನನ್ನು ಮದುವೆ ಆಗಿದ್ದಳು. ಆದರೆ, ಬೇರೊಬ್ಬಳನ್ನು ಮದುವೆ ಆದರೆ, ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಹರಿಬಿಡುವುದಾಗಿ ಮಾಜಿ ಪ್ರೇಯಸಿ ಬೆದರಿಸುತ್ತಿದ್ದಳು. ಇದರಿಂದ ಜಾರ್ಜ್​ ತುಂಬಾ ಒತ್ತಡಕ್ಕೆ ಒಳಗಾಗಿದ್ದ.
ಜಾರ್ಜ್​ ಪತ್ನಿ ಘಟನೆಯ ಬಗ್ಗೆ ಮಾತನಾಡಿ, ಚರ್ಚ್​ನಿಂದ ಮನೆಗೆ ಬರುವಾಗ ಕಾರು ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡಿತು. ಈ ವೇಳೆ ಜಾರ್ಜ್​ ಕಾರಿನ ಬಾಗಿಲು ತೆರೆದು ಓಡಿ ಹೋದ. ಇದನ್ನು ನೋಡಿ ನಾನು ಆಘಾತಕ್ಕೆ ಒಳಗಾದೆ. ಆತನನ್ನು ಹಿಂಬಾಲಿಸಲು ಯತ್ನಿಸಿದೆ. ಆದರೆ, ಆತ ಸಿಗಲಿಲ್ಲ. ಆತನ ಪರವಾಗಿ ನಿಲ್ಲುವುದಾಗಿ ನಾನು ಮತ್ತು ನನ್ನ ಕುಟುಂಬದವರು ಭರವಸೆ ನೀಡಿದ್ದೆವು. ಆದರೂ ಆತ ಓಡಿ ಹೋಗಿದ್ದಾನೆ. ಅವರ ಸುರಕ್ಷಿತವಾಗಿದ್ದಾರೆ ಮತ್ತು ಮರಳಿ ಬರುತ್ತಾರೆ ಎಂದು ಭಾವಿಸಿದ್ದೇನೆ ಎಂದು ಜಾರ್ಜ್​ ಪತ್ನಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ.(ಏಜೆನ್ಸೀಸ್​)
ಸಿದ್ದರಾಮಯ್ಯ ಹೈವೆ ವೀಕ್ಷಣೆ ಬರುತ್ತಿಲ್ಲ, ಬರ್ತಿರೋದು ಜಾಲಿ ರೈಡ್​​ಗೆ; ಪ್ರತಾಪ್ ಸಿಂಹ ಟಾಂಗ್​

ಭಾರತದಲ್ಲಿ ಗಳಿಸಿದ ಪದವಿ ಇನ್ನು ಆಸ್ಟ್ರೇಲಿಯಾದಲ್ಲಿ ಮಾನ್ಯ; ವಿದ್ಯಾರ್ಥಿಗಳಿಗೆ ಸ್ಕಾಲರ್​ಶಿಪ್​ ಕೂಡ ಕೊಡ್ತಾರೆ!

ಎಮ್ಮೆನೋ..ಹಸುನೋ.. ಸುಂದರವಾದ ಕರು ಹಾಕಿದ್ರೆ ಸಿದ್ದರಾಮಯ್ಯ ಅದೂ ನನ್ನದು ಅಂತಾರೆ: ಪ್ರಹ್ಲಾದ್ ಜೋಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 18 =
Remember me
